AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HDKಗೆ ಇಮೇಜ್ ಇದ್ದರಲ್ವಾ ಹೋಗೋದಕ್ಕೆ -ಸಿದ್ದರಾಮಯ್ಯ ಟಾಂಗ್​

HDKಗೆ ಇಮೇಜ್ ಇದ್ದರಲ್ವಾ ಹೋಗುವುದಕ್ಕೆ. ಇವರಿಗೆ ಇಮೇಜ್ ಇದ್ದಿದ್ದರೆ 110 ಸೀಟು ಬರಬೇಕಿತ್ತಲ್ವಾ? ನನ್ನ ಇಮೇಜ್ ಹೋಯ್ತು ಅನ್ನುವ HDK ಎಷ್ಟು ಸೀಟು ಗೆದ್ರು ಎಂದು ತಿರುಗೇಟು ನೀಡಿದರು.

HDKಗೆ ಇಮೇಜ್ ಇದ್ದರಲ್ವಾ ಹೋಗೋದಕ್ಕೆ -ಸಿದ್ದರಾಮಯ್ಯ ಟಾಂಗ್​
ಸಿದ್ದರಾಮಯ್ಯ(ಎಡ); H.D.ಕುಮಾರಸ್ವಾಮಿ (ಬಲ)
sandhya thejappa
|

Updated on:Dec 06, 2020 | 5:04 PM

Share

ಬೆಂಗಳೂರು: ನನ್ನ ಗುಡ್​ ವಿಲ್ ಹಾಳು ಮಾಡಿದರೆಂದು ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ತಿರುಗೇಟು ಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ ನಿಮಗೆ ಗುಡ್ ವಿಲ್ ಇದ್ದಿದ್ರೆ, ಬಹಳ ಜನಪ್ರಿಯತೆ ಇದ್ದಿದ್ರೆ  59 ಸೀಟಿನಿಂದ 28 ಕ್ಕೆ ಯಾಕಪ್ಪ ಬಂದ್ರಿ ಎಂದು ಪ್ರಶ್ನಿಸಿದರು.

HDKಗೆ ಇಮೇಜ್ ಇದ್ದರಲ್ವಾ ಹೋಗುವುದಕ್ಕೆ. ಇವರಿಗೆ ಇಮೇಜ್ ಇದ್ದಿದ್ದರೆ 110 ಸೀಟು ಬರಬೇಕಿತ್ತಲ್ವಾ? ನಾನು ಡಿಸಿಎಂ ಆಗಿದ್ದಾಗ ಜೆಡಿಎಸ್ 59 ಸ್ಥಾನ ಗೆದ್ದಿತ್ತು. JDSನಿಂದ ನನ್ನನ್ನ ಹೊರ ಹಾಕಿದಾಗ 28 ಸ್ಥಾನಗಳನ್ನು ಗೆದ್ದರು. ನನ್ನ ಇಮೇಜ್ ಹೋಯ್ತು ಅನ್ನುವ HDK ಎಷ್ಟು ಸೀಟು ಗೆದ್ರು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

ಜೆಡಿಎಸ್​ನ ರಾಜಕೀಯ ವೈರತ್ವ ಇರುವುದು ಕಾಂಗ್ರೆಸ್ ಜೊತೆಗೆ ಮಾತ್ರ. ಯಾವತ್ತೂ ಬಿಜೆಪಿ ಜೊತೆಗೆ ಸಾಫ್ಟ್ ಆಗಿಯೇ ಇರ್ತಾರೆ. ಹಾಗೇ ಬಿಜೆಪಿ ಜತೆ ಹೋಗಿದ್ರೆ ಸಿಎಂ ಆಗಿರುತ್ತಿದ್ದೆ ಅಂತಾ ಹೇಳ್ತಾರೆ. ಅಂದ ಮೇಲೆ ಇವರು ಬಿಜೆಪಿಯ ಬಿ ಟೀಂ ಅಂತಾಯ್ತಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಯವಾಗಿ ತಿರುಗೇಟು ಕೊಟ್ಟರು.

ಹೋಟೆಲ್ ಮಾಲೀಕರಿಗೆ ದಂಡ ವಿಧಿಸುವ ನಿರ್ಧಾರಕ್ಕೆ ಸಿದ್ದು ಕಿಡಿ: ವರ್ಗಾವಣೆಗೆ ಇಷ್ಟು, ಉಪಕರಣಕ್ಕೆ ಇಷ್ಟು ಎಂದು ಅಂಗಡಿ ವಸೂಲಿಗಾಗಿ ಸರ್ಕಾರದವರು ಅಂಗಡಿ ತೆರೆದು ಕುಳಿತಿದ್ದಾರೆ ಎಂದು ಮಾಸ್ಕ್ ಧರಿಸದ ಹೋಟೆಲ್ ಮಾಲೀಕರಿಗೆ ದುಬಾರಿ ದಂಡ ವಿಧಿಸುವ ನಿರ್ಧಾರಕ್ಕೆ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

ಸದನದಲ್ಲಿ ಪ್ರಸ್ತಾಪಿಸುತ್ತೇವೆ: ರಾಜ್ಯದಲ್ಲಿ ಈ ವರ್ಷ ಮೂರು ಬಾರಿ ಪ್ರವಾಹ ಬಂದಿದ್ದೂ, ಆಗಸ್ಟ್​ನಿಂದ‌ ಈವರೆಗೆ ಪರಿಹಾರ ನೀಡಿಲ್ಲ. ಕಳೆದ ಬಾರಿಯ ಪ್ರವಾಹ ಪೀಡಿತರಿಗೂ ಪರಿಹಾರ ನೀಡಿಲ್ಲ. ಇದನ್ನ ಬಹಳ ಗಂಭೀರವಾಗಿ ಸದನದಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಸಭೆ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್ ಪಕ್ಷದವರಿಗೆ ಲಾಕ್ ಮಾಡ್ತಾರೆ ಎಂದ ಸಿದ್ದರಾಮಯ್ಯ: ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆಯುತ್ತಿದೆ. ಮನೆಗಳನ್ನು ಕಟ್ಟುವುದಕ್ಕೆ ಅನುದಾನವನ್ನ ಕೊಟ್ಟಿಲ್ಲ, ಬೇಕಾದವರಿಗೆ ಅನ್​ಲಾಕ್ ಮಾಡಿಕೊಡುತ್ತಾರೆ. ಕಾಂಗ್ರೆಸ್ ಪಕ್ಷದವರಿಗೆ ಲಾಕ್ ಮಾಡ್ತಾರೆ ಎಂದರು.

Published On - 4:43 pm, Sun, 6 December 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ