AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಂಡಾಲ್‌ ಹಾಕುವವನ ಮಗ ಯುಪಿಎಸ್‌ಸಿಯಲ್ಲಿ ದೇಶಕ್ಕೆ 446ನೇ ಱಂಕ್‌

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಆನಂದ ಕಲಾದಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಕ್ಕೆ 446 ಱಂಕ್‌ ಪಡೆಯುವ ಮೂಲಕ ಬಾಗಲಕೋಟೆ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾನೆ. ಆನಂದ ತಂದೆ ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಕಡೆ ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳಿಗೆ ಶಾಮಿಯಾನಾ ಹಾಕುವ ಕಾರ್ಯ ಮಾಡುತ್ತಾರೆ. ಮಗ ಆನಂದ ಕಲಾದಗಿ ಬಿಇ ಮುಗಿಸಿದ್ದು, ಸದ್ಯ ಯುಪಿಎಸ್‌ಸಿ ಪಾಸ್ ಆಗಿದ್ದಾರೆ. ತಂದೆ ರಾಜ್ ಪೆಂಡಾಲ್ ಹೆಸರಲ್ಲಿ ಪೆಂಡಾಲ್ ಹಾಕುವ ಕಾರ್ಯ […]

ಪೆಂಡಾಲ್‌ ಹಾಕುವವನ ಮಗ ಯುಪಿಎಸ್‌ಸಿಯಲ್ಲಿ ದೇಶಕ್ಕೆ 446ನೇ ಱಂಕ್‌
Guru
|

Updated on: Aug 04, 2020 | 7:49 PM

Share

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಆನಂದ ಕಲಾದಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಕ್ಕೆ 446 ಱಂಕ್‌ ಪಡೆಯುವ ಮೂಲಕ ಬಾಗಲಕೋಟೆ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾನೆ.

ಆನಂದ ತಂದೆ ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಕಡೆ ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳಿಗೆ ಶಾಮಿಯಾನಾ ಹಾಕುವ ಕಾರ್ಯ ಮಾಡುತ್ತಾರೆ. ಮಗ ಆನಂದ ಕಲಾದಗಿ ಬಿಇ ಮುಗಿಸಿದ್ದು, ಸದ್ಯ ಯುಪಿಎಸ್‌ಸಿ ಪಾಸ್ ಆಗಿದ್ದಾರೆ. ತಂದೆ ರಾಜ್ ಪೆಂಡಾಲ್ ಹೆಸರಲ್ಲಿ ಪೆಂಡಾಲ್ ಹಾಕುವ ಕಾರ್ಯ ಮಾಡುತ್ತಾ ಮೇಲೆ ಬಂದವರು.

ಚಿಕ್ಕಂದಿನಲ್ಲಿ ಆನಂದ ತಂದೆ ವೀರೇಶ್ ಅವರು ಚಿಕ್ಕ ಪುಟ್ಟ ಹೊಟೆಲ್‌ಗಳಲ್ಲಿ ಕೆಲಸ ನಂತರ ಸಣ್ಣ ಚಹಾದ ಅಂಗಡಿ, ನಂತರ ರಾಜ್ ಪೆಂಡಾಲ್ ಹೆಸರಲ್ಲಿ ಸ್ವಂತ ಶಾಮಿಯಾನಾ ಹಾಕಿದರು. ಮಗನನ್ನು ಅವನಿಚ್ಚೆಯಂತೆ ಓದಿಸಿದ ತಂದೆ ಮಗನ ಯುಪಿಎಸ್‌ಸಿ ಕನಸಿಗೆ ನೀರೆರೆದು ಪೋಷಿಸಿದ್ದಾರೆ. ತಂದೆ ಕೇವಲ‌ ಮೂರನೇ ತರಗತಿ ಓದಿದ್ದು ತಾಯಿ ಏಳನೇ ತರಗತಿ ಓದಿದ್ದಾರೆ.

ಆನಂದ ತಮ್ಮ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಕನ್ನಡ ಮಾದ್ಯಮದಲ್ಲೇ ಓದಿದ್ದಾರೆ. ನನ್ನ ಸಾಧನೆಗೆ ನಮ್ಮ ತಂದೆತಾಯಿ ಕಾರಣ ಎನ್ನುವ ಆನಂದ ಪಿಯುಸಿವರೆಗೂ ಜಮಖಂಡಿ ‌ನಗರದಲ್ಲೇ ಶಿಕ್ಷಣ ಮುಗಿಸಿ, ಬೆಳಗಾವಿಯಲ್ಲಿ ಬಿಇ ಮುಗಿಸಿದ್ದಾರೆ. ಎರಡನೇ ಪ್ರಯತ್ನದಲ್ಲಿಯೇ ಯುಪಿಎಸ್‌ಸಿ ಪಾಸ್ ಆಗಿದ್ದು, 446 ನೇ ಱಂಕ್ ಗಳಿಸಿದ್ದಾರೆ. ಈಗ ಐಪಿಎಸ್‌ ಕ್ಯಾಡರ್‌ನ ನಿರೀಕ್ಷೆಯಲ್ಲಿದ್ದು, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಆಸಕ್ತಿ ಹೊಂದಿದ್ದಾರೆ.

ಯುಪಿಎಸ್‌ಸಿ ಪರೀಕ್ಷೆಯನ್ನು ಆಂಗ್ಲ ಮಾಧ್ಯಮದಲ್ಲಿ ಬರೆದಿದ್ದು, ಆಪ್ಷನಲ್ ಆಗಿ ಕನ್ನಡ ಸಾಹಿತ್ಯವನ್ನು ಆಯ್ಕೆ ಮಾಡಿಕೊಂಡಿದ್ದರು. ದಿನಕ್ಕೆ ಎಂಟು ತಾಸು ಓದುತ್ತಿದ್ದ ಆನಂದ್‌, ಪರಿಣಾಮಕಾರಿಯಾಗಿ ಅಧ್ಯಯನ ಮಾಡಿದರೆ ಯುಪಿಎಸ್‌ಸಿ ಪಾಸ್ ಆಗಬಹುದೆನ್ನುವುದನ್ನು ಸಾಧಿಸಿ ತೋರಿಸಿದ್ದಾರೆ.-ರವಿ ಮೂಕಿ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ