AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೇಳೆ ಮನೆಯಲ್ಲಿದ್ದ ಬಾಲಕಿ ಮೇಲೆ ವೃದ್ಧನಿಂದ ರೇಪ್: ಗರ್ಭಿಣಿ ಪೋಷಕರಿಂದ ದೂರು, ಕಾಮುಕ ಅರೆಸ್ಟ್

ಅಪ್ರಾಪ್ತೆಯ ಮೇಲೆ 61 ವರ್ಷದ ವೃದ್ಧ ಅತ್ಯಾಚಾರವೆಸಗಿದ್ದು ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಕೊರೊನಾ ವೇಳೆ ಮನೆಯಲ್ಲಿದ್ದ ಬಾಲಕಿ ಮೇಲೆ ವೃದ್ಧನಿಂದ ರೇಪ್: ಗರ್ಭಿಣಿ ಪೋಷಕರಿಂದ ದೂರು, ಕಾಮುಕ ಅರೆಸ್ಟ್
ಕಾಮುಕ ವೆಂಕಟೇಶ್
ಆಯೇಷಾ ಬಾನು
|

Updated on:Dec 04, 2020 | 10:42 AM

Share

ಮಂಡ್ಯ: ಅಪ್ರಾಪ್ತೆಯ ಮೇಲೆ 61 ವರ್ಷದ ವೃದ್ಧ ಅತ್ಯಾಚಾರವೆಸಗಿದ್ದು ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯದ ಗಾಂಧಿನಗರ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ.

15 ವರ್ಷದ ಬಾಲಕಿ ಮೇಲೆ 61 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯ ನಿವಾಸಿ ವೆಂಕಟೇಶ್ ಎಂಬ ವೃದ್ಧ ಈ ಕೃತ್ಯ ಎಸಗಿದ್ದು ಈತ ಪಕ್ಕದ ಮನೆಯ ಬಾಲಕಿಯ ಮೇಲೆ ಕಾಮುಕ ದೃಷ್ಟಿ ಬೀರಿದ್ದಾನೆ. ಬಾಲಕಿಯ ಪೋಷಕರು ಕೆಲಸಕ್ಕೆ ತೆರಳಿದ್ದರು.

ಕೊರೊನಾ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇರೋದ್ರಿಂದ ಬಾಲಕಿ ಮನೆಯಲ್ಲೇ ಇದ್ದಳು. ಈ ಸಮಯವನ್ನು ಬಳಸಿಕೊಂಡ ಕಾಮುಕ ವೃದ್ಧ ಬಾಲಕಿಯ ಮನೆಗೆ ಹೋಗಿ ಆಕೆಯ ಮೇಲೆ ಎರಗಿದ್ದಾನೆ. ಬಳಿಕ ಈ ವಿಷಯ ಯಾರಿಗೂ ಹೇಳದಂತೆ ಪ್ರಾಣ ಬೆದರಿಕೆ ಹಾಕಿದ್ದಾನೆ.

ಬಾಲಕಿ ದೌರ್ಜನ್ಯದ ಬಗ್ಗೆ ಹೇಳಿದರೂ ಪೋಷಕರ ನಿರ್ಲಕ್ಷ್ಯ: ಪಕ್ಕದ ಮನೆ ತಾತ ಕೆಟ್ಟ ದೃಷ್ಟಿಯಿಂದ ನೋಡ್ತಾರೆ, ಮೈಕೈ ಮುಟ್ಟುತ್ತಾರೆ ಎಂದು ಬಾಲಕಿ ದೌರ್ಜನ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಳು. ಆದರೆ ಆತ ಹಿರಿಯರು, ಬಾಲಕಿಯೇ ತಪ್ಪಾಗಿ ಅರ್ಥೈಸಿಕೊಂಡಿದ್ದಾಳೆಂದು ಪೋಷಕರು ಸುಮ್ಮನಾಗಿದ್ದರು.

ಬಾಲಕಿ ಗರ್ಭಿಣಿಯಾದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಾಗಿದ್ದು ಕಾಮುಕ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕತ್ತು ಕೊಯ್ದ ಅಪ್ರಾಪ್ತ ಯುವಕ ಬಂಧನ..!

Published On - 10:40 am, Fri, 4 December 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ