AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಿಪ್ರಿಯರೇ ಸೋನಾಕ್ಷಿ ಸಿನ್ಹಾಳ ‘ಗಬ್ರು’ ನೋಡಿದ್ದೀರಾ?

‘ಅದು ಯಾರಾದರೂ ಸರಿ ಅವರ ಮುಖದಲ್ಲಿ ಒಂದೆಳೆಯಾದರೂ ನಗುವನ್ನರಳಿಸುವ ಪ್ರಯತ್ನವನ್ನು ಗಬ್ರು ಮಾಡುತ್ತಿದ್ದಾನೆ’ ಎಂಬ ಸಾಲಿನೊಂದಿಗೆ ಈ ಹಿಂದೆ ಸೋನಾಕ್ಷಿ ಪೋಸ್ಟ್​ ಮಾಡಿದ್ದರು.

ಪ್ರಾಣಿಪ್ರಿಯರೇ ಸೋನಾಕ್ಷಿ ಸಿನ್ಹಾಳ ‘ಗಬ್ರು’ ನೋಡಿದ್ದೀರಾ?
ಗಬ್ರು ಜೊತೆಗೆ ಸೋನಾಕ್ಷಿ ಸಿನ್ಹಾ
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 18, 2020 | 9:06 PM

Share

ಇಡೀ ಜಗತ್ತೇ ಕೊರೋನಾ ಸಂಕಷ್ಟದಲ್ಲಿ ಮುಳುಗಿದ್ದರೂ ಸಾಮಾಜಿಕ ಜಾಳತಾಣದ ಕಿಟಕಿಯ ಮೂಲಕವೇ  ತಮ್ಮ ಅಭಿಮಾನಿಗಳನ್ನು ರಂಜಿಸುವ ಪ್ರಯತ್ನವನ್ನು ನಟನಟಿಯರು ಮಾಡುತ್ತಲೇ ಇದ್ದಾರೆ.  ಈ ಪೈಕಿ ಸದ್ಯಕ್ಕೆ ಸುದ್ದಿ ಮಾಡುತ್ತಿರುವುದು ದಬಾಂಗ್​-3 ನಾಯಕಿ ಸೋನಾಕ್ಷಿ ಸಿನ್ಹಾ ಮತ್ತು ಅವರ ಮನೆಯ ನಾಯಿ ತೆಗೆಸಿಕೊಂಡ ಫೋಟೋ.

ಹೌದು, ಲಾಕ್​ಡೌನ್​ ಸ್ಟಾರ್ಟ್​ ಆದ ನಂತರದಲ್ಲಿ ಸಾಕಷ್ಟು ನಟ-ನಟಿಯರು ತಾವು ಮನೆಯಲ್ಲಿ ಏನು ಮಾಡುತ್ತಿದ್ದೇವೆ ಎನ್ನುವ ಪಿನ್​ ಟು ಪಿನ್​ ಅಪ್ಡೇಟ್​ ಕೊಡುತ್ತಿದ್ದಾರೆ. ಕೆಲವರು ಮನೆಯಲ್ಲಿ ಮಾಡುವ ರುಚಿರುಚಿಯಾದ ಅಡುಗೆ ಫೋಟೋ ಹಾಕಿಕೊಂಡರೆ ಇನ್ನೂ ಕೆಲವರು ಯೋಗಾಸನದ ಚಿತ್ರಗಳನ್ನು ಹಾಕಿಕೊಂಡಿದ್ದಾರೆ. ಅದೇ ರೀತಿ ನಟಿ ಸೋನಾಕ್ಷಿ ತಮ್ಮ ಮನೆಯ ಮುದ್ದಿನ ನಾಯಿ ಚಿತ್ರ ಅಪ್​ಲೋಡ್​ ಮಾಡಿದ್ದಾರೆ.

‘ಅದು ಯಾರಾದರೂ ಸರಿ ಅವರ ಮುಖದಲ್ಲಿ ಒಂದೆಳೆಯಾದರೂ ನಗುವನ್ನರಳಿಸುವ ಪ್ರಯತ್ನವನ್ನು ಗಬ್ರು ಮಾಡುತ್ತಿದ್ದಾನೆ’ ಎಂಬ ಸಾಲಿನೊಂದಿಗೆ ಈ ಹಿಂದೆ ಸೋನಾಕ್ಷಿ ಪೋಸ್ಟ್​ ಮಾಡಿದ್ದರು. ಈಗ ಸೋನಾಕ್ಷಿ ಗಬ್ರು ಜೊತೆ ಇರುವ ಹೊಸ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಪರಸ್ಪರ ಕಣ್ಣೋಟವೇ ಜೀವಾಳ. ಹೀಗಾಗಿ ಇದು ಏಕಕಾಲಕ್ಕೆ ಸಿನಿಪ್ರಿಯರೊಂದಿಗೆ ಪ್ರಾಣಿಪ್ರಿಯರ ಗಮನವನ್ನೂ ಸೆಳೆದು ಲಕ್ಷಾಂತರ ಲೈಕುಗಳನ್ನು ಗಳಿಸಿದೆ.

View this post on Instagram

A post shared by Sonakshi Sinha (@aslisona)

ಸಿನಿಮಾ ವಿಚಾರಕ್ಕೆ ಬರೋದಾದರೆ ಸೋನಾಕ್ಷಿ ಸಿನ್ಹಾ ಈಗ ಮೊದಲಿನಷ್ಟು ಮಾರುಕಟ್ಟೆ ಉಳಿಸಿಕೊಂಡಿಲ್ಲ. ಸಲ್ಮಾನ್​ ಖಾನ್​ ನಟನೆಯ ದಬಾಂಗ್​ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರಿಗೆ ಸಾಲುಸಾಲು ಚಿತ್ರಗಳು ಸಿಕ್ಕವು. ಆದರೆ, ಇತ್ತೀಚೆಗೆ ಅವರು ನಟಿಸಿದ ಸಿನಿಮಾಗಳು ಪ್ಲಾಫ್​ ಆಗುತ್ತಿವೆ. ಹೀಗಾಗಿ, ನಿರ್ಮಾಪಕರು ಅವರ ಮನೆಯ ಕದ ತಟ್ಟುತ್ತಿಲ್ಲ. ಸದ್ಯ, ಭುಜ್​: ದಿ ಪ್ರೈಡ್​ ಆಫ್​ ಇಂಡಿಯಾ ಚಿತ್ರದಲ್ಲಿ ಸೋನಾಕ್ಷಿ ನಟಿಸುತ್ತಿದ್ದಾರೆ. ಸಲ್ಮಾನ್​-ಸುದೀಪ್​ ಒಟ್ಟಾಗಿ ಕಾಣಿಸಿಕೊಂಡಿದ್ದ ದಬಾಂಗ್​-3 ಅವರ ಕೊನೆಯ ಚಿತ್ರ. ಈ ಸಿನಿಮಾ ಅಂದುಕೊಂಡಷ್ಟು ಮಟ್ಟಿಗೆ ಹಿಟ್​ ಆಗಿಲ್ಲ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ