AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸೋನು ಸೂದ್ ಲೋಕೋಪಕಾರಿ ಕಾರ್ಯಕ್ಕೆ ವಿಶ್ವ ಸಂಸ್ಥೆ ಉಘೇ ಉಘೇ

ಬಹುಭಾಷಾ ನಟ ಸೋನು ಸೂದ್ ಯಾರಿಗೆ ಗೊತ್ತಿಲ್ಲ ಹೇಳಿ. ತಮ್ಮ ನಟನೆಯಿಂದ ಜನರ ಮನ ಗೆದ್ದರೆ. ತಮ್ಮ ಲೋಕೋಪಕಾರಿ ಕಾರ್ಯಗಳಿಂದ ಜನರ ಮನಸಲ್ಲಿ ಮನೆ ಮಾಡಿದ್ದಾರೆ. ಸದಾ ತಮ್ಮಿಂದಾಗುವ ಸಹಾಯಗಳನ್ನು, ಉಪಕಾರಗಳನ್ನು ಮಾಡುತ್ತ ಸೃಜನಶೀಲ ಹಾಗೂ ಒಳ್ಳೆಯ ವ್ಯಕ್ತಿತ್ಯ ಹೊಂದಿರೋ ಸೋನು ಸೂದ್ ಒಬ್ಬ ರಿಯಲ್ ಹೀರೋ. ಈಗ ಇವರ ಈ ನಿಸ್ವಾರ್ಥ ಸೇವೆ ಗಮನಿಸಿ ವಿಶ್ವಸಂಸ್ಥೆ ಸೋನು ಸೂದ್​ಗೆ ಎಸ್​ಡಿಜಿ ಪ್ರಶಸ್ತಿ ನೀಡುವ ಮೂಲಕ ಗೌರವಿಸಿದೆ. ಕೊರೊನಾ ಲಾಕ್​ಡೌನ್ ವೇಳೆ ಕೆಲಸ ಕಳೆದುಕೊಂಡು ತಮ್ಮ ಊರುಗಳಿಗೂ […]

ನಟ ಸೋನು ಸೂದ್ ಲೋಕೋಪಕಾರಿ ಕಾರ್ಯಕ್ಕೆ ವಿಶ್ವ ಸಂಸ್ಥೆ ಉಘೇ ಉಘೇ
ಆಯೇಷಾ ಬಾನು
|

Updated on:Nov 24, 2020 | 7:42 AM

Share

ಬಹುಭಾಷಾ ನಟ ಸೋನು ಸೂದ್ ಯಾರಿಗೆ ಗೊತ್ತಿಲ್ಲ ಹೇಳಿ. ತಮ್ಮ ನಟನೆಯಿಂದ ಜನರ ಮನ ಗೆದ್ದರೆ. ತಮ್ಮ ಲೋಕೋಪಕಾರಿ ಕಾರ್ಯಗಳಿಂದ ಜನರ ಮನಸಲ್ಲಿ ಮನೆ ಮಾಡಿದ್ದಾರೆ. ಸದಾ ತಮ್ಮಿಂದಾಗುವ ಸಹಾಯಗಳನ್ನು, ಉಪಕಾರಗಳನ್ನು ಮಾಡುತ್ತ ಸೃಜನಶೀಲ ಹಾಗೂ ಒಳ್ಳೆಯ ವ್ಯಕ್ತಿತ್ಯ ಹೊಂದಿರೋ ಸೋನು ಸೂದ್ ಒಬ್ಬ ರಿಯಲ್ ಹೀರೋ. ಈಗ ಇವರ ಈ ನಿಸ್ವಾರ್ಥ ಸೇವೆ ಗಮನಿಸಿ ವಿಶ್ವಸಂಸ್ಥೆ ಸೋನು ಸೂದ್​ಗೆ ಎಸ್​ಡಿಜಿ ಪ್ರಶಸ್ತಿ ನೀಡುವ ಮೂಲಕ ಗೌರವಿಸಿದೆ.

ಕೊರೊನಾ ಲಾಕ್​ಡೌನ್ ವೇಳೆ ಕೆಲಸ ಕಳೆದುಕೊಂಡು ತಮ್ಮ ಊರುಗಳಿಗೂ ಹೋಗಲಾಗದೆ ಕೆಂಗೆಟ್ಟಿದ್ದ ಲಕ್ಷಾಂತರ ವಲಸೆ ಕಾರ್ಮಿಕರಿಗೆ ತಮ್ಮ ತಮ್ಮ ಗೂಡು ಸೇರಲು ಸೋನು ಸೂದ್ ನೆರವಾಗಿದ್ರು. ಸಾರಿಗೆ ವ್ಯವಸ್ಥೆ ಮಾಡಿ ಅವರಿಗೆ ತಮ್ಮ ಊರನ್ನು ತಲುಪಿಸಿದ್ರು. ಇವರಲ್ಲಿ ಅನೇಕರಿಗೆ ಉಚಿತವಾಗಿ ವಸತಿ ಸೌಕರ್ಯಗಳನ್ನು ಸಹ ಒದಗಿಸಿದ್ರು. ಬಡ ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸಲು ಸಹ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದರು. ಲಾಕ್​ಡೌನ್ ಸಮಯದಲ್ಲಿ ಸೋನು ಸೂದ್ ಅವರ ಈ ಲೋಕೋಪಕಾರಿ ಕಾರ್ಯಕ್ಕೆ ವಿಶ್ವಸಂಸ್ಥೆ ಪ್ರತಿಷ್ಠಿತ ಎಸ್​ಡಿಜಿ ಪ್ರಶಸ್ತಿ ನೀಡಿ ಸನ್ಮಾನಿಸಿದೆ.

ಇದನ್ನೂ ಓದಿ: ತರಕಾರಿ ಮಾರುತ್ತಿದ್ದ ಟೆಕ್ಕಿ ಯುವತಿಗೆ ಕರೆದು ಕೆಲಸ ಕೊಟ್ಟ ಸೋನು ಸೂದ್ The Real Hero

ದೊಡ್ಡ ಮಾನ್ಯತೆ ಸಿಕ್ಕಿದೆ ಎಂದು ಸೋನು ಸೂದ್ ಸಂತೋಷ ಸೋಮವಾರ ಸಂಜೆ ನಡೆದ ಸಮಾರಂಭದಲ್ಲಿ ನಟ ಸೋನು ಸೂದ್​ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೋನು ಸೂದ್ ಈಗ ಏಂಜಲೀನಾ ಜೋಲೀ, ಡೇವಿಡ್ ಬೆಕ್ಹ್ಯಾಮ್, ಲಿಯೊನಾರ್ಡೊ ಡಿಕಾಪ್ರಿಯೊ, ಎಮ್ಮಾ ವ್ಯಾಟ್ಸನ್, ಲಿಯಾಮ್ ನೀಸನ್, ಕೇಟ್ ಬ್ಲಾಂಚೆಟ್, ಆಂಟೋನಿಯೊ ಬಾಂಡೆರಾಸ್, ನಿಕೋಲ್ ಕಿಡ್ಮನ್, ಮತ್ತು ಪ್ರಿಯಾಂಕಾ ಚೋಪ್ರಾ ಅವರ ಲೀಗ್‌ಗೆ ಸೇರ್ಪಡೆಗೊಂಡಿದ್ದಾರೆ.

ಇದು ಅಪರೂಪದ ಗೌರವ. ಯುಎನ್ ಮಾನ್ಯತೆ ಬಹಳ ವಿಶೇಷವಾಗಿದೆ. ಯಾವುದೇ ನಿರೀಕ್ಷೆಗಳಿಲ್ಲದೆ ನನ್ನ ದೇಶವಾಸಿಗಳಿಗೆ ನಾನು ಮಾಡಿದ ಸಣ್ಣ ಸಹಾಯಕ್ಕೆ ದೊಡ್ಡ ಮಾನ್ಯತೆ ಸಿಕ್ಕಿದೆ ಎಂದು ಸೋನು ಸೂದ್ ಸಂತೋಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಣೇಶನ ಹಬ್ಬಕ್ಕೆ ‘ಸೂಪರ್​ ಹೀರೋ’ ಸೋನು ಸೂದ್​ ಏನು ಮಾಡಿದ್ದಾರೆ ನೋಡಿ?!

Published On - 1:05 pm, Wed, 30 September 20

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ