AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಬೆಂಗಳೂರಿನವರಂತೆ ಸ್ಮಾರ್ಟ್​ ಅಲ್ಲ; ಶೇ. 60ರಷ್ಟು ಶಾಸಕರಿಗೆ ಇದೆ ಅದೇ ಪ್ರವೃತ್ತಿ: ರಾಜಶೇಖರ್ ಮುಲಾಲಿ

ಉತ್ತರ ಕರ್ನಾಟಕದ ಶಾಸಕರನ್ನು ಸಿಲುಕಿಸಲು ಬೆಂಗಳೂರಿನಲ್ಲಿ ಇಂತಹ ದೊಡ್ಡ ಜಾಲವಿದೆ. ಶೇ. 60ರಷ್ಟು ಶಾಸಕರು ಇಂತಹ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ. ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಪಾಪದವರು ಬೆಂಗಳೂರಿನವರಂತೆ ಸ್ಮಾರ್ಟ್ ಅಲ್ಲ.

ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಬೆಂಗಳೂರಿನವರಂತೆ ಸ್ಮಾರ್ಟ್​ ಅಲ್ಲ; ಶೇ. 60ರಷ್ಟು ಶಾಸಕರಿಗೆ ಇದೆ ಅದೇ ಪ್ರವೃತ್ತಿ: ರಾಜಶೇಖರ್ ಮುಲಾಲಿ
ರಾಜಶೇಖರ್​ ಮುಲಾಲಿ
Skanda
| Edited By: ಸಾಧು ಶ್ರೀನಾಥ್​|

Updated on: Mar 05, 2021 | 3:55 PM

Share

ಯಾದಗಿರಿ: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿ.ಡಿ. ಬಯಲಿಗೆ ಬಿದ್ದ ನಂತರ ಸಂತ್ರಸ್ತ ಮಹಿಳೆಯರು ನನ್ನನ್ನು ಸಂಪರ್ಕಿಸಿದರೆ ಸಿ.ಡಿ. ಬಿಡುಗಡೆ ಮಾಡಲು ಸಹಾಯ ಮಾಡುತ್ತೇನೆ ಎಂಬ ಹೇಳಿಕೆ ಕೊಟ್ಟು ಸಂಚಲನ ಮೂಡಿಸಿದ್ದ ಸಾಮಾಜಿಕ ಹೋರಾಟಗಾರ ರಾಜಶೇಖರ್ ಮುಲಾಲಿ, ಇಂದು ಅದೇ ವಿಚಾರದ ಕುರಿತಾಗಿ ಮತ್ತೆ ಮಾತನಾಡಿದ್ದಾರೆ. ಉತ್ತರ ಕರ್ನಾಟಕದ ಶಾಸಕರನ್ನು ಸಿಲುಕಿಸಲು ಬೆಂಗಳೂರಿನಲ್ಲಿ ಇಂತಹ ದೊಡ್ಡ ಜಾಲವಿದೆ. ಶೇ. 60ರಷ್ಟು ಶಾಸಕರು ಇಂತಹ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ. ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಪಾಪದವರು ಬೆಂಗಳೂರಿನವರಂತೆ ಸ್ಮಾರ್ಟ್ ಅಲ್ಲ ಎಂದು ರಾಜಶೇಖರ್ ಮುಲಾಲಿ ಯಾದಗಿರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

 ಯಾವುದೇ ಸಂತ್ರಸ್ತರಿಗೆ ಜೀವ ಭಯವಿದ್ದರೆ ನಾನು ನ್ಯಾಯ ಒದಗಿಸುವೆ ಈ ಶಾಸಕರೆಲ್ಲರೂ ಪ್ರವೃತ್ತಿಯಿಂದಲೇ ಇಂತಹ ಕೆಲಸ ಮಾಡುತ್ತಿದ್ದಾರೆ. ಧೂಮಪಾನ, ಮದ್ಯಪಾನದಂತೆ ಇದನ್ನೂ ಮಾಡುತ್ತಿದ್ದಾರೆ. ಇಂಥವರನ್ನ ಟಾರ್ಗೆಟ್ ಮಾಡುವ ಜಾಲ ಬೆಂಗಳೂರಿನಲ್ಲಿದೆ. ಈ ಜಾಲಕ್ಕೆ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಶಾಸಕರೇ ಟಾರ್ಗೆಟ್‌. ನಮ್ಮ ಭಾಗದ ಶಾಸಕರು ಮೈ ಮರೆಯದೆ ಎಚ್ಚರಿಕೆಯಿಂದ ಇರಬೇಕು. ಶಾಸಕರಾದವರಿಗೆ ಸಂಸ್ಕೃತಿ, ಸಂಸ್ಕಾರ, ಬುದ್ಧಿ ಇರಬೇಕು‌, ಭಾಗಿಯಾಗುವ ಮುನ್ನ ಹೆಂಡತಿ, ಮಕ್ಕಳನ್ನು ನೆನಪಿಸಿಕೊಳ್ಳಲಿ. ಒಂದು ವೇಳೆ ಯಾವುದೇ ಸಂತ್ರಸ್ತರಿಗೆ ಜೀವ ಭಯವಿದ್ದರೆ ನಾನು ನ್ಯಾಯ ಒದಗಿಸುವೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಮತ್ತೊಂದು ಸುತ್ತಿನ ಅನುಮಾನದ ಹೊಗೆ ಎಬ್ಬಿಸಿದ್ದಾರೆ.

ಕರ್ನಾಟಕದಲ್ಲಿ 224 ಶಾಸಕರ ಪೈಕಿ 60 ಪ್ರತಿಶತ ಶಾಸಕರು ಇಂಥ ಪ್ರಕ್ರಿಯೆಯಲ್ಲಿ ಭಾಗಿ‌ಯಾಗಿದ್ದಾರೆ. ಇದು ಅವರಿಗೆ ಪ್ರವೃತ್ತಿ ಎಂದು ಹೇಳಿರುವುದು ಪಕ್ಷಾತೀತವಾಗಿ ಶಾಸಕರುಗಳ ಮೇಲೆ ಸಂದೇಹ ಪಡುವಂತೆ ಆಗಿದೆ. ಇನ್ನೊಂದೆಡೆ ದಿನೇಶ್ ಕಲ್ಲಹಳ್ಳಿ ಸಹ ತನ್ನ ಬಳಿ ಇನ್ನಷ್ಟು ರಾಜಕಾರಣಿಗಳ ವಿಡಿಯೋ ಇರುವುದಾಗಿ ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಒಂದಷ್ಟು ಅನಿರೀಕ್ಷಿತ ಬೆಳವಣಿಗೆಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ