AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ಚುನಾವಣೆಯಲ್ಲಿ ಫೇಸ್​ಬುಕ್ ಹವಾ: ಕೋಟೆನಾಡಿನಲ್ಲಿ ಹಳ್ಳಿಹಕ್ಕಿಗಳ ಪೋಸ್ಟ್ ಕಮೆಂಟ್​ ಅಬ್ಬರ

ಚಿತ್ರದುರ್ಗ, ಹಿರಿಯೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾ.ಪಂ.ಗಳಲ್ಲಿ ಅಭ್ಯರ್ಥಿಗಳು ಸಾಮಾಜಿಕ‌ ಜಾಲತಾಣಗಳನ್ನು ಬಳಸಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಗ್ರಾ.ಪಂ. ಚುನಾವಣೆಯಲ್ಲಿ ಫೇಸ್​ಬುಕ್ ಹವಾ: ಕೋಟೆನಾಡಿನಲ್ಲಿ ಹಳ್ಳಿಹಕ್ಕಿಗಳ ಪೋಸ್ಟ್ ಕಮೆಂಟ್​ ಅಬ್ಬರ
ಸಾಂಕೇತಿಕ ಚಿತ್ರ
guruganesh bhat
| Edited By: ಆಯೇಷಾ ಬಾನು|

Updated on: Dec 09, 2020 | 6:38 AM

Share

ಚಿತ್ರದುರ್ಗ: ಕಳೆದ ಕೆಲ ವರ್ಷಗಳಿಂದ ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಂತೂ ಸೋಷಿಯಲ್ ಮೀಡಿಯಾಗಳದ್ದೇ ಹವಾ. ಸಾಮಾಜಿಕ ಜಾಲತಾಣಗಳಲ್ಲಿ ಕಡ್ಡಾಯವಾಗಿ ಖಾತೆ ಹೊಂದುವುದು ರಾಷ್ಟ್ರೀಯ ಪಕ್ಷಗಳಲ್ಲಿ ಕಡ್ಡಾಯ. ನರೇಂದ್ರ ಮೋದಿಯವರು ಪ್ರಧಾನಿ ಪಟ್ಟವೇರಲು ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ಬಳಕೆಯೂ ಕಾರಣ ಎಂಬುದು ಈಗ ಎಲ್ಲರಿಗೂ ಗೊತ್ತಿರುವ ಸತ್ಯ. ಇದೀಗ, ಗ್ರಾಮ ಪಂಚಾಯತಿ​ ಕಣದಲ್ಲೂ ಸಾಮಾಜಿಕ ಜಾಲತಾಣಗಳು ಸದ್ದು ಮಾಡುತ್ತಿವೆ.

ಆನ್​ಲೈನ್​ನಲ್ಲೇ ಮತದಾರರ ಓಲೈಕೆ.. ಚಿತ್ರದುರ್ಗ, ಹಿರಿಯೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾ.ಪಂ.ಗಳಲ್ಲಿ ಅಭ್ಯರ್ಥಿಗಳು ಸಾಮಾಜಿಕ‌ ಜಾಲತಾಣಗಳನ್ನು ಬಳಸಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಮತದಾರರ ಓಲೈಕೆ, ಬಲಾಬಲ, ಜನಪ್ರಿಯತೆ ಅಳೆಯಲು, ಎದುರಾಳಿ ಕುರಿತು ತಿಳಿಯಲು ಅಭ್ಯರ್ಥಿಗಳು ಫೇಸ್​ಬುಕ್ ಬಳಕೆ ಹೆಚ್ಚಿಸಿದ್ದಾರೆ. ಬೆಂಬಲಿಗರು ಲೈಕ್, ಕಮೆಂಟ್ ಮೂಲಕ ಪ್ರೋತ್ಸಾಹ ನೀಡುತ್ತಿದ್ದರೆ‌ ಎದುರಾಳಿಗಳು ಟಾಂಗ್ ನೀಡುತ್ತಿದ್ದಾರೆ.

ಗೆದ್ದವರು ಏನು ಮಾಡಿದ್ದಾರೆ? ಕಳೆದ ಬಾರಿ ಗ್ರಾಮ ಪಂಚಾಯತಿ ಸದಸ್ಯರಾದವರು ಮಾಡಿದ ಕೆಲಸಗಳೇನು? ಗ್ರಾಮ ಅಭಿವೃದ್ಧಿಯಾಗಿದೆಯೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭ್ರಷ್ಟರನ್ನು ಮರು ಆಯ್ಕೆ ಮಾಡದೆ ಯುವಕರಿಗೆ ಅವಕಾಶ ಕಲ್ಪಿಸುವಂತೆ ಗ್ರಾಮಸ್ಥರು ಪೋಸ್ಟ್ ಮಾಡುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಬ್ಬೂರು ಗ್ರಾ.ಪಂ‌ ವಾರ್ಡ್ ನಂಬರ್ -2ರಲ್ಲಿ ಕಣಕ್ಕಿಳಿಯಬಯಸಿರುವ ಪುನೀತ್, ‘ಈಗಾಗಲೇ ಫೇಸ್​ಬುಕ್ ಮೂಲಕ ಕಣಕ್ಕಿಳಿಯುವುದಾಗಿ ಘೋಷಿಸಿಕೊಂಡಿದ್ದೇನೆ. ಮನೆಮನೆಗೆ ಪ್ರಚಾರಕ್ಕೆ ತೆರಳುವ ಮುನ್ನವೇ ನಾನು ಕಣಕ್ಕಿಳಿಯಲಿದ್ದೇನೆ ಎಂದು ನಮ್ಮೂರಿನ ಜನರಿಗೆ ತಿಳಿಯಿತು. ಗ್ರಾಮ ಅಭಿವೃದ್ಧಿ, ನನ್ನ ಗುರಿ ಬಗ್ಗೆಯೂ ಜನರಿಗೆ ವೇಗವಾಗಿ ತಿಳಿಸಲು ಸಾಮಾಜಿಕ ಜಾಲತಾಣ ಬಳಸುತ್ತಿದ್ದೇನೆ’ ಎಂದು ಹೇಳಿದರು.

Follow Us
guruganesh bhat
guruganesh bhat
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ