AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ; ಅಧಿವೇಶನದ ಸಂದರ್ಭವೆಂದು ನಾನು ದೂರು ನೀಡಿಲ್ಲ’

ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ. ಸಂತ್ರಸ್ತೆ ಕುಟುಂಬದ ಸದಸ್ಯರೊಬ್ಬರು ಸಂಪರ್ಕಿಸಿದ್ದರು. ಇದೊಂದು ಬಹಳ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಸಂತ್ರಸ್ತೆ, ಕುಟುಂಬದ ಬಗ್ಗೆ ವಿವರಣೆ ನೀಡಲಾಗುವುದಿಲ್ಲ ಎಂದು ದಿನೇಶ್​ ಹೇಳಿದರು.

‘ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ; ಅಧಿವೇಶನದ ಸಂದರ್ಭವೆಂದು ನಾನು ದೂರು ನೀಡಿಲ್ಲ’
ದೂರು ಹಿಂಪಡೆಯಲಿ ನಿರ್ಧರಿಸಿದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು?
Follow us
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 02, 2021 | 8:55 PM

ಬೆಂಗಳೂರು: ನಾನು ನೀಡಿರುವ ದೂರಿನ ಬಗ್ಗೆ ಮಾಹಿತಿ ಪಡೆದುಕೊಂಡರು. ನಾನು ನೀಡಿರುವ ದೂರನ್ನು ಪೊಲೀಸರು ಸ್ವೀಕರಿಸಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಗ್ಗೆ ಕಬ್ಬನ್​ಪಾರ್ಕ್​ ಠಾಣೆ ಸಮೀಪ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಹೇಳಿದರು. ಸಂತ್ರಸ್ತೆ ಕುಟುಂಬ ಬಹಳ ಭಯದಲ್ಲಿ ಬದುಕುತ್ತಿದ್ದಾರೆ. ಸಂತ್ರಸ್ತೆ ಕುಟುಂಬದ ಸದಸ್ಯರೊಬ್ಬರು ಸಂಪರ್ಕಿಸಿದ್ದರು. ನಿನ್ನೆ ನನ್ನನ್ನು ಸಂಪರ್ಕಿಸಿದ್ದ ಸಂತ್ರಸ್ತೆ ಕುಟುಂಬ ಸದಸ್ಯರು. ವಕೀಲರ ಜೊತೆ ಚರ್ಚಿಸಿ ಪೊಲೀಸರಿಗೆ ದೂರು ನೀಡಿದ್ದೇನೆ. ಇದೊಂದು ಬಹಳ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಸಂತ್ರಸ್ತೆ, ಕುಟುಂಬದ ಬಗ್ಗೆ ವಿವರಣೆ ನೀಡಲಾಗುವುದಿಲ್ಲ ಎಂದು ದಿನೇಶ್​ ಹೇಳಿದರು.

ಅಧಿವೇಶನದ ಸಂದರ್ಭವೆಂದು ಈಗ ನಾನು ದೂರು ನೀಡಿಲ್ಲ. ಅಧಿವೇಶನ ಯಾವಾಗ ಇದೆ ಎಂದು ನನಗೆ ಗೊತ್ತಿಲ್ಲ. ಸಂತ್ರಸ್ತೆ ಕುಟುಂಬಸ್ಥರ ಮಾಹಿತಿ ಮೇರೆಗೆ ದೂರು ನೀಡಿದ್ದೇನೆ ಎಂದು ಕಬ್ಬನ್​ಪಾರ್ಕ್​ ಸಮೀಪ ದಿನೇಶ್ ಕಲ್ಲಹಳ್ಳಿ ಹೇಳಿದರು.

ಪೊಲೀಸ್​ ಎಸ್ಕಾರ್ಟ್​ನಲ್ಲಿ ಹೊರಟ ದಿನೇಶ್​ ಈ ನಡುವೆ, ದಿನೇಶ್ ಕಲ್ಲಹಳ್ಳಿಯಿಂದ ದೂರು ಸ್ವೀಕರಿಸಿದ ಪೊಲೀಸರು ಕಾರ್ಯಕರ್ತನ ಹೇಳಿಕೆಯನ್ನ ವಿಡಿಯೋ ರೆಕಾರ್ಡ್‌ ಮಾಡಿದ್ದಾರೆ. ಬಳಿಕ ಕಬ್ಬನ್​ಪಾರ್ಕ್​ ಠಾಣೆಯಿಂದ ಭದ್ರತೆಯಲ್ಲಿ ದಿನೇಶ್​ ಠಾಣೆಯಿಂದ ಹೊರಟರು. ದಿನೇಶ್​ ಕಲ್ಲಹಳ್ಳಿ ತೆರಳ್ತಿರುವ ಕಾರಿನಲ್ಲಿ ಪೊಲೀಸರೂ ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸಿಎಂ ಜೊತೆ ಚರ್ಚಿಸಿದ ಗೃಹಸಚಿವ ಬೊಮ್ಮಾಯಿ ಈ ಮಧ್ಯೆ, ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ಸಿಎಂ ಜೊತೆ ಗೃಹಸಚಿವ ಬೊಮ್ಮಾಯಿ ಚರ್ಚೆ ನಡೆಸಿದರು. ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿದ ಬೊಮ್ಮಾಯಿ ಮುಖ್ಯಮಂತ್ರಿ ಜೊತೆ ಗುಪ್ತಚರ ಇಲಾಖೆಯ ಎಡಿಜಿಪಿ ದಯಾನಂದ್ ಸಹ ಆಗಮಿಸಿದರು.

ಇದನ್ನೂ ಓದಿ: ‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ‘ಸಿಡಿ’ದ ರಾಸಲೀಲೆ ಕರ್ಮಕಾಂಡ: ರಮೇಶ್ ಜಾರಕಿಹೊಳಿ ಹಸಿಬಿಸಿ ದೃಶ್ಯ ರಿಲೀಸ್​

ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ