AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್ ವಿಚಾರವಾಗಿ ಯೋಧನ ಕುಟುಂಬಸ್ಥರ ಮೇಲೆ BJP ಮುಖಂಡನಿಂದ ಹಲ್ಲೆ ಆರೋಪ.. DC ಮೊರೆ ಹೋದ ಮಹಿಳೆ

ಬೆಳಗಾವಿ: ಸೈಟ್ ವಿಚಾರವಾಗಿ ಯೋಧನ ಕುಟುಂಬಸ್ಥರ ಮೇಲೆ ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ್ ಸೇರಿ ಇಬ್ಬರು ಸಂಗಡಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸೈಟ್ ವಿಚಾರವಾಗಿ ಯೋಧನ ಕುಟುಂಬಸ್ಥರ ಮೇಲೆ BJP ಮುಖಂಡನಿಂದ ಹಲ್ಲೆ ಆರೋಪ.. DC ಮೊರೆ ಹೋದ ಮಹಿಳೆ
ಮಗನ ಮೇಲಾಗಿರುವ ಹಲ್ಲೆ ತೋರಿಸಿ ಕಣ್ಣೀರು ಹಾಕುತ್ತಿರುವ ಯೋಧನ ಪತ್ನಿ ಇಂದಿರಾ
Follow us
ಆಯೇಷಾ ಬಾನು
|

Updated on: Feb 03, 2021 | 9:14 AM

ಬೆಳಗಾವಿ: ಸೈಟ್ ವಿಚಾರವಾಗಿ ಯೋಧನ ಕುಟುಂಬಸ್ಥರ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ ನಡೆದಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿಯಲ್ಲಿ ನಡೆದಿದೆ. ಜಿಲ್ಲಾ ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಜನವರಿ 31ರಂದು ಯೋಧ ಭೀಮಪ್ಪ ನರಸಗೋಳ ಮಗ ವಿಜಯ್‌ ಮೇಲೆ ರಾಡ್‌ನಿಂದ ಮನಬಂದಂತೆ ಜಿಲ್ಲಾ ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ್ ಹಾಗೂ ಇಬ್ಬರು ಸಂಗಡಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ರೂ ದೂರು ಸ್ವೀಕರಿಸಲಿಲ್ಲ ಎಂದು ಮಾಳಮಾರುತಿ ಪೊಲೀಸರ ವಿರುದ್ಧ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ರಾಜಿಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ ಎಂದು ಮಾಳಮಾರುತಿ ಸಿಪಿಐ ಸೂಚಿಸಿದ್ರು ಎಂದು ಯೋಧನ ಪತ್ನಿ ಆರೋಪಿಸಿದ್ದಾರೆ. ಗಾಯಾಳು ಮಗ, ಇಬ್ಬರು ಮಕ್ಕಳ ಸಮೇತ ಯೋಧನ ಪತ್ನಿ ಇಂದಿರಾ ಆಗಮಿಸಿ ಡಿಸಿಗೆ ದೂರು ನೀಡಿದ್ದಾರೆ.

2005ರಲ್ಲಿ ಯೋಧ ಭೀಮಪ್ಪ ನರಸಗೋಳ ಸೈಟ್ ಖರೀದಿಸಿದ್ದು ಕಣಬರಗಿ ಬಸ್‌ನಿಲ್ದಾಣ ಬಳಿಯ‌ ಪ್ಲಾಟ್ ನಂಬರ್ 423/1/1 ಕುರಿತು ವಿವಾದವಾಗಿದೆ. ರಾಡ್​ನಿಂದ ಮಗನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆದಷ್ಟು ಬೇಗ ಕ್ರಮ ಕೈಗೊಳ್ಳಿ, ನ್ಯಾಯ ದೊರಕಿಸಿಕೊಡಿ ಎಂದು ಯೋಧ ಭೀಮಪ್ಪ ನರಸಗೋಳ ಪತ್ನಿ ಇಂದಿರಾ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ.

ಗಡಿ ಕಾಯುವ ಯೋಧನ ಕುಟುಂಬಕ್ಕೆ BBMP, BWSSB ಮೋಸ?

ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ