8 ತಿಂಗಳಿಂದ ಮಾಸಾಶನ ಬಿಡುಗಡೆ ಮಾಡದ ಸರ್ಕಾರ.. ನೂರಾರು ದಿವ್ಯಾಂಗರು ಬೀದಿಪಾಲು

ಬೆಂಗಳೂರು: ಸರ್ಕಾರ ಮಾಶಾಸನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ನೂರಾರು ದಿವ್ಯಾಂಗರು ಬೀದಿಗಳಿದು ಪ್ರತಿಭಟನೆ ಮಾಡಿರುವ ಘಟನೆ ಹೊಸ ರೋಡು ಬಳಿಯಿರುವ ಚೂಡಸಂದ್ರದಲ್ಲಿ ನಡೆದಿದೆ. ಕೊರೊನಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ 1,000 ರೂ ಹೆಚ್ಚುವರಿ ಅನುದಾನ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಯಾವ ಹೆಚ್ಚುವರಿ ಹಣವು ನಮ್ಮ ಕೈಸೇರಿಲ್ಲ. ಜೊತೆಗೆ, ರಾಜ್ಯ ಸರ್ಕಾರ ಪ್ರತಿ ತಿಂಗಳು ನೀಡುತ್ತಿದ್ದ 1,400 ರೂಪಾಯಿ ಅನುದಾನವು ಕೂಡ ಜನವರಿ ತಿಂಗಳಿಂದ ಬಂದಿಲ್ಲ. ಹೀಗಾಗಿ, ನಮಗೆ ದಿನದ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ರಾಜ್ಯದಲ್ಲಿ ಒಟ್ಟು […]

8 ತಿಂಗಳಿಂದ ಮಾಸಾಶನ ಬಿಡುಗಡೆ ಮಾಡದ ಸರ್ಕಾರ.. ನೂರಾರು ದಿವ್ಯಾಂಗರು ಬೀದಿಪಾಲು
ಸಾಧು ಶ್ರೀನಾಥ್​ Edited By:

Updated on: Aug 30, 2020 | 4:57 PM

ಬೆಂಗಳೂರು: ಸರ್ಕಾರ ಮಾಶಾಸನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ನೂರಾರು ದಿವ್ಯಾಂಗರು ಬೀದಿಗಳಿದು ಪ್ರತಿಭಟನೆ ಮಾಡಿರುವ ಘಟನೆ ಹೊಸ ರೋಡು ಬಳಿಯಿರುವ ಚೂಡಸಂದ್ರದಲ್ಲಿ ನಡೆದಿದೆ.

ಕೊರೊನಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ 1,000 ರೂ ಹೆಚ್ಚುವರಿ ಅನುದಾನ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಯಾವ ಹೆಚ್ಚುವರಿ ಹಣವು ನಮ್ಮ ಕೈಸೇರಿಲ್ಲ. ಜೊತೆಗೆ, ರಾಜ್ಯ ಸರ್ಕಾರ ಪ್ರತಿ ತಿಂಗಳು ನೀಡುತ್ತಿದ್ದ 1,400 ರೂಪಾಯಿ ಅನುದಾನವು ಕೂಡ ಜನವರಿ ತಿಂಗಳಿಂದ ಬಂದಿಲ್ಲ.

ಹೀಗಾಗಿ, ನಮಗೆ ದಿನದ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ರಾಜ್ಯದಲ್ಲಿ ಒಟ್ಟು 15 ಲಕ್ಷಕ್ಕೂ ಹೆಚ್ಚು ದಿವ್ಯಾಂಗರಿದ್ದಾರೆ. ಅವರಲ್ಲಿ ಶೇ.40 ರಷ್ಟು ಜನಕ್ಕೆ ಹಣ ಬಿಡುಗಡೆ ಆಗಿಲ್ಲ. ಇದರಿಂದ, ಮನೆ ಬಾಡಿಗೆ ಕಟ್ಟಲಾಗದೆ ಬೀದಿಗೆ ಬೀಳುವ ಆತಂಕದಲ್ಲಿದ್ದೇವೆ.

ಬೇರೆ ಸಂಘ ಸಂಸ್ಥೆಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ. ಆದರೆ ದಿವ್ಯಾಂಗರಿಗೆ ದ್ರೋಹ ಮಾಡುತ್ತಿದೆ. ನಮಗೆ ಸಾಯುವ ಸ್ಥಿತಿ ಬಂದಿದೆ ಎಂದು ದಿವ್ಯಾಂಗರು ತಮ್ಮ ಅಳಲು ತೋಡಿಕೊಂಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us