AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಅರ್ಧ ಕೆ.ಜಿ. ಚಿನ್ನ ಕಳ್ಳತನ, ಗೊತ್ತಾಗಿದ್ದು 6 ತಿಂಗಳ ನಂತರ..!

ಮೈಸೂರು: ಪೂಜಾರಿಯೊಬ್ಬ ಮನೆಯಲ್ಲಿ ಪೂಜೆ ಮಾಡುವ ನೆಪದಲ್ಲಿ ಚಿನ್ನ ಕದ್ದುಹೋಗಿದ್ದ ಪ್ರಕರಣ ಆರು ತಿಂಗಳ ನಂತರ ಮನೆಯವರ ಅರಿವಿಗೆ ಬಂದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಯಿಗೌಡನಹಳ್ಳಿಯ ನಿಂಗಪ್ಪ ಎಂಬುವವರ ಮನೆಯಲ್ಲಿ ಕಳೆದ ಆರು ತಿಂಗಳ ಹಿಂದೆ ಕೆ.ಆರ್. ನಗರ ತಾಲೂಕಿನ ಸಾತಿಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿ ಮನು ಎಂಬಾತನಿಂದ ಮನೆಯಲ್ಲಿ ಪೂಜೆ ಮಾಡಿಸಿದ್ದಾರೆ. ಈ ವೇಳೆ ಮನೆಯ ವಾಸ್ತು ಸರಿ‌ ಮಾಡುತ್ತೇನೆ ಅಂತ ಮನೆಯ ದಾರ ಹಾಗೂ ಕುಡಿಕೆಗಳನ್ನ ಕಟ್ಟಿದ್ದಾನೆ. ಈ ವೇಳೆ ನಿಂಗಪ್ಪ ತಮ್ಮ […]

ಮನೆಯಲ್ಲಿ ಅರ್ಧ ಕೆ.ಜಿ. ಚಿನ್ನ ಕಳ್ಳತನ, ಗೊತ್ತಾಗಿದ್ದು 6 ತಿಂಗಳ ನಂತರ..!
ಪೃಥ್ವಿಶಂಕರ
| Edited By: |

Updated on: Nov 04, 2020 | 6:00 PM

Share

ಮೈಸೂರು: ಪೂಜಾರಿಯೊಬ್ಬ ಮನೆಯಲ್ಲಿ ಪೂಜೆ ಮಾಡುವ ನೆಪದಲ್ಲಿ ಚಿನ್ನ ಕದ್ದುಹೋಗಿದ್ದ ಪ್ರಕರಣ ಆರು ತಿಂಗಳ ನಂತರ ಮನೆಯವರ ಅರಿವಿಗೆ ಬಂದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಯಿಗೌಡನಹಳ್ಳಿಯ ನಿಂಗಪ್ಪ ಎಂಬುವವರ ಮನೆಯಲ್ಲಿ ಕಳೆದ ಆರು ತಿಂಗಳ ಹಿಂದೆ ಕೆ.ಆರ್. ನಗರ ತಾಲೂಕಿನ ಸಾತಿಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿ ಮನು ಎಂಬಾತನಿಂದ ಮನೆಯಲ್ಲಿ ಪೂಜೆ ಮಾಡಿಸಿದ್ದಾರೆ. ಈ ವೇಳೆ ಮನೆಯ ವಾಸ್ತು ಸರಿ‌ ಮಾಡುತ್ತೇನೆ ಅಂತ ಮನೆಯ ದಾರ ಹಾಗೂ ಕುಡಿಕೆಗಳನ್ನ ಕಟ್ಟಿದ್ದಾನೆ.

ಈ ವೇಳೆ ನಿಂಗಪ್ಪ ತಮ್ಮ ಸಂಬಂಧಿಕರಿಗೂ ಪೂಜೆ ಮಾಡಿಸುವ ವಿಚಾರವನ್ನ ತಿಳಿಸಿ ಪೂಜೆಗೂ ಅವರನ್ನು ಕರೆದಿದ್ದಾನೆ. ಈ ವೇಳೆ ಪೂಜೆಯಲ್ಲಿ ಭಾಗಿಯಾಗಿರುವವರು ತಮ್ಮ ಬಳಿ ಇರುವ ಚಿನ್ನವನ್ನ ಪೂಜೆಗೆ ಇಟ್ಟರೆ ಒಳಿತಾಗುತ್ತೆ ಎಂದು ಪೂಜಾರಿ ತಿಳಿಸಿದ್ದಾನೆ. ಅದರಂತೆ ಪೂಜೆಗೆ ತಮ್ಮ ಬಳಿ ಇದ್ದ ಅರ್ಧ ಕೆ.ಜಿ. ಯಷ್ಟು ಚಿನ್ನವನ್ನ ಇಟ್ಟಿದ್ದಾರೆ. ಪೂಜೆ ಮುಗಿದ ನಂತರ ಅದನ್ನು ಬೀರುವಿನಲ್ಲಿ ಆರು ತಿಂಗಳ ಕಾಲ ಇಟ್ಟು ಆಯುಧ ಪೂಜೆ ಬಳಿಕ ತೆರೆದು ನೋಡಬೇಕು, ಇಲ್ಲದಿದ್ದರೆ ಕೆಡಕಾಗುತ್ತೆ ಎಂದು ಹೇಳಿದ್ದಾನೆ‌.

ಅದರಂತೆ ಆರು ತಿಂಗಳ ನಂತರ ತೆರೆದು ನೋಡಿದಾಗ ಕಳ್ಳತನವಾಗಿರೋದು ಬೆಳಕಿಗೆ ಬಂದಿದೆ. ನಂತರ ಈ ವಿಚಾರವನ್ನ ಬಿಳಿಕೆರೆ ಪೊಲೀಸರಿಗೆ ತಿಳಿಸಿದಾಗ ಪೂಜಾರಿಯನ್ನ ಕರೆದು ವಿಚಾರಿಸಿದಾಗ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೂಜೆ ಮುಗಿದ ಬಳಿಕ ಬಟ್ಟೆ ಬದಲಿಸುವ ನೆಪದಲ್ಲಿ ಕೋಣೆಗೆ ನುಗ್ಗಿ ಬೀರುವಿನಲ್ಲಿದ್ದ ಚಿನ್ನವನ್ನ ಕದ್ದಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?