AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!

ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ನಿರ್ಜರಾ ಹಾಗೂ ಆಕೆಯ ಪತಿ ಆನಂದ್​ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ ನಗರದ ನಿವಾಸಿಯೊಬ್ಬರ ಫೋನ್​ ಕರೆ ಬಂದಿದೆ. […]

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!
KUSHAL V
|

Updated on: Sep 13, 2020 | 4:29 PM

Share

ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ನಿರ್ಜರಾ ಹಾಗೂ ಆಕೆಯ ಪತಿ ಆನಂದ್​ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ ನಗರದ ನಿವಾಸಿಯೊಬ್ಬರ ಫೋನ್​ ಕರೆ ಬಂದಿದೆ.

ಮದುವೆಗೆ ತಯಾರಾಗಿದ್ದ ನಿರ್ಜರಾ ಮರುಯೋಚಿಸದೆ ಸಮಾರಂಭಕ್ಕಾಗಿ ಉಟ್ಟ ಸೀರೆಯಲ್ಲೇ ಹಾವು ಸಿಲುಕಿದ್ದ ಮನೆಗೆ ಧಾವಿಸಿದ್ದಾರೆ. ಅವಸರದಲ್ಲಿ ತಮ್ಮ ನಿವಾಸದಲ್ಲಿದ್ದ ಹಾವು ರಕ್ಷಣಾ ಸಾಧನಗಳನ್ನು ಸಹ ತೆಗೆದುಕೊಂಡು ಹೋಗಿರಲಿಲ್ಲ.

ಆದರೆ, ಇದರ ಬಗ್ಗೆ ಕಿಂಚಿತ್ತು ಚಿಂತಿಸದ ನಿರ್ಜರಾ ತಮ್ಮ ಫೋನ್​ನ ಟಾರ್ಚ್​ಲೈಟ್​ ಬಳಸಿ ಸಣ್ಣದೊಂದು ಕಡ್ಡಿಯ ಸಹಾಯದಿಂದ ಕಪಾಟಿನ ಹಿಂದೆ ಅವಿತುಕೊಂಡಿದ್ದ ನಾಗರಹಾವನ್ನು ಹೊರಗೆಳೆದರು. ಬಳಿಕ ಅದನ್ನು ಬರಿಗೈಯಲ್ಲೇ ಹಿಡಿದು ಅಲ್ಲಿಂದ ಹೊರತಂದರು.

ನಿರ್ಜರಾ ಇದೆಲ್ಲಾ ಕಾರ್ಯವನ್ನು ತಾವು ಮದುವೆಗೆಂದು ಉಟ್ಟ ಸೀರೆಯಲ್ಲೇ ನಿಭಾಯಿಸಿದ್ದು ವನ್ಯಜೀವಿ ತಜ್ಞೆಯ ಸಾಹಸಕ್ಕೆ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ. ಈ ವೇಳೆ ಹಾವು ಹಿಡಿಯೋದು ದೊಡ್ಡ ವಿಷಯವಲ್ಲ. ಆದರೆ, ಸೀರೆ ಉಟ್ಟಿರುವಾಗ ಕೊಂಚ ಕಷ್ಟವಾಗುತ್ತದೆ ಎಂದು ನಿರ್ಜರಾ ವಿಡಿಯೋದಲ್ಲಿ ಹೇಳಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು