AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಮನೆ ಜಲಪಾತದಲ್ಲಿ ಮುಳುಗಿ ಯುವಕ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಚಿಕ್ಕಮಗಳೂರು: ಜಲಪಾತದಲ್ಲಿ ಮುಳುಗಿ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದಲ್ಲಿ ನಡೆದಿದೆ. ಕಳಸ ಸಮೀಪದ ಅಬ್ಬುಗುಡಿಗೆಯ ಸಿರಿಮನೆ ಫಾಲ್ಸ್​ನಲ್ಲಿ ಮುಳುಗಿ ಯುವಕ ಸಾವನ್ನಪ್ಪಿದ್ದಾನೆ. ಗುತ್ಯಡ್ಕ ಶ್ರೀನಿವಾಸ ಗೌಡ ಎಂಬವರ ಪುತ್ರ 16 ವರ್ಷದ ವಂಶಿತ್ ಸಾವನ್ನಪ್ಪಿರುವ ದುರ್ದೈವಿ. ಐದು ಮಂದಿ ಗೆಳೆಯರ ಜೊತೆ ಫಾಲ್ಸ್​ಗೆ ಹೋಗಿದ್ದಾಗ ದುರಂತ ಸಂಭವಿಸಿದೆ. ಸುಮಾರು ಹತ್ತರಿಂದ ಹನ್ನೆರಡು ಅಡಿ ನೀರಿದ್ದು, ಆಳವನ್ನು ಲೆಕ್ಕಿಸದೇ ನೀರಿಗೆ ಇಳಿದಿದ್ದ ವಂಶಿತ್ ನೀರಿನಲ್ಲಿ ಮುಳುಗಿದ್ದಾನೆ. ಈ ವೇಳೆ ಮೇಲೆ ಬರಲು ಇನ್ನಿಲ್ಲದ ಪ್ರಯತ್ನ […]

ಸಿರಿಮನೆ ಜಲಪಾತದಲ್ಲಿ ಮುಳುಗಿ ಯುವಕ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಆಯೇಷಾ ಬಾನು
|

Updated on: Nov 01, 2020 | 12:56 PM

Share

ಚಿಕ್ಕಮಗಳೂರು: ಜಲಪಾತದಲ್ಲಿ ಮುಳುಗಿ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದಲ್ಲಿ ನಡೆದಿದೆ. ಕಳಸ ಸಮೀಪದ ಅಬ್ಬುಗುಡಿಗೆಯ ಸಿರಿಮನೆ ಫಾಲ್ಸ್​ನಲ್ಲಿ ಮುಳುಗಿ ಯುವಕ ಸಾವನ್ನಪ್ಪಿದ್ದಾನೆ.

ಗುತ್ಯಡ್ಕ ಶ್ರೀನಿವಾಸ ಗೌಡ ಎಂಬವರ ಪುತ್ರ 16 ವರ್ಷದ ವಂಶಿತ್ ಸಾವನ್ನಪ್ಪಿರುವ ದುರ್ದೈವಿ. ಐದು ಮಂದಿ ಗೆಳೆಯರ ಜೊತೆ ಫಾಲ್ಸ್​ಗೆ ಹೋಗಿದ್ದಾಗ ದುರಂತ ಸಂಭವಿಸಿದೆ. ಸುಮಾರು ಹತ್ತರಿಂದ ಹನ್ನೆರಡು ಅಡಿ ನೀರಿದ್ದು, ಆಳವನ್ನು ಲೆಕ್ಕಿಸದೇ ನೀರಿಗೆ ಇಳಿದಿದ್ದ ವಂಶಿತ್ ನೀರಿನಲ್ಲಿ ಮುಳುಗಿದ್ದಾನೆ.

ಈ ವೇಳೆ ಮೇಲೆ ಬರಲು ಇನ್ನಿಲ್ಲದ ಪ್ರಯತ್ನ ಮಾಡಿದ್ರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಸ್ನೇಹಿತರ ಕಣ್ಣೆದುರೇ ಯುವಕ ಮೃತಪಟ್ಟಿದ್ದಾನೆ. ಈ ಸಂದರ್ಭದಲ್ಲಿ ಕೆಲ ಪ್ರವಾಸಿಗರು ಕೂಡ ಅಲ್ಲೇ ಇದ್ರೂ ಮುಳುಗಿದ ಯುವಕನನ್ನ ಬದುಕಿಸಲು ಸಾಧ್ಯವಾಗಿಲ್ಲ. ಸುದ್ದಿ ತಿಳಿದ ಪೋಷಕರು ಜಲಪಾತದ ಬಳಿ ಬಂದು ಕಣ್ಣೀರು ಹಾಕಿದ್ರು.

ಈ ಜಲಪಾತ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿ ಹರಿಯುತ್ತಿದ್ದರಿಂದ ಪ್ರವಾಸಿಗರು ಫಾಲ್ಸ್​ಗೆ ಬರಬೇಕಾದರೆ ಭಾರೀ ಮೊತ್ತವನ್ನು ಪಾವತಿಸಿ ಬರಬೇಕಾಗಿತ್ತಂತೆ. ಇದನ್ನು ಸ್ಥಳೀಯರು ಪ್ರಶ್ನಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ, ಅಲ್ಲದೇ ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ಜಲಪಾತಕ್ಕೆ ಪ್ರವಾಸಿಗರನ್ನು ಬಿಡುತ್ತಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳದಿದ್ರೂ ಕೂಡ‌ ಸಂಬಂಧಪಟ್ಟ ಇಲಾಖೆಯವರು ಕಣ್ಮುಚ್ಚಿ ಕುಳಿತ ಪರಿಣಾಮವೇ ಇವತ್ತಿನ ದುರಂತಕ್ಕೆ ಕಾರಣ ಅಂತಾ ಸಂಬಂಧಿಕರು, ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!