AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಪಿಬಿ ಆರೋಗ್ಯ ಸ್ಥಿರವಾಗಿದೆ, ಫಿಜಿಯೋಥೆರಪಿ ಆರಂಭಿಸಲಾಗಿದೆ: ಚರಣ್

ಕೊರೊನಾ ಸೋಂಕಿಗೀಡಾಗಿ ಚೆನೈ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದೆರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಮಗ ಎಸ್ ಪಿ ಚರಣ್ ಹೊಸ ವಿಡಿಯೊವೊಂದರ ಮೂಲಕ ಎಸ್​ಪಿ ಅವರ ಶೀಘ್ರ ಚೇತರಿಕೆಗೆ ಎಡೆಬಿಡದೆ ಪ್ರಾರ್ಥಿಸುತ್ತಿರುವ ಕೊಟ್ಯಾಂತರ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ‘‘ನಮ್ಮ ತಂದೆ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೈದ್ಯರು ಅವರಿಗೆ ಫಿಜಿಯೋಥೆರಪಿ ಶುರು ಮಾಡಿದ್ದಾರೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’’ ಎಂಬ […]

ಎಸ್ಪಿಬಿ ಆರೋಗ್ಯ ಸ್ಥಿರವಾಗಿದೆ, ಫಿಜಿಯೋಥೆರಪಿ ಆರಂಭಿಸಲಾಗಿದೆ: ಚರಣ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 27, 2020 | 6:46 PM

Share

ಕೊರೊನಾ ಸೋಂಕಿಗೀಡಾಗಿ ಚೆನೈ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದೆರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಮಗ ಎಸ್ ಪಿ ಚರಣ್ ಹೊಸ ವಿಡಿಯೊವೊಂದರ ಮೂಲಕ ಎಸ್​ಪಿ ಅವರ ಶೀಘ್ರ ಚೇತರಿಕೆಗೆ ಎಡೆಬಿಡದೆ ಪ್ರಾರ್ಥಿಸುತ್ತಿರುವ ಕೊಟ್ಯಾಂತರ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.

‘‘ನಮ್ಮ ತಂದೆ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೈದ್ಯರು ಅವರಿಗೆ ಫಿಜಿಯೋಥೆರಪಿ ಶುರು ಮಾಡಿದ್ದಾರೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’’ ಎಂಬ ವಿಡಿಯೋ ಸಂದೇಶವನ್ನು ಚರಣ್ ಬಿಡುಗಡೆ ಮಾಡಿದ್ದಾರೆ.

ಚರಣ್, ತಮ್ಮ ತಂದೆಯನ್ನು ಭೇಟಿಯಾಗಿ ಅವರೊಂದಿಗೆ ಮಾತನಾಡಿ ಬಂದಿರುವ ಬಗ್ಗೆಯೂ ಹೇಳಿಕೊಂಡಿದ್ದಾರೆ.

‘‘ತಂದೆಯವದರು ಒಂದು ಕಾಗದದ ಮೇಲೆ ತಮ್ಮ ಅನಿಸಿಕೆಯನ್ನು ಬರೆಯಲು ಪ್ರಯತ್ನಿಸಿದರು, ಆದರೆ ಕೈಯಲ್ಲಿ ಪೆನ್ ಹಿಡಿದುಕೊಳ್ಳುವುದು ಅವರಿಗೆ ಸಾಧ್ಯವಾಗಲಿಲ್ಲ, ಈ ವಾರಾಂತ್ಯದ ವೇಳೆಗೆ ಅವರು ಬರೆಯಲು ಶಕ್ತರಾಗುತ್ತಾರೆಂಬ ಭರವಸೆ ನನಗಿದೆ’’ ಎಂದು ಚರಣ್ ಹೇಳಿದ್ದಾರೆ

ಏತನ್ಮಧ್ಯೆ, ಆಸ್ಪತ್ರೆ ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ, ಎಸ್​ಪಿ ಅವರ ಆರೋಗ್ಯ ಸ್ಥಿರವಾಗಿದ್ದು ಅವರಿಗೆ ವೆಂಟಿಲೇಟರ್ ಮೇಲಿರಿಸಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಅಂತ ಹೇಳಲಾಗಿದೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ