AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಅರ್ಧ ಕೆ.ಜಿ. ಚಿನ್ನ ಕಳ್ಳತನ, ಗೊತ್ತಾಗಿದ್ದು 6 ತಿಂಗಳ ನಂತರ..!

ಮೈಸೂರು: ಪೂಜಾರಿಯೊಬ್ಬ ಮನೆಯಲ್ಲಿ ಪೂಜೆ ಮಾಡುವ ನೆಪದಲ್ಲಿ ಚಿನ್ನ ಕದ್ದುಹೋಗಿದ್ದ ಪ್ರಕರಣ ಆರು ತಿಂಗಳ ನಂತರ ಮನೆಯವರ ಅರಿವಿಗೆ ಬಂದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಯಿಗೌಡನಹಳ್ಳಿಯ ನಿಂಗಪ್ಪ ಎಂಬುವವರ ಮನೆಯಲ್ಲಿ ಕಳೆದ ಆರು ತಿಂಗಳ ಹಿಂದೆ ಕೆ.ಆರ್. ನಗರ ತಾಲೂಕಿನ ಸಾತಿಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿ ಮನು ಎಂಬಾತನಿಂದ ಮನೆಯಲ್ಲಿ ಪೂಜೆ ಮಾಡಿಸಿದ್ದಾರೆ. ಈ ವೇಳೆ ಮನೆಯ ವಾಸ್ತು ಸರಿ‌ ಮಾಡುತ್ತೇನೆ ಅಂತ ಮನೆಯ ದಾರ ಹಾಗೂ ಕುಡಿಕೆಗಳನ್ನ ಕಟ್ಟಿದ್ದಾನೆ. ಈ ವೇಳೆ ನಿಂಗಪ್ಪ ತಮ್ಮ […]

ಮನೆಯಲ್ಲಿ ಅರ್ಧ ಕೆ.ಜಿ. ಚಿನ್ನ ಕಳ್ಳತನ, ಗೊತ್ತಾಗಿದ್ದು 6 ತಿಂಗಳ ನಂತರ..!
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 04, 2020 | 6:00 PM

Share

ಮೈಸೂರು: ಪೂಜಾರಿಯೊಬ್ಬ ಮನೆಯಲ್ಲಿ ಪೂಜೆ ಮಾಡುವ ನೆಪದಲ್ಲಿ ಚಿನ್ನ ಕದ್ದುಹೋಗಿದ್ದ ಪ್ರಕರಣ ಆರು ತಿಂಗಳ ನಂತರ ಮನೆಯವರ ಅರಿವಿಗೆ ಬಂದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಯಿಗೌಡನಹಳ್ಳಿಯ ನಿಂಗಪ್ಪ ಎಂಬುವವರ ಮನೆಯಲ್ಲಿ ಕಳೆದ ಆರು ತಿಂಗಳ ಹಿಂದೆ ಕೆ.ಆರ್. ನಗರ ತಾಲೂಕಿನ ಸಾತಿಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿ ಮನು ಎಂಬಾತನಿಂದ ಮನೆಯಲ್ಲಿ ಪೂಜೆ ಮಾಡಿಸಿದ್ದಾರೆ. ಈ ವೇಳೆ ಮನೆಯ ವಾಸ್ತು ಸರಿ‌ ಮಾಡುತ್ತೇನೆ ಅಂತ ಮನೆಯ ದಾರ ಹಾಗೂ ಕುಡಿಕೆಗಳನ್ನ ಕಟ್ಟಿದ್ದಾನೆ.

ಈ ವೇಳೆ ನಿಂಗಪ್ಪ ತಮ್ಮ ಸಂಬಂಧಿಕರಿಗೂ ಪೂಜೆ ಮಾಡಿಸುವ ವಿಚಾರವನ್ನ ತಿಳಿಸಿ ಪೂಜೆಗೂ ಅವರನ್ನು ಕರೆದಿದ್ದಾನೆ. ಈ ವೇಳೆ ಪೂಜೆಯಲ್ಲಿ ಭಾಗಿಯಾಗಿರುವವರು ತಮ್ಮ ಬಳಿ ಇರುವ ಚಿನ್ನವನ್ನ ಪೂಜೆಗೆ ಇಟ್ಟರೆ ಒಳಿತಾಗುತ್ತೆ ಎಂದು ಪೂಜಾರಿ ತಿಳಿಸಿದ್ದಾನೆ. ಅದರಂತೆ ಪೂಜೆಗೆ ತಮ್ಮ ಬಳಿ ಇದ್ದ ಅರ್ಧ ಕೆ.ಜಿ. ಯಷ್ಟು ಚಿನ್ನವನ್ನ ಇಟ್ಟಿದ್ದಾರೆ. ಪೂಜೆ ಮುಗಿದ ನಂತರ ಅದನ್ನು ಬೀರುವಿನಲ್ಲಿ ಆರು ತಿಂಗಳ ಕಾಲ ಇಟ್ಟು ಆಯುಧ ಪೂಜೆ ಬಳಿಕ ತೆರೆದು ನೋಡಬೇಕು, ಇಲ್ಲದಿದ್ದರೆ ಕೆಡಕಾಗುತ್ತೆ ಎಂದು ಹೇಳಿದ್ದಾನೆ‌.

ಅದರಂತೆ ಆರು ತಿಂಗಳ ನಂತರ ತೆರೆದು ನೋಡಿದಾಗ ಕಳ್ಳತನವಾಗಿರೋದು ಬೆಳಕಿಗೆ ಬಂದಿದೆ. ನಂತರ ಈ ವಿಚಾರವನ್ನ ಬಿಳಿಕೆರೆ ಪೊಲೀಸರಿಗೆ ತಿಳಿಸಿದಾಗ ಪೂಜಾರಿಯನ್ನ ಕರೆದು ವಿಚಾರಿಸಿದಾಗ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೂಜೆ ಮುಗಿದ ಬಳಿಕ ಬಟ್ಟೆ ಬದಲಿಸುವ ನೆಪದಲ್ಲಿ ಕೋಣೆಗೆ ನುಗ್ಗಿ ಬೀರುವಿನಲ್ಲಿದ್ದ ಚಿನ್ನವನ್ನ ಕದ್ದಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ