AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!

ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ನಿರ್ಜರಾ ಹಾಗೂ ಆಕೆಯ ಪತಿ ಆನಂದ್​ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ ನಗರದ ನಿವಾಸಿಯೊಬ್ಬರ ಫೋನ್​ ಕರೆ ಬಂದಿದೆ. […]

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!
Follow us
KUSHAL V
|

Updated on: Sep 13, 2020 | 4:29 PM

ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ನಿರ್ಜರಾ ಹಾಗೂ ಆಕೆಯ ಪತಿ ಆನಂದ್​ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ ನಗರದ ನಿವಾಸಿಯೊಬ್ಬರ ಫೋನ್​ ಕರೆ ಬಂದಿದೆ.

ಮದುವೆಗೆ ತಯಾರಾಗಿದ್ದ ನಿರ್ಜರಾ ಮರುಯೋಚಿಸದೆ ಸಮಾರಂಭಕ್ಕಾಗಿ ಉಟ್ಟ ಸೀರೆಯಲ್ಲೇ ಹಾವು ಸಿಲುಕಿದ್ದ ಮನೆಗೆ ಧಾವಿಸಿದ್ದಾರೆ. ಅವಸರದಲ್ಲಿ ತಮ್ಮ ನಿವಾಸದಲ್ಲಿದ್ದ ಹಾವು ರಕ್ಷಣಾ ಸಾಧನಗಳನ್ನು ಸಹ ತೆಗೆದುಕೊಂಡು ಹೋಗಿರಲಿಲ್ಲ.

ಆದರೆ, ಇದರ ಬಗ್ಗೆ ಕಿಂಚಿತ್ತು ಚಿಂತಿಸದ ನಿರ್ಜರಾ ತಮ್ಮ ಫೋನ್​ನ ಟಾರ್ಚ್​ಲೈಟ್​ ಬಳಸಿ ಸಣ್ಣದೊಂದು ಕಡ್ಡಿಯ ಸಹಾಯದಿಂದ ಕಪಾಟಿನ ಹಿಂದೆ ಅವಿತುಕೊಂಡಿದ್ದ ನಾಗರಹಾವನ್ನು ಹೊರಗೆಳೆದರು. ಬಳಿಕ ಅದನ್ನು ಬರಿಗೈಯಲ್ಲೇ ಹಿಡಿದು ಅಲ್ಲಿಂದ ಹೊರತಂದರು.

ನಿರ್ಜರಾ ಇದೆಲ್ಲಾ ಕಾರ್ಯವನ್ನು ತಾವು ಮದುವೆಗೆಂದು ಉಟ್ಟ ಸೀರೆಯಲ್ಲೇ ನಿಭಾಯಿಸಿದ್ದು ವನ್ಯಜೀವಿ ತಜ್ಞೆಯ ಸಾಹಸಕ್ಕೆ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ. ಈ ವೇಳೆ ಹಾವು ಹಿಡಿಯೋದು ದೊಡ್ಡ ವಿಷಯವಲ್ಲ. ಆದರೆ, ಸೀರೆ ಉಟ್ಟಿರುವಾಗ ಕೊಂಚ ಕಷ್ಟವಾಗುತ್ತದೆ ಎಂದು ನಿರ್ಜರಾ ವಿಡಿಯೋದಲ್ಲಿ ಹೇಳಿದ್ದಾರೆ.

ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ