AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತ ಮಹಿಳೆಯರು ನನ್ನನ್ನ ಸಂಪರ್ಕಿಸಿದ್ರೆ ನಾನು ಸಿಡಿ ಬಿಡುಗಡೆ ಮಾಡುವುದಕ್ಕೆ ನೆರವಾಗುವೆ: ರಾಜಶೇಖರ್ ಮುಲಾಲಿ ಓಪನ್​ ಇನ್ವಿಟೇಶನ್​!

ಮಾಜಿ ಮುಖ್ಯಮಂತ್ರಿಯೊಬ್ಬರ ಸಿಡಿ ಸಹ ಇದೆ ಎಂಬ ಬಗ್ಗೆ ಮಾಹಿತಿ ಇದೆ. ಪ್ರತಿ ತಿಂಗಳು ಆ ಮಾಜಿ ಸಿಎಂ ವೈನಾಡಿಗೆ ಹೋಗ್ತಾರೆ. ಅವರು ಅಲ್ಲಿಗೆ ಹೋದಾಗ ಇಬ್ಬರು ಹುಡುಗಿಯರು ಬರುತ್ತಾರೆ. ಅದನ್ನು ಅವರ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಚಿತ್ರೀಕರಣ ಕೂಡ ಮಾಡಿದ್ದಾರೆ ಎನ್ನಲಾಗುತ್ತಿದೆ.

ಸಂತ್ರಸ್ತ ಮಹಿಳೆಯರು ನನ್ನನ್ನ ಸಂಪರ್ಕಿಸಿದ್ರೆ ನಾನು ಸಿಡಿ ಬಿಡುಗಡೆ ಮಾಡುವುದಕ್ಕೆ ನೆರವಾಗುವೆ: ರಾಜಶೇಖರ್ ಮುಲಾಲಿ ಓಪನ್​ ಇನ್ವಿಟೇಶನ್​!
ರಾಜಶೇಖರ್​ ಮುಲಾಲಿ
Follow us
Skanda
| Updated By: ಸಾಧು ಶ್ರೀನಾಥ್​

Updated on:Mar 04, 2021 | 1:14 PM

ಬಳ್ಳಾರಿ: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗವಾಗಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸಿರುವ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಎನ್ನುವವರು ನೀಡಿದ ಹೇಳಿಕೆ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಇನ್ನೂ 19 ರಾಜಕಾರಣಿಗಳ ಸಿಡಿ ಇರುವ ಬಗ್ಗೆ ನನಗೆ ಕೆಲವರಿಂದ ಮಾಹಿತಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರು, ಅವರ ಸಂಬಂಧಿಕರು ನನ್ನನ್ನ ಸಂಪರ್ಕಿಸಿದರೆ ನಾನು ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ರಾಜಶೇಖರ್ ಮುಲಾಲಿ ಪಟಾಕಿ ಸಿಡಿಸಿದ್ದಾರೆ.

ಬೆಂಗಳೂರಲ್ಲಿ ರಾಜಕಾರಣಿಗಳನ್ನ ಟ್ರ್ಯಾಪ್ ಮಾಡುವ ಜಾಲವಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕಾರಣಿಗಳ ಸಿಡಿ ಬಿಡುಗಡೆ ಆಗಲಿವೆ. ಅದರಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಸಿಡಿ ಸಹ ಇದೆ ಎಂಬ ಬಗ್ಗೆ ಮಾಹಿತಿ ಇದೆ. ಪ್ರತಿ ತಿಂಗಳು ಆ ಮಾಜಿ ಸಿಎಂ ವೈನಾಡಿಗೆ ಹೋಗ್ತಾರೆ. ಅವರು ಅಲ್ಲಿಗೆ ಹೋದಾಗ ಇಬ್ಬರು ಹುಡುಗಿಯರು ಬರುತ್ತಾರೆ. ಅದನ್ನು ಅವರ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಚಿತ್ರೀಕರಣ ಕೂಡ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕಳೆದ ಮೂರು ವರ್ಷಗಳಿಂದ ಆ ಹುಡುಗ ನಾಪತ್ತೆಯಾಗಿದ್ದಾನೆ. ಕಾಣೆಯಾಗಿರುವವನು ಮೈಸೂರು ಭಾಗದ ಹುಡುಗ ಎಂಬುದಾಗಿ ಗೊತ್ತಾಗಿದೆ ಎನ್ನುವ ಮೂಲಕ ಆ ಮಾಜಿ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಮೂಡಲು ಕಾರಣರಾಗಿದ್ದಾರೆ.

ಸದ್ಯ ಸಂತ್ರಸ್ತೆಯರು ನನ್ನನ್ನು ಸಂಪರ್ಕಿಸಿದರೆ ಸಿಡಿ ಬಿಡುಗಡೆ ಮಾಡಲು ಸಹಾಯ ಮಾಡುವೆ ಎಂದಿರುವ ರಾಜಶೇಖರ್ ಮುಲಾಲಿ ಅವರ ಹೇಳಿಕೆ ಭಾರೀ ಅನುಮಾನಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಯಾವ ಯಾವ ರಾಜಕಾರಣಿಗಳ ವಿಡಿಯೋ ಬಹಿರಂಗವಾಗಲಿದೆ ಎನ್ನುವ ಬಗ್ಗೆ ಚರ್ಚೆಯೂ ಶುರುವಾಗಿದೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಳವಣಿಗೆ ಸಹಿಸಲಾಗದೆ ಬಿಜೆಪಿಯವರೇ ಬ್ರೇಕ್​ ಹಾಕಿರಬಹುದು: ಸತೀಶ್​ ಜಾರಕಿಹೊಳಿ

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..

Published On - 12:07 pm, Thu, 4 March 21

ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್