AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!

ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ನಿರ್ಜರಾ ಹಾಗೂ ಆಕೆಯ ಪತಿ ಆನಂದ್​ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ ನಗರದ ನಿವಾಸಿಯೊಬ್ಬರ ಫೋನ್​ ಕರೆ ಬಂದಿದೆ. […]

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!
KUSHAL V
|

Updated on: Sep 13, 2020 | 4:29 PM

Share

ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ನಿರ್ಜರಾ ಹಾಗೂ ಆಕೆಯ ಪತಿ ಆನಂದ್​ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ ನಗರದ ನಿವಾಸಿಯೊಬ್ಬರ ಫೋನ್​ ಕರೆ ಬಂದಿದೆ.

ಮದುವೆಗೆ ತಯಾರಾಗಿದ್ದ ನಿರ್ಜರಾ ಮರುಯೋಚಿಸದೆ ಸಮಾರಂಭಕ್ಕಾಗಿ ಉಟ್ಟ ಸೀರೆಯಲ್ಲೇ ಹಾವು ಸಿಲುಕಿದ್ದ ಮನೆಗೆ ಧಾವಿಸಿದ್ದಾರೆ. ಅವಸರದಲ್ಲಿ ತಮ್ಮ ನಿವಾಸದಲ್ಲಿದ್ದ ಹಾವು ರಕ್ಷಣಾ ಸಾಧನಗಳನ್ನು ಸಹ ತೆಗೆದುಕೊಂಡು ಹೋಗಿರಲಿಲ್ಲ.

ಆದರೆ, ಇದರ ಬಗ್ಗೆ ಕಿಂಚಿತ್ತು ಚಿಂತಿಸದ ನಿರ್ಜರಾ ತಮ್ಮ ಫೋನ್​ನ ಟಾರ್ಚ್​ಲೈಟ್​ ಬಳಸಿ ಸಣ್ಣದೊಂದು ಕಡ್ಡಿಯ ಸಹಾಯದಿಂದ ಕಪಾಟಿನ ಹಿಂದೆ ಅವಿತುಕೊಂಡಿದ್ದ ನಾಗರಹಾವನ್ನು ಹೊರಗೆಳೆದರು. ಬಳಿಕ ಅದನ್ನು ಬರಿಗೈಯಲ್ಲೇ ಹಿಡಿದು ಅಲ್ಲಿಂದ ಹೊರತಂದರು.

ನಿರ್ಜರಾ ಇದೆಲ್ಲಾ ಕಾರ್ಯವನ್ನು ತಾವು ಮದುವೆಗೆಂದು ಉಟ್ಟ ಸೀರೆಯಲ್ಲೇ ನಿಭಾಯಿಸಿದ್ದು ವನ್ಯಜೀವಿ ತಜ್ಞೆಯ ಸಾಹಸಕ್ಕೆ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ. ಈ ವೇಳೆ ಹಾವು ಹಿಡಿಯೋದು ದೊಡ್ಡ ವಿಷಯವಲ್ಲ. ಆದರೆ, ಸೀರೆ ಉಟ್ಟಿರುವಾಗ ಕೊಂಚ ಕಷ್ಟವಾಗುತ್ತದೆ ಎಂದು ನಿರ್ಜರಾ ವಿಡಿಯೋದಲ್ಲಿ ಹೇಳಿದ್ದಾರೆ.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು