AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸೋನು ಸೂದ್​ಗೆ ಅಗ್ರಸ್ಥಾನ

ಮಹಾಮಾರಿ ಕೊರೊನಾ ಸೊಂಕಿನ ಅಟ್ಟಹಾಸದ ಅವಧಿಯಲ್ಲಿ ಅಕ್ಷರಶಃ ನಲುಗಿ ಹೋಗಿದ್ದ ಜನರ ಕಷ್ಟಕ್ಕೆ ನೆರವಾದ ನಟ ಸೋನು ಸೂದ್ ಅವರ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯೂ ಈ ಹಿಂದೆ ಶ್ಲಾಘಿಸಿತ್ತು.

ಏಷ್ಯಾ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸೋನು ಸೂದ್​ಗೆ ಅಗ್ರಸ್ಥಾನ
ನಟ ಸೋನು ಸೂದ್
sandhya thejappa
| Edited By: |

Updated on: Dec 11, 2020 | 4:21 PM

Share

ಬ್ರಿಟನ್​ನ ಈಸ್ಟರ್ನ್​ ಐ ವಾರಪತ್ರಿಕೆ ಪ್ರಕಟಿಸಿರುವ ಏಷ್ಯನ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಟ ಸೂನು ಸೂದ್​ ಅವರಿಗೆ ಮೊದಲ ಸ್ಥಾನ ಸಿಕ್ಕಿದೆ. ಮಹಾಮಾರಿ ಕೊರೊನಾ ಸೊಂಕಿನ ಅಟ್ಟಹಾಸದ ಅವಧಿಯಲ್ಲಿ ಅಕ್ಷರಶಃ ನಲುಗಿ ಹೋಗಿದ್ದ ಜನರ ಕಷ್ಟಕ್ಕೆ ನೆರವಾದ ನಟ ಸೋನು ಸೂದ್ ಅವರ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯೂ ಈ ಹಿಂದೆ ಶ್ಲಾಘಿಸಿತ್ತು.

ತಮಿಳು, ಹಿಂದಿ, ತೆಲುಗು ಚಿತ್ರಗಳ ಜನಪ್ರಿಯ ನಟ ಸೋನು ಸೂದ್ ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ತಲುಪಲು ಮತ್ತು ಇತರ ರೀತಿಯಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ನೆರವಾಗಲು ಶ್ರಮಿಸಿದ್ದರು. ಲಾಕ್​ಡೌನ್ ಸಂದರ್ಭದಲ್ಲಿ ಜನರ ಬವಣೆ ಹೆಚ್ಚಾಯಿತು. ಅವರಿಗೆ ಸಹಾಯ ಮಾಡುವುದು ನನ್ನ ಕರ್ತವ್ಯ ಎಂದುಕೊಂಡು ನೆರವಿನ ಹಸ್ತ ಚಾಚಿದೆ. ಸಹಾಯ ಸ್ವೀಕರಿಸಿದವರ ಪ್ರೀತಿ ನನಗೆ ಆಶೀರ್ವಾದ ಇದ್ದಂತೆ. ನನ್ನ ಕೊನೆಯುಸಿರು ಇರುವವರೆಗೂ ಇಂಥ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದು ಸೋನು ಸೂದ್ ಪ್ರತಿಕ್ರಿಯಿಸಿದ್ದಾರೆ.

ದಿ ಪರ್ಸನಲ್​ ಹಿಸ್ಟರಿ ಆಫ್ ಡೇವಿಡ್ ಕಾಪರ್ಫೀಲ್ಡ್ ಮತ್ತು ದಿ ಗ್ರೀನ್​ ನೈಟ್​ನಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ ಭಾರತೀಯ ನಟ ದೇವ್ ಪಟೇಲ್ ಸೆಲೆಬ್ರೆಟಿಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಗಾಯಕ ಅರ್ಮಾನ್ ಮಲಿಕ್ (5), ಜನಪ್ರಿಯ ತಾರೆ ಪ್ರಿಯಾಂಕಾ ಚೋಪ್ರಾ (6), ಟಾಲಿವುಡ್ ಸ್ಟಾರ್ ಪ್ರಭಾಸ್ (7), ಹಾಲಿವುಡ್​ನ ಮಿಂಡಿ ಕಾಲಿಂಗ್ (8), ಭಾರತೀಯ ಟಿವಿ ತಾರೆ ಸುರ್ಬಿ ಚಾಂದನಾ (9) ಮತ್ತು ಅಮಿತಾಬ್ ಬಚ್ಚನ್ (20) ಈ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.

ನಟ ಸೋನು ಸೂದ್ ಲೋಕೋಪಕಾರಿ ಕಾರ್ಯಕ್ಕೆ ವಿಶ್ವ ಸಂಸ್ಥೆ ಉಘೇ ಉಘೇ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ