AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​ಗೆ ಸೇರ್ತು ರಾಜ್ಯದ ಅಣೆಕಟ್ಟೆಗೆ ಹಾಕಿರೋ ಬೋರ್ಡ್.. ಎಲ್ಲಿ?

ವಿಜಯಪುರ: ಕೃಷ್ಣಾ ನದಿಯನ್ನ ಉತ್ತರ ಕರ್ನಾಟಕದ ಜೀವನಾಡಿ ಅಂತಾ ಕರೆಯಬಹುದು. ಇಂತಾ ಕೃಷ್ಣಾ ನದಿಗೆ ಅಡ್ಡಲಾಗಿ ಹಲವಾರು ಅಣೆಕಟ್ಟುಗಳನ್ನ ನಿರ್ಮಿಸಲಾಗಿದೆ. ಇದ್ರಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕಟ್ಟಲಾಗಿರೋ ಲಾಲ್​ ಬಹಾದ್ದೂರ್ ಶಾಸ್ತ್ರಿ ಅಣೆಕಟ್ಟು ಪ್ರಮುಖ ಅಣೆಕಟ್ಟುಗಳಲ್ಲಿ ಒಂದು. 1964 ರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರೀ ಪ್ರಧಾನಿಯಾಗಿದ್ದ ವೇಳೆ ಈ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದ ಕಾರಣಕ್ಕೆ, ಅವರ ಹೆಸರನ್ನೇ ಈ ಅಣೆಕಟ್ಟೆಗೆ ಇಡಲಾಗಿದೆ. ಆದ್ರೆ, ಜನ ಮಾತ್ರ ಇದನ್ನ ಆಲಮಟ್ಟಿ ಡ್ಯಾಂ ಅಂತಲೇ ಕರೀತಾರೆ. […]

ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​ಗೆ ಸೇರ್ತು ರಾಜ್ಯದ ಅಣೆಕಟ್ಟೆಗೆ ಹಾಕಿರೋ ಬೋರ್ಡ್.. ಎಲ್ಲಿ?
ಆಯೇಷಾ ಬಾನು
|

Updated on: Aug 22, 2020 | 7:35 AM

Share

ವಿಜಯಪುರ: ಕೃಷ್ಣಾ ನದಿಯನ್ನ ಉತ್ತರ ಕರ್ನಾಟಕದ ಜೀವನಾಡಿ ಅಂತಾ ಕರೆಯಬಹುದು. ಇಂತಾ ಕೃಷ್ಣಾ ನದಿಗೆ ಅಡ್ಡಲಾಗಿ ಹಲವಾರು ಅಣೆಕಟ್ಟುಗಳನ್ನ ನಿರ್ಮಿಸಲಾಗಿದೆ. ಇದ್ರಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕಟ್ಟಲಾಗಿರೋ ಲಾಲ್​ ಬಹಾದ್ದೂರ್ ಶಾಸ್ತ್ರಿ ಅಣೆಕಟ್ಟು ಪ್ರಮುಖ ಅಣೆಕಟ್ಟುಗಳಲ್ಲಿ ಒಂದು. 1964 ರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರೀ ಪ್ರಧಾನಿಯಾಗಿದ್ದ ವೇಳೆ ಈ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದ ಕಾರಣಕ್ಕೆ, ಅವರ ಹೆಸರನ್ನೇ ಈ ಅಣೆಕಟ್ಟೆಗೆ ಇಡಲಾಗಿದೆ.

ಆದ್ರೆ, ಜನ ಮಾತ್ರ ಇದನ್ನ ಆಲಮಟ್ಟಿ ಡ್ಯಾಂ ಅಂತಲೇ ಕರೀತಾರೆ. ಹೀಗಾಗಿ, ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಡ್ಯಾಂಗೆ ದೊಡ್ಡದಾಗಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ಅಂತಾ ಬೋರ್ಡ್ ಹಾಕಿಸಲು, 2013ರಲ್ಲಿ ತೀರ್ಮಾನಿಸಿದ್ರು. ಈ ಬೋರ್ಡ್​ 588 ಸ್ಕ್ವೇರ್ ಮೀಟರ್​ನಷ್ಟಿದೆ. 3 ಡಿ ಮೆಟಾಲಿಕ್ ತಂತ್ರಜ್ಞಾನದಿಂದ ಬೋರ್ಡ್ ತಯಾರಿಸಲಾಗಿದೆ. ಹೀಗೆ ತಯಾರಿಸಿರೋ ಬೋರ್ಡ್, ಲಿಮ್ಕಾ ಬುಕ್ ಆಫ್​ ರೆಕಾರ್ಡ್ಸ್​ನಲ್ಲಿ ಸ್ಥಾನ ಪಡೆದಿದೆ.

ಈ ಬೋರ್ಡ್​ ಮೂಲಕ ಶಾಸ್ತ್ರೀಜಿ ಹೆಸರು, ಜನರ ಮನಸ್ಸಲ್ಲಿ ಅಚ್ಚೊತ್ತುವಂತೆ ಮಾಡಲು ನೆರವಾಗುತ್ತಿದೆ. ಇಲ್ಲಿಗೆ ಆಗಮಿಸೋ ಪ್ರವಾಸಿಗರು ಬೃಹದಾಕಾರದ ಬೋರ್ಡ್ ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಡ್ಯಾಂ ಕ್ರಸ್ಟ್​ಗೇಟ್​ಗಳಿಗೆ ಬಣ್ಣ ಬಣ್ಣದ ಲೈಟಿಂಗ್ ಅಳವಡಿಸಲಾಗಿದೆ. ಇದೂ ಸಹ ಪ್ರವಾಸಿಗರನ್ನು ಸೆಳೆಯುತ್ತಿದೆ.

ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರಕ್ಕೆ ಹಾಕಿರುವ ಬೋರ್ಡ್, ಲಿಮ್ಕಾ ಬುಕ್ ಆಫ್​ ರೆಕಾರ್ಡ್ಸ್​ಗೆ ಸೇರಿರೋದು ವಿಜಯಪುರದ ಹಿರಿಮೆಗೆ ಮತ್ತೊಂದು ಗರಿ ಸೇರಿದಂತಾಗಿದೆ. ಜೊತೆಗೆ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಹೆಸರನ್ನ ಉಳಿಸೋ ಕಾರ್ಯವನ್ನ ಕೆಬಿಜೆಎನ್​ಎಲ್ ಅಧಿಕಾರಿಗಳು ಮಾಡಿರೋದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Follow Us
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!