AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC ಕಚೇರಿಯಲ್ಲಿ ಹಾವು ಪ್ರತ್ಯಕ್ಷ! ಕೆಲಸ ಬಿಟ್ಟು ಓಡಿ ಹೋದ ಸಿಬ್ಬಂದಿ..

ಚಿಕ್ಕಮಗಳೂರು: ಕೆರೆ ಹಾವೊಂದು ಅತ್ತಿಂದಿತ್ತ ಓಡಾಡಿ ಸಿಬ್ಬಂದಿಗಳಲ್ಲಿ ಆತಂಕ ಹುಟ್ಟಿಸಿದ್ದ ಪ್ರಸಂಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದ ಮಧ್ಯದಲ್ಲಿ ಗಾಂಧಿ ಪ್ರತಿಮೆ ಸುತ್ತಲೂ ಇರೋ ಹುಲ್ಲು ಹಾಸಿನ ಮೇಲೆ ಕೆರೆ ಹಾವನ್ನ ಕಂಡು ಸಿಬ್ಬಂದಿಗಳು ಹಾಗೂ ಕೆಲಸಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಜನಸಾಮಾನ್ಯರು ಗಾಬರಿಯಾಗಿದ್ದರು. ಒಂದು ಆಫೀಸಿನಿಂದ ಮತ್ತೊಂದು ಆಫೀಸ್ ಗೆ ಹೋಗುವಾಗ ಹಾವನ್ನ ಕಂಡ ಸಿಬ್ಬಂದಿಗಳು ಗಾಬರಿಗೊಂಡಿದ್ದರು.‌ ಅತ್ಯಂತ ವೇಗವಾಗಿ ಓಡುವ ಕೆರೆ ಹಾವು ಸಿಬ್ಬಂದಿಗಳ ಜೊತೆ ಕಣ್ಣಾಮುಚ್ಚಾಲೆ ಆಟವಾಡ್ತ ನೋಡ-ನೋಡ್ತಿದ್ದಂತೆ […]

DC ಕಚೇರಿಯಲ್ಲಿ ಹಾವು ಪ್ರತ್ಯಕ್ಷ! ಕೆಲಸ ಬಿಟ್ಟು ಓಡಿ ಹೋದ ಸಿಬ್ಬಂದಿ..
ಸಾಧು ಶ್ರೀನಾಥ್​
| Edited By: |

Updated on: Oct 14, 2020 | 1:57 PM

Share

ಚಿಕ್ಕಮಗಳೂರು: ಕೆರೆ ಹಾವೊಂದು ಅತ್ತಿಂದಿತ್ತ ಓಡಾಡಿ ಸಿಬ್ಬಂದಿಗಳಲ್ಲಿ ಆತಂಕ ಹುಟ್ಟಿಸಿದ್ದ ಪ್ರಸಂಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದ ಮಧ್ಯದಲ್ಲಿ ಗಾಂಧಿ ಪ್ರತಿಮೆ ಸುತ್ತಲೂ ಇರೋ ಹುಲ್ಲು ಹಾಸಿನ ಮೇಲೆ ಕೆರೆ ಹಾವನ್ನ ಕಂಡು ಸಿಬ್ಬಂದಿಗಳು ಹಾಗೂ ಕೆಲಸಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಜನಸಾಮಾನ್ಯರು ಗಾಬರಿಯಾಗಿದ್ದರು.

ಒಂದು ಆಫೀಸಿನಿಂದ ಮತ್ತೊಂದು ಆಫೀಸ್ ಗೆ ಹೋಗುವಾಗ ಹಾವನ್ನ ಕಂಡ ಸಿಬ್ಬಂದಿಗಳು ಗಾಬರಿಗೊಂಡಿದ್ದರು.‌ ಅತ್ಯಂತ ವೇಗವಾಗಿ ಓಡುವ ಕೆರೆ ಹಾವು ಸಿಬ್ಬಂದಿಗಳ ಜೊತೆ ಕಣ್ಣಾಮುಚ್ಚಾಲೆ ಆಟವಾಡ್ತ ನೋಡ-ನೋಡ್ತಿದ್ದಂತೆ ಮಾಯವಾಗ್ತಿತ್ತು. ಇದರಿಂದ ಸಿಬ್ಬಂದಿಗಳ ಭಯ ಮತ್ತಷ್ಟು ಹೆಚ್ಚಾಗಿತ್ತು. ಸಿಬ್ಬಂದಿಗಳ ಜೊತೆ ಕಣ್ಣಾಮುಚ್ಚಾಲೆ ಆಟವಾಡಿದ ಕೆರೆ ಹಾವು ಬಳಿಕ ಪೈಪ್ ಒಳಗೆ ಸೇರಿತ್ತು.

ಸೆರೆ ಹಿಡಿದ ಹಾವನ್ನ ಕೈಯಲ್ಲಿ ಹಿಡಿದು ಖುಷಿ ಪಟ್ಟ ಸಿಬ್ಬಂದಿ ಕೂಡಲೇ ಡಿಸಿ ಕಚೇರಿ ಸಿಬ್ಬಂದಿಗಳು, ಸ್ನೇಕ್ ನರೇಶ್ ಗೆ ವಿಷಯ ಮುಟ್ಟಿಸಿದ್ರು. ಸ್ಥಳಕ್ಕೆ ಬಂದ ಉರಗಪ್ರಿಯ ಸ್ನೇಕ್ ನರೇಶ್ ಅರ್ಧ ಗಂಟೆಗಳ ಕಾಲ ಹಾವನ್ನ ಹುಡುಕಿದರು. ಕೊನೆಗೆ ಪೈಪನ್ನ ಮೇಲೆತ್ತುತ್ತಿದ್ದಂತೆ ನಿಧಾನವಾಗಿ ಹೊರ ಬಂದ ಹಾವನ್ನ ಕಂಡು ನರೇಶ್, ಕೆರೆ ಹಾವು ಏನೂ ಮಾಡಲ್ಲ. ಅದಕ್ಕೆ ನಿಮಗಿಂತ ಭಯ ಹೆಚ್ಚು ಎಂದು ತನ್ನ ಮೈಮೇಲೆ ಕೆರೆ ಹಾವನ್ನು ಹಾಕಿಕೊಂಡರು.

ಆ ಬಳಿಕ ಹಾವನ್ನ ನೋಡಿ ಗಾಬರಿಯಾಗಿದ್ದ ಸಿಬ್ಬಂದಿಗಳ ಕೈಯಲ್ಲೂ ಅದೇ ಹಾವನ್ನ ಹಿಡಿಸಿದರು. ಭಯದಲ್ಲೇ ಹಾವನ್ನ ಹಿಡಿದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಕೊನೆಗೆ ಸಂತೋಷಪಟ್ರು. ಉರಗ ಪ್ರಿಯ ನರೇಶ್ ಈವರೆಗೆ ಸುಮಾರು 35000ಕ್ಕೂ ಅಧಿಕ ಹಾವುಗಳನ್ನ ಸೆರೆ ಹಿಡಿದಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ