AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತ ಮಹಿಳೆಯರು ನನ್ನನ್ನ ಸಂಪರ್ಕಿಸಿದ್ರೆ ನಾನು ಸಿಡಿ ಬಿಡುಗಡೆ ಮಾಡುವುದಕ್ಕೆ ನೆರವಾಗುವೆ: ರಾಜಶೇಖರ್ ಮುಲಾಲಿ ಓಪನ್​ ಇನ್ವಿಟೇಶನ್​!

ಮಾಜಿ ಮುಖ್ಯಮಂತ್ರಿಯೊಬ್ಬರ ಸಿಡಿ ಸಹ ಇದೆ ಎಂಬ ಬಗ್ಗೆ ಮಾಹಿತಿ ಇದೆ. ಪ್ರತಿ ತಿಂಗಳು ಆ ಮಾಜಿ ಸಿಎಂ ವೈನಾಡಿಗೆ ಹೋಗ್ತಾರೆ. ಅವರು ಅಲ್ಲಿಗೆ ಹೋದಾಗ ಇಬ್ಬರು ಹುಡುಗಿಯರು ಬರುತ್ತಾರೆ. ಅದನ್ನು ಅವರ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಚಿತ್ರೀಕರಣ ಕೂಡ ಮಾಡಿದ್ದಾರೆ ಎನ್ನಲಾಗುತ್ತಿದೆ.

ಸಂತ್ರಸ್ತ ಮಹಿಳೆಯರು ನನ್ನನ್ನ ಸಂಪರ್ಕಿಸಿದ್ರೆ ನಾನು ಸಿಡಿ ಬಿಡುಗಡೆ ಮಾಡುವುದಕ್ಕೆ ನೆರವಾಗುವೆ: ರಾಜಶೇಖರ್ ಮುಲಾಲಿ ಓಪನ್​ ಇನ್ವಿಟೇಶನ್​!
ರಾಜಶೇಖರ್​ ಮುಲಾಲಿ
Skanda
| Edited By: |

Updated on:Mar 04, 2021 | 1:14 PM

Share

ಬಳ್ಳಾರಿ: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗವಾಗಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸಿರುವ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಎನ್ನುವವರು ನೀಡಿದ ಹೇಳಿಕೆ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಇನ್ನೂ 19 ರಾಜಕಾರಣಿಗಳ ಸಿಡಿ ಇರುವ ಬಗ್ಗೆ ನನಗೆ ಕೆಲವರಿಂದ ಮಾಹಿತಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರು, ಅವರ ಸಂಬಂಧಿಕರು ನನ್ನನ್ನ ಸಂಪರ್ಕಿಸಿದರೆ ನಾನು ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ರಾಜಶೇಖರ್ ಮುಲಾಲಿ ಪಟಾಕಿ ಸಿಡಿಸಿದ್ದಾರೆ.

ಬೆಂಗಳೂರಲ್ಲಿ ರಾಜಕಾರಣಿಗಳನ್ನ ಟ್ರ್ಯಾಪ್ ಮಾಡುವ ಜಾಲವಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕಾರಣಿಗಳ ಸಿಡಿ ಬಿಡುಗಡೆ ಆಗಲಿವೆ. ಅದರಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಸಿಡಿ ಸಹ ಇದೆ ಎಂಬ ಬಗ್ಗೆ ಮಾಹಿತಿ ಇದೆ. ಪ್ರತಿ ತಿಂಗಳು ಆ ಮಾಜಿ ಸಿಎಂ ವೈನಾಡಿಗೆ ಹೋಗ್ತಾರೆ. ಅವರು ಅಲ್ಲಿಗೆ ಹೋದಾಗ ಇಬ್ಬರು ಹುಡುಗಿಯರು ಬರುತ್ತಾರೆ. ಅದನ್ನು ಅವರ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಚಿತ್ರೀಕರಣ ಕೂಡ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕಳೆದ ಮೂರು ವರ್ಷಗಳಿಂದ ಆ ಹುಡುಗ ನಾಪತ್ತೆಯಾಗಿದ್ದಾನೆ. ಕಾಣೆಯಾಗಿರುವವನು ಮೈಸೂರು ಭಾಗದ ಹುಡುಗ ಎಂಬುದಾಗಿ ಗೊತ್ತಾಗಿದೆ ಎನ್ನುವ ಮೂಲಕ ಆ ಮಾಜಿ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಮೂಡಲು ಕಾರಣರಾಗಿದ್ದಾರೆ.

ಸದ್ಯ ಸಂತ್ರಸ್ತೆಯರು ನನ್ನನ್ನು ಸಂಪರ್ಕಿಸಿದರೆ ಸಿಡಿ ಬಿಡುಗಡೆ ಮಾಡಲು ಸಹಾಯ ಮಾಡುವೆ ಎಂದಿರುವ ರಾಜಶೇಖರ್ ಮುಲಾಲಿ ಅವರ ಹೇಳಿಕೆ ಭಾರೀ ಅನುಮಾನಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಯಾವ ಯಾವ ರಾಜಕಾರಣಿಗಳ ವಿಡಿಯೋ ಬಹಿರಂಗವಾಗಲಿದೆ ಎನ್ನುವ ಬಗ್ಗೆ ಚರ್ಚೆಯೂ ಶುರುವಾಗಿದೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಳವಣಿಗೆ ಸಹಿಸಲಾಗದೆ ಬಿಜೆಪಿಯವರೇ ಬ್ರೇಕ್​ ಹಾಕಿರಬಹುದು: ಸತೀಶ್​ ಜಾರಕಿಹೊಳಿ

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..

Published On - 12:07 pm, Thu, 4 March 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ