AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಬೆಂಗಳೂರಿನವರಂತೆ ಸ್ಮಾರ್ಟ್​ ಅಲ್ಲ; ಶೇ. 60ರಷ್ಟು ಶಾಸಕರಿಗೆ ಇದೆ ಅದೇ ಪ್ರವೃತ್ತಿ: ರಾಜಶೇಖರ್ ಮುಲಾಲಿ

ಉತ್ತರ ಕರ್ನಾಟಕದ ಶಾಸಕರನ್ನು ಸಿಲುಕಿಸಲು ಬೆಂಗಳೂರಿನಲ್ಲಿ ಇಂತಹ ದೊಡ್ಡ ಜಾಲವಿದೆ. ಶೇ. 60ರಷ್ಟು ಶಾಸಕರು ಇಂತಹ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ. ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಪಾಪದವರು ಬೆಂಗಳೂರಿನವರಂತೆ ಸ್ಮಾರ್ಟ್ ಅಲ್ಲ.

ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಬೆಂಗಳೂರಿನವರಂತೆ ಸ್ಮಾರ್ಟ್​ ಅಲ್ಲ; ಶೇ. 60ರಷ್ಟು ಶಾಸಕರಿಗೆ ಇದೆ ಅದೇ ಪ್ರವೃತ್ತಿ: ರಾಜಶೇಖರ್ ಮುಲಾಲಿ
ರಾಜಶೇಖರ್​ ಮುಲಾಲಿ
Skanda
| Edited By: ಸಾಧು ಶ್ರೀನಾಥ್​|

Updated on: Mar 05, 2021 | 3:55 PM

Share

ಯಾದಗಿರಿ: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿ.ಡಿ. ಬಯಲಿಗೆ ಬಿದ್ದ ನಂತರ ಸಂತ್ರಸ್ತ ಮಹಿಳೆಯರು ನನ್ನನ್ನು ಸಂಪರ್ಕಿಸಿದರೆ ಸಿ.ಡಿ. ಬಿಡುಗಡೆ ಮಾಡಲು ಸಹಾಯ ಮಾಡುತ್ತೇನೆ ಎಂಬ ಹೇಳಿಕೆ ಕೊಟ್ಟು ಸಂಚಲನ ಮೂಡಿಸಿದ್ದ ಸಾಮಾಜಿಕ ಹೋರಾಟಗಾರ ರಾಜಶೇಖರ್ ಮುಲಾಲಿ, ಇಂದು ಅದೇ ವಿಚಾರದ ಕುರಿತಾಗಿ ಮತ್ತೆ ಮಾತನಾಡಿದ್ದಾರೆ. ಉತ್ತರ ಕರ್ನಾಟಕದ ಶಾಸಕರನ್ನು ಸಿಲುಕಿಸಲು ಬೆಂಗಳೂರಿನಲ್ಲಿ ಇಂತಹ ದೊಡ್ಡ ಜಾಲವಿದೆ. ಶೇ. 60ರಷ್ಟು ಶಾಸಕರು ಇಂತಹ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ. ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಪಾಪದವರು ಬೆಂಗಳೂರಿನವರಂತೆ ಸ್ಮಾರ್ಟ್ ಅಲ್ಲ ಎಂದು ರಾಜಶೇಖರ್ ಮುಲಾಲಿ ಯಾದಗಿರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

 ಯಾವುದೇ ಸಂತ್ರಸ್ತರಿಗೆ ಜೀವ ಭಯವಿದ್ದರೆ ನಾನು ನ್ಯಾಯ ಒದಗಿಸುವೆ ಈ ಶಾಸಕರೆಲ್ಲರೂ ಪ್ರವೃತ್ತಿಯಿಂದಲೇ ಇಂತಹ ಕೆಲಸ ಮಾಡುತ್ತಿದ್ದಾರೆ. ಧೂಮಪಾನ, ಮದ್ಯಪಾನದಂತೆ ಇದನ್ನೂ ಮಾಡುತ್ತಿದ್ದಾರೆ. ಇಂಥವರನ್ನ ಟಾರ್ಗೆಟ್ ಮಾಡುವ ಜಾಲ ಬೆಂಗಳೂರಿನಲ್ಲಿದೆ. ಈ ಜಾಲಕ್ಕೆ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಶಾಸಕರೇ ಟಾರ್ಗೆಟ್‌. ನಮ್ಮ ಭಾಗದ ಶಾಸಕರು ಮೈ ಮರೆಯದೆ ಎಚ್ಚರಿಕೆಯಿಂದ ಇರಬೇಕು. ಶಾಸಕರಾದವರಿಗೆ ಸಂಸ್ಕೃತಿ, ಸಂಸ್ಕಾರ, ಬುದ್ಧಿ ಇರಬೇಕು‌, ಭಾಗಿಯಾಗುವ ಮುನ್ನ ಹೆಂಡತಿ, ಮಕ್ಕಳನ್ನು ನೆನಪಿಸಿಕೊಳ್ಳಲಿ. ಒಂದು ವೇಳೆ ಯಾವುದೇ ಸಂತ್ರಸ್ತರಿಗೆ ಜೀವ ಭಯವಿದ್ದರೆ ನಾನು ನ್ಯಾಯ ಒದಗಿಸುವೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಮತ್ತೊಂದು ಸುತ್ತಿನ ಅನುಮಾನದ ಹೊಗೆ ಎಬ್ಬಿಸಿದ್ದಾರೆ.

ಕರ್ನಾಟಕದಲ್ಲಿ 224 ಶಾಸಕರ ಪೈಕಿ 60 ಪ್ರತಿಶತ ಶಾಸಕರು ಇಂಥ ಪ್ರಕ್ರಿಯೆಯಲ್ಲಿ ಭಾಗಿ‌ಯಾಗಿದ್ದಾರೆ. ಇದು ಅವರಿಗೆ ಪ್ರವೃತ್ತಿ ಎಂದು ಹೇಳಿರುವುದು ಪಕ್ಷಾತೀತವಾಗಿ ಶಾಸಕರುಗಳ ಮೇಲೆ ಸಂದೇಹ ಪಡುವಂತೆ ಆಗಿದೆ. ಇನ್ನೊಂದೆಡೆ ದಿನೇಶ್ ಕಲ್ಲಹಳ್ಳಿ ಸಹ ತನ್ನ ಬಳಿ ಇನ್ನಷ್ಟು ರಾಜಕಾರಣಿಗಳ ವಿಡಿಯೋ ಇರುವುದಾಗಿ ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಒಂದಷ್ಟು ಅನಿರೀಕ್ಷಿತ ಬೆಳವಣಿಗೆಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.

Follow Us
Skanda
Skanda
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ