AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಬೆಂಗಳೂರಿನವರಂತೆ ಸ್ಮಾರ್ಟ್​ ಅಲ್ಲ; ಶೇ. 60ರಷ್ಟು ಶಾಸಕರಿಗೆ ಇದೆ ಅದೇ ಪ್ರವೃತ್ತಿ: ರಾಜಶೇಖರ್ ಮುಲಾಲಿ

ಉತ್ತರ ಕರ್ನಾಟಕದ ಶಾಸಕರನ್ನು ಸಿಲುಕಿಸಲು ಬೆಂಗಳೂರಿನಲ್ಲಿ ಇಂತಹ ದೊಡ್ಡ ಜಾಲವಿದೆ. ಶೇ. 60ರಷ್ಟು ಶಾಸಕರು ಇಂತಹ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ. ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಪಾಪದವರು ಬೆಂಗಳೂರಿನವರಂತೆ ಸ್ಮಾರ್ಟ್ ಅಲ್ಲ.

ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಬೆಂಗಳೂರಿನವರಂತೆ ಸ್ಮಾರ್ಟ್​ ಅಲ್ಲ; ಶೇ. 60ರಷ್ಟು ಶಾಸಕರಿಗೆ ಇದೆ ಅದೇ ಪ್ರವೃತ್ತಿ: ರಾಜಶೇಖರ್ ಮುಲಾಲಿ
ರಾಜಶೇಖರ್​ ಮುಲಾಲಿ
Follow us
Skanda
| Updated By: ಸಾಧು ಶ್ರೀನಾಥ್​

Updated on: Mar 05, 2021 | 3:55 PM

ಯಾದಗಿರಿ: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿ.ಡಿ. ಬಯಲಿಗೆ ಬಿದ್ದ ನಂತರ ಸಂತ್ರಸ್ತ ಮಹಿಳೆಯರು ನನ್ನನ್ನು ಸಂಪರ್ಕಿಸಿದರೆ ಸಿ.ಡಿ. ಬಿಡುಗಡೆ ಮಾಡಲು ಸಹಾಯ ಮಾಡುತ್ತೇನೆ ಎಂಬ ಹೇಳಿಕೆ ಕೊಟ್ಟು ಸಂಚಲನ ಮೂಡಿಸಿದ್ದ ಸಾಮಾಜಿಕ ಹೋರಾಟಗಾರ ರಾಜಶೇಖರ್ ಮುಲಾಲಿ, ಇಂದು ಅದೇ ವಿಚಾರದ ಕುರಿತಾಗಿ ಮತ್ತೆ ಮಾತನಾಡಿದ್ದಾರೆ. ಉತ್ತರ ಕರ್ನಾಟಕದ ಶಾಸಕರನ್ನು ಸಿಲುಕಿಸಲು ಬೆಂಗಳೂರಿನಲ್ಲಿ ಇಂತಹ ದೊಡ್ಡ ಜಾಲವಿದೆ. ಶೇ. 60ರಷ್ಟು ಶಾಸಕರು ಇಂತಹ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ. ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಪಾಪದವರು ಬೆಂಗಳೂರಿನವರಂತೆ ಸ್ಮಾರ್ಟ್ ಅಲ್ಲ ಎಂದು ರಾಜಶೇಖರ್ ಮುಲಾಲಿ ಯಾದಗಿರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

 ಯಾವುದೇ ಸಂತ್ರಸ್ತರಿಗೆ ಜೀವ ಭಯವಿದ್ದರೆ ನಾನು ನ್ಯಾಯ ಒದಗಿಸುವೆ ಈ ಶಾಸಕರೆಲ್ಲರೂ ಪ್ರವೃತ್ತಿಯಿಂದಲೇ ಇಂತಹ ಕೆಲಸ ಮಾಡುತ್ತಿದ್ದಾರೆ. ಧೂಮಪಾನ, ಮದ್ಯಪಾನದಂತೆ ಇದನ್ನೂ ಮಾಡುತ್ತಿದ್ದಾರೆ. ಇಂಥವರನ್ನ ಟಾರ್ಗೆಟ್ ಮಾಡುವ ಜಾಲ ಬೆಂಗಳೂರಿನಲ್ಲಿದೆ. ಈ ಜಾಲಕ್ಕೆ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಶಾಸಕರೇ ಟಾರ್ಗೆಟ್‌. ನಮ್ಮ ಭಾಗದ ಶಾಸಕರು ಮೈ ಮರೆಯದೆ ಎಚ್ಚರಿಕೆಯಿಂದ ಇರಬೇಕು. ಶಾಸಕರಾದವರಿಗೆ ಸಂಸ್ಕೃತಿ, ಸಂಸ್ಕಾರ, ಬುದ್ಧಿ ಇರಬೇಕು‌, ಭಾಗಿಯಾಗುವ ಮುನ್ನ ಹೆಂಡತಿ, ಮಕ್ಕಳನ್ನು ನೆನಪಿಸಿಕೊಳ್ಳಲಿ. ಒಂದು ವೇಳೆ ಯಾವುದೇ ಸಂತ್ರಸ್ತರಿಗೆ ಜೀವ ಭಯವಿದ್ದರೆ ನಾನು ನ್ಯಾಯ ಒದಗಿಸುವೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಮತ್ತೊಂದು ಸುತ್ತಿನ ಅನುಮಾನದ ಹೊಗೆ ಎಬ್ಬಿಸಿದ್ದಾರೆ.

ಕರ್ನಾಟಕದಲ್ಲಿ 224 ಶಾಸಕರ ಪೈಕಿ 60 ಪ್ರತಿಶತ ಶಾಸಕರು ಇಂಥ ಪ್ರಕ್ರಿಯೆಯಲ್ಲಿ ಭಾಗಿ‌ಯಾಗಿದ್ದಾರೆ. ಇದು ಅವರಿಗೆ ಪ್ರವೃತ್ತಿ ಎಂದು ಹೇಳಿರುವುದು ಪಕ್ಷಾತೀತವಾಗಿ ಶಾಸಕರುಗಳ ಮೇಲೆ ಸಂದೇಹ ಪಡುವಂತೆ ಆಗಿದೆ. ಇನ್ನೊಂದೆಡೆ ದಿನೇಶ್ ಕಲ್ಲಹಳ್ಳಿ ಸಹ ತನ್ನ ಬಳಿ ಇನ್ನಷ್ಟು ರಾಜಕಾರಣಿಗಳ ವಿಡಿಯೋ ಇರುವುದಾಗಿ ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಒಂದಷ್ಟು ಅನಿರೀಕ್ಷಿತ ಬೆಳವಣಿಗೆಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ