AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಕಚ್ಚಿದ ಹಾವನ್ನೇ ಕಚ್ಚಿ ಸಾಯಿಸಿ, ತಾನೂ ಮಸಣ ಸೇರಿದ.. ಎಲ್ಲಿ?

ಹಾವಿನ ಜೊತೆ ಚೆಲ್ಲಾಟವಾಡಲು ಹೋಗಿ ವ್ಯಕ್ತಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದಲ್ಲಿ ನಡೆದಿದೆ.

ತನಗೆ ಕಚ್ಚಿದ ಹಾವನ್ನೇ ಕಚ್ಚಿ ಸಾಯಿಸಿ, ತಾನೂ ಮಸಣ ಸೇರಿದ.. ಎಲ್ಲಿ?
ಸಿದ್ದಪ್ಪ ತಳವಾರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 09, 2020 | 2:52 PM

Share

ಹುಬ್ಬಳ್ಳಿ: ಹಾವು.. ಈ ಹೆಸರು ಕೇಳಿದ್ರೇನೆ ಭಯ ಆಗುತ್ತೆ. ಆದ್ರೆ ಕೆಲವರು ಹಾವನ್ನು ಜೊತೆಯಲ್ಲಿಟ್ಟುಕೊಂಡೆ ತಮ್ಮ ಒಂದೊತ್ತಿನ ಊಟಕ್ಕೆ ದುಡಿಮೆ ಮಾಡ್ಕೊಳ್ಳುತ್ತಾರೆ. ಅವರನ್ನ ಹಾವಾಡಿಗ ಅಂತಾರೆ. ಹಾವಾಡಿಗರಿಗೆ ಹಾವನ್ನು ಪಳಗಿಸುವ ಎಲ್ಲಾ ಟೆಕ್ನಿಕ್ಸ್ ಗೊತ್ತಿರುತ್ತೆ. ಹಾಗಾಗಿ ಅವರು ಹಾವಿನ ಜೊತೆ ಆಟ ಆಟ್ತಾರೆ.. ಆಡುಸ್ತಾರೆ. ಅದಕ್ಕೆ ಬ್ರಿಟಿಷರು ಭಾರತ ಅಂದ್ರೆ Land of snake charmers ಎಂದು ಅವರು ನಮ್ಮ ದೇಶವನ್ನು ಆಳುತ್ತಿದ್ದ ಕಾಲದಲ್ಲಿ ಲೇವಡಿ ಮಾಡಿದ್ದರು.

ಮುಂದುವರಿದ ಇಂದಿನ ಸೆಲ್ಫಿ ಯುಗದಲ್ಲಿ  ಹಾವನ್ನು ಹಿಡಿದು ಫೋಟೋಗೆ ಫೋಸ್ ಕೊಡುತ್ತಾ ಸೆಲ್ಫಿ ತೆಗೆಸಿಕೊಳ್ಳುವ ಸಾಮಾನ್ಯ ಆಸೆ ಜನರಿಗೆ. ಇಲ್ಲೊಬ್ಬ ಭೂಪ ಹಾವಿನ ಜೊತೆ ಸರಸ ಆಡಲು ಹೋಗಿ ಮಸಣ ಸೇರಿದ್ದಾನೆ ಎಂಬುದು ಈಗಿನ ಸುದ್ದಿ. ಈ ಭೂಪ ಒಂದು ಹೆಜ್ಜೆ ಮುಂದೆ ಹೋಗಿ ಹಾವಿನ ಜೊತೆ ಚೆಲ್ಲಾಟವಾಡಲು ಹೋಗಿ ಮೃತಪಟ್ಟಿದ್ದಾನೆ. ಸಿದ್ದಪ್ಪ ತಳವಾರ(45) ಮೃತ ವ್ಯಕ್ತಿ.

ಚಟವೇ ಚಟ್ಟಕ್ಕೆ ದಾರಿಯಾಯ್ತು.. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ನಿವಾಸಿ ಸಿದ್ದಪ್ಪ ತಳವಾರ್​ಗೆ ಹಾವುಗಳೊಂದಿಗೆ ಆಟವಾಡುವ ಹುಚ್ಚಿತ್ತು. ಎಲ್ಲೇ ಹಾವುಗಳು ಕಂಡರೂ ಅವುಗಳನ್ನು ಹಿಡಿದು ಆಟವಾಡುತ್ತಿದ್ದ. ಈ ಬಾರಿ ಸಹ ಅದೇ ರೀತಿ ಕಣ್ಣಿಗೆ ಬಿದ್ದ ಹಾವನ್ನು ಹಿಡಿದು ಆಟವಾಡಲು ಹೋಗಿದ್ದಾನೆ.

ವಿಪರ್ಯಾಸವೆಂದ್ರೆ ಈ ಬಾರಿ ಹಾವು ಯಮನ ರೂಪದಲ್ಲಿ ಸಿದ್ದಪ್ಪನ ಕುತ್ತಿಗೆ ಬಿಗಿದಿದೆ. ರೊಚ್ಚಿಗೆದ್ದ ಹಾವು ಸಿದ್ದಪ್ಪನನ್ನು ಕಚ್ಚಿದೆ. ಬಳಿಕ ಕೋಪಗೊಂಡ ವ್ಯಕ್ತಿ ತಾನೇ ಹಾವನ್ನು ಕೊಂದು ಹಾಕಿದ್ದಾನೆ. ಬಳಿಕ ಹಾವಿನ ವಿಷ ದೇಹಕ್ಕೆ ಏರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಹಾವುಗಳನ್ನು ಹಿಡಿದು ಕಾಡಿಗೆ ಬಿಡ್ತಿದ್ದ.. ಆದರೆ ತನಗೆ ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ..

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ