ಬೆಂಗಳೂರು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಭೀತಿ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಸಡಗರ ಕಳೆಗಟ್ಟಿದೆ. ಬಸವನಗುಡಿಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಗಣೇಶನಿಗೆ ವಿಷೇಶ ಪೂಜೆ ಅಭಿಷೇಕ ಶುರುವಾಗಿದೆ. ಸಾಮಾಜಿಕ ಅಂತರದೊಂದಿಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಗಣಪನ ಭಕ್ತರು ಅಂತರದೊಂದಿಗೆ ದರ್ಶನ ಪಡೆಯುತ್ತಿದ್ದಾರೆ.
ಗಣೇಶ ಹಬ್ಬಕ್ಕೆ ದೊಡ್ಡ ಗಣಪತಿ ದೇವಾಲಯದಲ್ಲಿ ವಿಷೇಶ ಪೂಜೆ ಇರುವುದಿಲ್ಲ ಎಂದು ನಿನ್ನೆ ತಿಳಿಸಲಾಗಿತ್ತು. ಆದರೆ ಹಬ್ಬದ ಕಾರಣ ವಿನಾಯಕನಿಗೆ ವಿಷೇಶ ಪೂಜೆ ಮಾಡಲಾಗುತ್ತಿದೆ. ಆದರೆ ಪ್ರತೀ ವರ್ಷದಂತೆ ಈ ವರ್ಷ ಆಚರಣೆ ಇರುವುದಿಲ್ಲ.