AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಿಪ್ರಿಯರೇ ಸೋನಾಕ್ಷಿ ಸಿನ್ಹಾಳ ‘ಗಬ್ರು’ ನೋಡಿದ್ದೀರಾ?

‘ಅದು ಯಾರಾದರೂ ಸರಿ ಅವರ ಮುಖದಲ್ಲಿ ಒಂದೆಳೆಯಾದರೂ ನಗುವನ್ನರಳಿಸುವ ಪ್ರಯತ್ನವನ್ನು ಗಬ್ರು ಮಾಡುತ್ತಿದ್ದಾನೆ’ ಎಂಬ ಸಾಲಿನೊಂದಿಗೆ ಈ ಹಿಂದೆ ಸೋನಾಕ್ಷಿ ಪೋಸ್ಟ್​ ಮಾಡಿದ್ದರು.

ಪ್ರಾಣಿಪ್ರಿಯರೇ ಸೋನಾಕ್ಷಿ ಸಿನ್ಹಾಳ ‘ಗಬ್ರು’ ನೋಡಿದ್ದೀರಾ?
ಗಬ್ರು ಜೊತೆಗೆ ಸೋನಾಕ್ಷಿ ಸಿನ್ಹಾ
guruganesh bhat
| Edited By: |

Updated on: Dec 18, 2020 | 9:06 PM

Share

ಇಡೀ ಜಗತ್ತೇ ಕೊರೋನಾ ಸಂಕಷ್ಟದಲ್ಲಿ ಮುಳುಗಿದ್ದರೂ ಸಾಮಾಜಿಕ ಜಾಳತಾಣದ ಕಿಟಕಿಯ ಮೂಲಕವೇ  ತಮ್ಮ ಅಭಿಮಾನಿಗಳನ್ನು ರಂಜಿಸುವ ಪ್ರಯತ್ನವನ್ನು ನಟನಟಿಯರು ಮಾಡುತ್ತಲೇ ಇದ್ದಾರೆ.  ಈ ಪೈಕಿ ಸದ್ಯಕ್ಕೆ ಸುದ್ದಿ ಮಾಡುತ್ತಿರುವುದು ದಬಾಂಗ್​-3 ನಾಯಕಿ ಸೋನಾಕ್ಷಿ ಸಿನ್ಹಾ ಮತ್ತು ಅವರ ಮನೆಯ ನಾಯಿ ತೆಗೆಸಿಕೊಂಡ ಫೋಟೋ.

ಹೌದು, ಲಾಕ್​ಡೌನ್​ ಸ್ಟಾರ್ಟ್​ ಆದ ನಂತರದಲ್ಲಿ ಸಾಕಷ್ಟು ನಟ-ನಟಿಯರು ತಾವು ಮನೆಯಲ್ಲಿ ಏನು ಮಾಡುತ್ತಿದ್ದೇವೆ ಎನ್ನುವ ಪಿನ್​ ಟು ಪಿನ್​ ಅಪ್ಡೇಟ್​ ಕೊಡುತ್ತಿದ್ದಾರೆ. ಕೆಲವರು ಮನೆಯಲ್ಲಿ ಮಾಡುವ ರುಚಿರುಚಿಯಾದ ಅಡುಗೆ ಫೋಟೋ ಹಾಕಿಕೊಂಡರೆ ಇನ್ನೂ ಕೆಲವರು ಯೋಗಾಸನದ ಚಿತ್ರಗಳನ್ನು ಹಾಕಿಕೊಂಡಿದ್ದಾರೆ. ಅದೇ ರೀತಿ ನಟಿ ಸೋನಾಕ್ಷಿ ತಮ್ಮ ಮನೆಯ ಮುದ್ದಿನ ನಾಯಿ ಚಿತ್ರ ಅಪ್​ಲೋಡ್​ ಮಾಡಿದ್ದಾರೆ.

‘ಅದು ಯಾರಾದರೂ ಸರಿ ಅವರ ಮುಖದಲ್ಲಿ ಒಂದೆಳೆಯಾದರೂ ನಗುವನ್ನರಳಿಸುವ ಪ್ರಯತ್ನವನ್ನು ಗಬ್ರು ಮಾಡುತ್ತಿದ್ದಾನೆ’ ಎಂಬ ಸಾಲಿನೊಂದಿಗೆ ಈ ಹಿಂದೆ ಸೋನಾಕ್ಷಿ ಪೋಸ್ಟ್​ ಮಾಡಿದ್ದರು. ಈಗ ಸೋನಾಕ್ಷಿ ಗಬ್ರು ಜೊತೆ ಇರುವ ಹೊಸ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಪರಸ್ಪರ ಕಣ್ಣೋಟವೇ ಜೀವಾಳ. ಹೀಗಾಗಿ ಇದು ಏಕಕಾಲಕ್ಕೆ ಸಿನಿಪ್ರಿಯರೊಂದಿಗೆ ಪ್ರಾಣಿಪ್ರಿಯರ ಗಮನವನ್ನೂ ಸೆಳೆದು ಲಕ್ಷಾಂತರ ಲೈಕುಗಳನ್ನು ಗಳಿಸಿದೆ.

View this post on Instagram

A post shared by Sonakshi Sinha (@aslisona)

ಸಿನಿಮಾ ವಿಚಾರಕ್ಕೆ ಬರೋದಾದರೆ ಸೋನಾಕ್ಷಿ ಸಿನ್ಹಾ ಈಗ ಮೊದಲಿನಷ್ಟು ಮಾರುಕಟ್ಟೆ ಉಳಿಸಿಕೊಂಡಿಲ್ಲ. ಸಲ್ಮಾನ್​ ಖಾನ್​ ನಟನೆಯ ದಬಾಂಗ್​ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರಿಗೆ ಸಾಲುಸಾಲು ಚಿತ್ರಗಳು ಸಿಕ್ಕವು. ಆದರೆ, ಇತ್ತೀಚೆಗೆ ಅವರು ನಟಿಸಿದ ಸಿನಿಮಾಗಳು ಪ್ಲಾಫ್​ ಆಗುತ್ತಿವೆ. ಹೀಗಾಗಿ, ನಿರ್ಮಾಪಕರು ಅವರ ಮನೆಯ ಕದ ತಟ್ಟುತ್ತಿಲ್ಲ. ಸದ್ಯ, ಭುಜ್​: ದಿ ಪ್ರೈಡ್​ ಆಫ್​ ಇಂಡಿಯಾ ಚಿತ್ರದಲ್ಲಿ ಸೋನಾಕ್ಷಿ ನಟಿಸುತ್ತಿದ್ದಾರೆ. ಸಲ್ಮಾನ್​-ಸುದೀಪ್​ ಒಟ್ಟಾಗಿ ಕಾಣಿಸಿಕೊಂಡಿದ್ದ ದಬಾಂಗ್​-3 ಅವರ ಕೊನೆಯ ಚಿತ್ರ. ಈ ಸಿನಿಮಾ ಅಂದುಕೊಂಡಷ್ಟು ಮಟ್ಟಿಗೆ ಹಿಟ್​ ಆಗಿಲ್ಲ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ