AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೇಳೆ ಮನೆಯಲ್ಲಿದ್ದ ಬಾಲಕಿ ಮೇಲೆ ವೃದ್ಧನಿಂದ ರೇಪ್: ಗರ್ಭಿಣಿ ಪೋಷಕರಿಂದ ದೂರು, ಕಾಮುಕ ಅರೆಸ್ಟ್

ಅಪ್ರಾಪ್ತೆಯ ಮೇಲೆ 61 ವರ್ಷದ ವೃದ್ಧ ಅತ್ಯಾಚಾರವೆಸಗಿದ್ದು ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಕೊರೊನಾ ವೇಳೆ ಮನೆಯಲ್ಲಿದ್ದ ಬಾಲಕಿ ಮೇಲೆ ವೃದ್ಧನಿಂದ ರೇಪ್: ಗರ್ಭಿಣಿ ಪೋಷಕರಿಂದ ದೂರು, ಕಾಮುಕ ಅರೆಸ್ಟ್
ಕಾಮುಕ ವೆಂಕಟೇಶ್
ಆಯೇಷಾ ಬಾನು
|

Updated on:Dec 04, 2020 | 10:42 AM

Share

ಮಂಡ್ಯ: ಅಪ್ರಾಪ್ತೆಯ ಮೇಲೆ 61 ವರ್ಷದ ವೃದ್ಧ ಅತ್ಯಾಚಾರವೆಸಗಿದ್ದು ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯದ ಗಾಂಧಿನಗರ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ.

15 ವರ್ಷದ ಬಾಲಕಿ ಮೇಲೆ 61 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯ ನಿವಾಸಿ ವೆಂಕಟೇಶ್ ಎಂಬ ವೃದ್ಧ ಈ ಕೃತ್ಯ ಎಸಗಿದ್ದು ಈತ ಪಕ್ಕದ ಮನೆಯ ಬಾಲಕಿಯ ಮೇಲೆ ಕಾಮುಕ ದೃಷ್ಟಿ ಬೀರಿದ್ದಾನೆ. ಬಾಲಕಿಯ ಪೋಷಕರು ಕೆಲಸಕ್ಕೆ ತೆರಳಿದ್ದರು.

ಕೊರೊನಾ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇರೋದ್ರಿಂದ ಬಾಲಕಿ ಮನೆಯಲ್ಲೇ ಇದ್ದಳು. ಈ ಸಮಯವನ್ನು ಬಳಸಿಕೊಂಡ ಕಾಮುಕ ವೃದ್ಧ ಬಾಲಕಿಯ ಮನೆಗೆ ಹೋಗಿ ಆಕೆಯ ಮೇಲೆ ಎರಗಿದ್ದಾನೆ. ಬಳಿಕ ಈ ವಿಷಯ ಯಾರಿಗೂ ಹೇಳದಂತೆ ಪ್ರಾಣ ಬೆದರಿಕೆ ಹಾಕಿದ್ದಾನೆ.

ಬಾಲಕಿ ದೌರ್ಜನ್ಯದ ಬಗ್ಗೆ ಹೇಳಿದರೂ ಪೋಷಕರ ನಿರ್ಲಕ್ಷ್ಯ: ಪಕ್ಕದ ಮನೆ ತಾತ ಕೆಟ್ಟ ದೃಷ್ಟಿಯಿಂದ ನೋಡ್ತಾರೆ, ಮೈಕೈ ಮುಟ್ಟುತ್ತಾರೆ ಎಂದು ಬಾಲಕಿ ದೌರ್ಜನ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಳು. ಆದರೆ ಆತ ಹಿರಿಯರು, ಬಾಲಕಿಯೇ ತಪ್ಪಾಗಿ ಅರ್ಥೈಸಿಕೊಂಡಿದ್ದಾಳೆಂದು ಪೋಷಕರು ಸುಮ್ಮನಾಗಿದ್ದರು.

ಬಾಲಕಿ ಗರ್ಭಿಣಿಯಾದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಾಗಿದ್ದು ಕಾಮುಕ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕತ್ತು ಕೊಯ್ದ ಅಪ್ರಾಪ್ತ ಯುವಕ ಬಂಧನ..!

Published On - 10:40 am, Fri, 4 December 20

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ