AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತ ಮಹಿಳೆಯರು ನನ್ನನ್ನ ಸಂಪರ್ಕಿಸಿದ್ರೆ ನಾನು ಸಿಡಿ ಬಿಡುಗಡೆ ಮಾಡುವುದಕ್ಕೆ ನೆರವಾಗುವೆ: ರಾಜಶೇಖರ್ ಮುಲಾಲಿ ಓಪನ್​ ಇನ್ವಿಟೇಶನ್​!

ಮಾಜಿ ಮುಖ್ಯಮಂತ್ರಿಯೊಬ್ಬರ ಸಿಡಿ ಸಹ ಇದೆ ಎಂಬ ಬಗ್ಗೆ ಮಾಹಿತಿ ಇದೆ. ಪ್ರತಿ ತಿಂಗಳು ಆ ಮಾಜಿ ಸಿಎಂ ವೈನಾಡಿಗೆ ಹೋಗ್ತಾರೆ. ಅವರು ಅಲ್ಲಿಗೆ ಹೋದಾಗ ಇಬ್ಬರು ಹುಡುಗಿಯರು ಬರುತ್ತಾರೆ. ಅದನ್ನು ಅವರ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಚಿತ್ರೀಕರಣ ಕೂಡ ಮಾಡಿದ್ದಾರೆ ಎನ್ನಲಾಗುತ್ತಿದೆ.

ಸಂತ್ರಸ್ತ ಮಹಿಳೆಯರು ನನ್ನನ್ನ ಸಂಪರ್ಕಿಸಿದ್ರೆ ನಾನು ಸಿಡಿ ಬಿಡುಗಡೆ ಮಾಡುವುದಕ್ಕೆ ನೆರವಾಗುವೆ: ರಾಜಶೇಖರ್ ಮುಲಾಲಿ ಓಪನ್​ ಇನ್ವಿಟೇಶನ್​!
ರಾಜಶೇಖರ್​ ಮುಲಾಲಿ
Skanda
| Edited By: ಸಾಧು ಶ್ರೀನಾಥ್​|

Updated on:Mar 04, 2021 | 1:14 PM

Share

ಬಳ್ಳಾರಿ: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗವಾಗಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸಿರುವ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಎನ್ನುವವರು ನೀಡಿದ ಹೇಳಿಕೆ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಇನ್ನೂ 19 ರಾಜಕಾರಣಿಗಳ ಸಿಡಿ ಇರುವ ಬಗ್ಗೆ ನನಗೆ ಕೆಲವರಿಂದ ಮಾಹಿತಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರು, ಅವರ ಸಂಬಂಧಿಕರು ನನ್ನನ್ನ ಸಂಪರ್ಕಿಸಿದರೆ ನಾನು ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ರಾಜಶೇಖರ್ ಮುಲಾಲಿ ಪಟಾಕಿ ಸಿಡಿಸಿದ್ದಾರೆ.

ಬೆಂಗಳೂರಲ್ಲಿ ರಾಜಕಾರಣಿಗಳನ್ನ ಟ್ರ್ಯಾಪ್ ಮಾಡುವ ಜಾಲವಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕಾರಣಿಗಳ ಸಿಡಿ ಬಿಡುಗಡೆ ಆಗಲಿವೆ. ಅದರಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಸಿಡಿ ಸಹ ಇದೆ ಎಂಬ ಬಗ್ಗೆ ಮಾಹಿತಿ ಇದೆ. ಪ್ರತಿ ತಿಂಗಳು ಆ ಮಾಜಿ ಸಿಎಂ ವೈನಾಡಿಗೆ ಹೋಗ್ತಾರೆ. ಅವರು ಅಲ್ಲಿಗೆ ಹೋದಾಗ ಇಬ್ಬರು ಹುಡುಗಿಯರು ಬರುತ್ತಾರೆ. ಅದನ್ನು ಅವರ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಚಿತ್ರೀಕರಣ ಕೂಡ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕಳೆದ ಮೂರು ವರ್ಷಗಳಿಂದ ಆ ಹುಡುಗ ನಾಪತ್ತೆಯಾಗಿದ್ದಾನೆ. ಕಾಣೆಯಾಗಿರುವವನು ಮೈಸೂರು ಭಾಗದ ಹುಡುಗ ಎಂಬುದಾಗಿ ಗೊತ್ತಾಗಿದೆ ಎನ್ನುವ ಮೂಲಕ ಆ ಮಾಜಿ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಮೂಡಲು ಕಾರಣರಾಗಿದ್ದಾರೆ.

ಸದ್ಯ ಸಂತ್ರಸ್ತೆಯರು ನನ್ನನ್ನು ಸಂಪರ್ಕಿಸಿದರೆ ಸಿಡಿ ಬಿಡುಗಡೆ ಮಾಡಲು ಸಹಾಯ ಮಾಡುವೆ ಎಂದಿರುವ ರಾಜಶೇಖರ್ ಮುಲಾಲಿ ಅವರ ಹೇಳಿಕೆ ಭಾರೀ ಅನುಮಾನಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಯಾವ ಯಾವ ರಾಜಕಾರಣಿಗಳ ವಿಡಿಯೋ ಬಹಿರಂಗವಾಗಲಿದೆ ಎನ್ನುವ ಬಗ್ಗೆ ಚರ್ಚೆಯೂ ಶುರುವಾಗಿದೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಳವಣಿಗೆ ಸಹಿಸಲಾಗದೆ ಬಿಜೆಪಿಯವರೇ ಬ್ರೇಕ್​ ಹಾಕಿರಬಹುದು: ಸತೀಶ್​ ಜಾರಕಿಹೊಳಿ

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..

Published On - 12:07 pm, Thu, 4 March 21

Follow Us
Skanda
Skanda
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ