AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ಚುನಾವಣೆಯಲ್ಲಿ ಫೇಸ್​ಬುಕ್ ಹವಾ: ಕೋಟೆನಾಡಿನಲ್ಲಿ ಹಳ್ಳಿಹಕ್ಕಿಗಳ ಪೋಸ್ಟ್ ಕಮೆಂಟ್​ ಅಬ್ಬರ

ಚಿತ್ರದುರ್ಗ, ಹಿರಿಯೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾ.ಪಂ.ಗಳಲ್ಲಿ ಅಭ್ಯರ್ಥಿಗಳು ಸಾಮಾಜಿಕ‌ ಜಾಲತಾಣಗಳನ್ನು ಬಳಸಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಗ್ರಾ.ಪಂ. ಚುನಾವಣೆಯಲ್ಲಿ ಫೇಸ್​ಬುಕ್ ಹವಾ: ಕೋಟೆನಾಡಿನಲ್ಲಿ ಹಳ್ಳಿಹಕ್ಕಿಗಳ ಪೋಸ್ಟ್ ಕಮೆಂಟ್​ ಅಬ್ಬರ
ಸಾಂಕೇತಿಕ ಚಿತ್ರ
guruganesh bhat
| Edited By: |

Updated on: Dec 09, 2020 | 6:38 AM

Share

ಚಿತ್ರದುರ್ಗ: ಕಳೆದ ಕೆಲ ವರ್ಷಗಳಿಂದ ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಂತೂ ಸೋಷಿಯಲ್ ಮೀಡಿಯಾಗಳದ್ದೇ ಹವಾ. ಸಾಮಾಜಿಕ ಜಾಲತಾಣಗಳಲ್ಲಿ ಕಡ್ಡಾಯವಾಗಿ ಖಾತೆ ಹೊಂದುವುದು ರಾಷ್ಟ್ರೀಯ ಪಕ್ಷಗಳಲ್ಲಿ ಕಡ್ಡಾಯ. ನರೇಂದ್ರ ಮೋದಿಯವರು ಪ್ರಧಾನಿ ಪಟ್ಟವೇರಲು ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ಬಳಕೆಯೂ ಕಾರಣ ಎಂಬುದು ಈಗ ಎಲ್ಲರಿಗೂ ಗೊತ್ತಿರುವ ಸತ್ಯ. ಇದೀಗ, ಗ್ರಾಮ ಪಂಚಾಯತಿ​ ಕಣದಲ್ಲೂ ಸಾಮಾಜಿಕ ಜಾಲತಾಣಗಳು ಸದ್ದು ಮಾಡುತ್ತಿವೆ.

ಆನ್​ಲೈನ್​ನಲ್ಲೇ ಮತದಾರರ ಓಲೈಕೆ.. ಚಿತ್ರದುರ್ಗ, ಹಿರಿಯೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾ.ಪಂ.ಗಳಲ್ಲಿ ಅಭ್ಯರ್ಥಿಗಳು ಸಾಮಾಜಿಕ‌ ಜಾಲತಾಣಗಳನ್ನು ಬಳಸಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಮತದಾರರ ಓಲೈಕೆ, ಬಲಾಬಲ, ಜನಪ್ರಿಯತೆ ಅಳೆಯಲು, ಎದುರಾಳಿ ಕುರಿತು ತಿಳಿಯಲು ಅಭ್ಯರ್ಥಿಗಳು ಫೇಸ್​ಬುಕ್ ಬಳಕೆ ಹೆಚ್ಚಿಸಿದ್ದಾರೆ. ಬೆಂಬಲಿಗರು ಲೈಕ್, ಕಮೆಂಟ್ ಮೂಲಕ ಪ್ರೋತ್ಸಾಹ ನೀಡುತ್ತಿದ್ದರೆ‌ ಎದುರಾಳಿಗಳು ಟಾಂಗ್ ನೀಡುತ್ತಿದ್ದಾರೆ.

ಗೆದ್ದವರು ಏನು ಮಾಡಿದ್ದಾರೆ? ಕಳೆದ ಬಾರಿ ಗ್ರಾಮ ಪಂಚಾಯತಿ ಸದಸ್ಯರಾದವರು ಮಾಡಿದ ಕೆಲಸಗಳೇನು? ಗ್ರಾಮ ಅಭಿವೃದ್ಧಿಯಾಗಿದೆಯೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭ್ರಷ್ಟರನ್ನು ಮರು ಆಯ್ಕೆ ಮಾಡದೆ ಯುವಕರಿಗೆ ಅವಕಾಶ ಕಲ್ಪಿಸುವಂತೆ ಗ್ರಾಮಸ್ಥರು ಪೋಸ್ಟ್ ಮಾಡುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಬ್ಬೂರು ಗ್ರಾ.ಪಂ‌ ವಾರ್ಡ್ ನಂಬರ್ -2ರಲ್ಲಿ ಕಣಕ್ಕಿಳಿಯಬಯಸಿರುವ ಪುನೀತ್, ‘ಈಗಾಗಲೇ ಫೇಸ್​ಬುಕ್ ಮೂಲಕ ಕಣಕ್ಕಿಳಿಯುವುದಾಗಿ ಘೋಷಿಸಿಕೊಂಡಿದ್ದೇನೆ. ಮನೆಮನೆಗೆ ಪ್ರಚಾರಕ್ಕೆ ತೆರಳುವ ಮುನ್ನವೇ ನಾನು ಕಣಕ್ಕಿಳಿಯಲಿದ್ದೇನೆ ಎಂದು ನಮ್ಮೂರಿನ ಜನರಿಗೆ ತಿಳಿಯಿತು. ಗ್ರಾಮ ಅಭಿವೃದ್ಧಿ, ನನ್ನ ಗುರಿ ಬಗ್ಗೆಯೂ ಜನರಿಗೆ ವೇಗವಾಗಿ ತಿಳಿಸಲು ಸಾಮಾಜಿಕ ಜಾಲತಾಣ ಬಳಸುತ್ತಿದ್ದೇನೆ’ ಎಂದು ಹೇಳಿದರು.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ