AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸೋನು ಸೂದ್​ಗೆ ಅಗ್ರಸ್ಥಾನ

ಮಹಾಮಾರಿ ಕೊರೊನಾ ಸೊಂಕಿನ ಅಟ್ಟಹಾಸದ ಅವಧಿಯಲ್ಲಿ ಅಕ್ಷರಶಃ ನಲುಗಿ ಹೋಗಿದ್ದ ಜನರ ಕಷ್ಟಕ್ಕೆ ನೆರವಾದ ನಟ ಸೋನು ಸೂದ್ ಅವರ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯೂ ಈ ಹಿಂದೆ ಶ್ಲಾಘಿಸಿತ್ತು.

ಏಷ್ಯಾ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸೋನು ಸೂದ್​ಗೆ ಅಗ್ರಸ್ಥಾನ
ನಟ ಸೋನು ಸೂದ್
sandhya thejappa
sandhya thejappa| Edited By: |

Updated on: Dec 11, 2020 | 4:21 PM

Share

ಬ್ರಿಟನ್​ನ ಈಸ್ಟರ್ನ್​ ಐ ವಾರಪತ್ರಿಕೆ ಪ್ರಕಟಿಸಿರುವ ಏಷ್ಯನ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಟ ಸೂನು ಸೂದ್​ ಅವರಿಗೆ ಮೊದಲ ಸ್ಥಾನ ಸಿಕ್ಕಿದೆ. ಮಹಾಮಾರಿ ಕೊರೊನಾ ಸೊಂಕಿನ ಅಟ್ಟಹಾಸದ ಅವಧಿಯಲ್ಲಿ ಅಕ್ಷರಶಃ ನಲುಗಿ ಹೋಗಿದ್ದ ಜನರ ಕಷ್ಟಕ್ಕೆ ನೆರವಾದ ನಟ ಸೋನು ಸೂದ್ ಅವರ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯೂ ಈ ಹಿಂದೆ ಶ್ಲಾಘಿಸಿತ್ತು.

ತಮಿಳು, ಹಿಂದಿ, ತೆಲುಗು ಚಿತ್ರಗಳ ಜನಪ್ರಿಯ ನಟ ಸೋನು ಸೂದ್ ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ತಲುಪಲು ಮತ್ತು ಇತರ ರೀತಿಯಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ನೆರವಾಗಲು ಶ್ರಮಿಸಿದ್ದರು. ಲಾಕ್​ಡೌನ್ ಸಂದರ್ಭದಲ್ಲಿ ಜನರ ಬವಣೆ ಹೆಚ್ಚಾಯಿತು. ಅವರಿಗೆ ಸಹಾಯ ಮಾಡುವುದು ನನ್ನ ಕರ್ತವ್ಯ ಎಂದುಕೊಂಡು ನೆರವಿನ ಹಸ್ತ ಚಾಚಿದೆ. ಸಹಾಯ ಸ್ವೀಕರಿಸಿದವರ ಪ್ರೀತಿ ನನಗೆ ಆಶೀರ್ವಾದ ಇದ್ದಂತೆ. ನನ್ನ ಕೊನೆಯುಸಿರು ಇರುವವರೆಗೂ ಇಂಥ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದು ಸೋನು ಸೂದ್ ಪ್ರತಿಕ್ರಿಯಿಸಿದ್ದಾರೆ.

ದಿ ಪರ್ಸನಲ್​ ಹಿಸ್ಟರಿ ಆಫ್ ಡೇವಿಡ್ ಕಾಪರ್ಫೀಲ್ಡ್ ಮತ್ತು ದಿ ಗ್ರೀನ್​ ನೈಟ್​ನಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ ಭಾರತೀಯ ನಟ ದೇವ್ ಪಟೇಲ್ ಸೆಲೆಬ್ರೆಟಿಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಗಾಯಕ ಅರ್ಮಾನ್ ಮಲಿಕ್ (5), ಜನಪ್ರಿಯ ತಾರೆ ಪ್ರಿಯಾಂಕಾ ಚೋಪ್ರಾ (6), ಟಾಲಿವುಡ್ ಸ್ಟಾರ್ ಪ್ರಭಾಸ್ (7), ಹಾಲಿವುಡ್​ನ ಮಿಂಡಿ ಕಾಲಿಂಗ್ (8), ಭಾರತೀಯ ಟಿವಿ ತಾರೆ ಸುರ್ಬಿ ಚಾಂದನಾ (9) ಮತ್ತು ಅಮಿತಾಬ್ ಬಚ್ಚನ್ (20) ಈ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.

ನಟ ಸೋನು ಸೂದ್ ಲೋಕೋಪಕಾರಿ ಕಾರ್ಯಕ್ಕೆ ವಿಶ್ವ ಸಂಸ್ಥೆ ಉಘೇ ಉಘೇ

Follow Us
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್