AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮದುವೆ ರದ್ದಾಗಿದ್ದಕ್ಕೆ ಮನನೊಂದು ಮಹಿಳೆ ಜೊತೆ ಯೋಧ ಆತ್ಮಹತ್ಯೆ

ಎರಡನೆ ಮದುವೆಗೆ ತಯಾರಿ ನಡೆಸಿದ್ದ ಯೋಧ ಕಿರಣ್ ಕುಮಾರ್ ಮದುವೆ ರದ್ದಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸನ: ಮದುವೆ ರದ್ದಾಗಿದ್ದಕ್ಕೆ ಮನನೊಂದು ಮಹಿಳೆ ಜೊತೆ ಯೋಧ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Nov 11, 2022 | 9:55 PM

Share

ಹಾಸನ: ವಿಧವೆಯ ಜೊತೆ ಮಧುವೆಯಾಗಿರೊ‌ ವಿಚಾರ ಮುಚ್ಚಿಟ್ಟು (cheat) ಎರಡನೆ ಮದುವೆ (marriage) ತಯಾರಿ ನಡೆಸಿದ್ದ ಯೋಧ ಕಿರಣ್ ಕುಮಾರ್ ಮದುವೆ ರಾದ್ಧಾಂತವಾಗಿ ನಿಂತುಹೋಗಿತ್ತು. ಇದರಿಂದ ಮನನೊಂದ ಯೋಧ  army (soldier) ಕಿರಣ್ ಕುಮಾರ್ ಮಹಿಳೆ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರಣ್ ಹಾಗು ಆಶಾ ಮೃತದುರ್ದೈವಿಗಳು. ಇಂದು (ನ. 11) ಯೋಧ ಕಿರಣ್ ಕುಮಾರ್ ಮತ್ತು ಆಶಾ ಹಾಸನ (hassan) ತಾಲ್ಲೂಕಿನ ಹೊಂಗೆರೆ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಹಿನ್ನೆಲೆ

ಯೋಧ ಕಿರಣ್ ಕುಮಾರ್ ವಿಧವೆ ಆಶಾ ಎಂಬುವರನ್ನು ಮದುವೆಯಾಗಿದ್ದರು. ಈಗ ಯೋಧ ಕಿರಣ ಕುಮಾರ್​ ಎರಡನೇ ಮದುವೆಯಾಗಲು ತಯಾರಿ ನಡೆಸಿದ್ದನು. ಈ ಸಂಬಂಧ ನಿನ್ನೆ (ನ. 10) ರಂದು ಹಾಸನ ನಗರದ ಹೊರ ವಲಯದ ಬೂವನಹಳ್ಳಿ ಬಳಿಯ ಕಲ್ಯಾಣ ಮಂಟಪದಲ್ಲಿ ಮದುವೆಗೆ ಸಕಲ ಸಿದ್ಧತೆಯಾಗಿತ್ತು. ವಧು-ವರ ಸಪ್ತಪದಿ ತುಳಿಯುವುದೊಂದೆ ಬಾಕಿ ಇತ್ತು. ಈ ವೇಳೆ ಕಿರಣ ಕುಮಾರನ ಮೊದಲನೇ ಹೆಂಡತಿ ಆಶಾ ಕಲ್ಯಾಣ ಮಂಟಪಕ್ಕ ಬಂದು ಮದುವೆ ನಿಲ್ಲಿಸಿದ್ದಾರೆ.

ಆರು ತಿಂಗಳ ಹಿಂದೆ ಮನೆಯೊಳಗೇ ದೇವರ ಮುಂದೆ ತಾಳಿ ಕಟ್ಟಿ ಮದುವೆಯಾಗಿದ್ದು, ಈಗ ಮತ್ತೊಂದು ಮದುವೆ ಆಗುತ್ತಿದ್ದಾರೆಂಬುದು ಆಶಾ ಆರೋಪ ಮಾಡಿದ್ದಾರೆ. ಮಹಿಳೆ ಬಂದು, ವರ (ಯೋಧ) ಕಿರಣ್ ಕುಮಾರ್ ವಿಚಾರ ಬಹಿರಂಗ ಮಾಡುತ್ತಲೇ ಹುಡುಗಿ ಮನೆಯವರು ಮದುವೆ ನಿಲ್ಲಿಸಿದರು.

ಯೋಧನ ವಂಚನೆ ಬಗ್ಗೆ ಮಹಿಳೆ ಮಾಹಿತಿ ನೀಡುತ್ತಲೆ ಮದುವೆ ಮಂಟಪದಲ್ಲಿ ಅಲ್ಲೋಲಕಲ್ಲೋಲ ಪರಿಸ್ಥಿತಿ ಸೃಷ್ಟಿಯಾಯಿತು. ಮಹಿಳೆಯ ಹೇಳಿಕೆ ಸಂಭ್ರಮದಲ್ಲಿದ್ದವರಿಗೆ ಶಾಕ್ ನೀಡಿತು. ಹಣಕಾಸು ವಿಚಾರದ ಹಿನ್ನೆಲೆಯಲ್ಲಿ ಮದುವೆ ಆಗಿರೊದಾಗಿ ಮಹಿಳೆ ಹೇಳುತ್ತಿರೋದಾಗಿ ಕಿರಣ್ ಪ್ರತಿ ಆರೋಪ ಮಾಡಿದ್ದಾರೆ. ವಿಷಯ ತಿಳಿದು ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ್ದರು. ನಂತರ ಪೊಲೀಸರು ಎಲ್ಲರನ್ನೂ ಠಾಣೆಗೆ ಕರೆದೊಯ್ದು, ವಿಚಾರಣೆ ನಡೆಸಿದರು.

ನಂತರ ಪೊಲೀಸರ ಸಮ್ಮುಖದಲ್ಲಿ ರಾಜಿ ಸಂಧಾನವಾದ ಬಳಿಕ ಯೋಧ ಕಿರಣ್ ಕುಮಾರ್​ ಮತ್ತು ಆಶಾ ಹೊಂಗೆರೆ ಅರಣ್ಯದ ಬಳಿ ತೆರಳಿದ್ದಾರೆ. ಅಲ್ಲಿ ತನ್ನ ಸಂಬಂದಿಯೊಬ್ಬರಿಗೆ ವಾಟ್ಸಾಪ್ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:20 pm, Fri, 11 November 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ