AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಸಿಬ್ಬಂದಿಯ ಎಡವಟ್ಟು: ಮಗಳ ಮುಖವನ್ನ ಕೊನೇ ಬಾರಿ ನೋಡಲಾಗದೆ ತಾಯಿಯ ರೋದನೆ

ಚಿಕ್ಕಮಗಳೂರು : ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವಿಶೇಷಚೇತನ ಯುವತಿಯೊಬ್ಬರು ಆಸ್ಪತ್ರೆಯಲ್ಲಿ ನರಳಿ ನರಳಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಗೌರಿ ಕಾಲುವೆಯ ವಿಶೇಷಚೇತನ ಯುವತಿ ನಾಫೀಯಾ ಮೃತ ದುರ್ದೈವಿ. ನಾಫೀಯಾ ಮೊದಲ ವರ್ಷದ ಬಿಕಾಂ ವಿದ್ಯಾರ್ಥಿ. ಇತ್ತೀಚೆಗೆ, ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯುವತಿಯ ಕೊರೊನಾ ರಿಪೋರ್ಟ್ ಇಲ್ಲ ಎಂಬ ಕಾರಣದಿಂದಾಗಿ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ನಂತರ ಜಿಲ್ಲಾಸ್ಪತ್ರೆಗೆ ಯುವತಿಯನ್ನು ಕರೆದುಕೊಂಡು ಹೋಗಲಾಗಿದೆ. ಆದರೆ […]

ಆಸ್ಪತ್ರೆ ಸಿಬ್ಬಂದಿಯ ಎಡವಟ್ಟು: ಮಗಳ ಮುಖವನ್ನ ಕೊನೇ ಬಾರಿ ನೋಡಲಾಗದೆ ತಾಯಿಯ ರೋದನೆ
ಸಾಧು ಶ್ರೀನಾಥ್​
| Edited By: |

Updated on: Jul 31, 2020 | 5:15 PM

Share

ಚಿಕ್ಕಮಗಳೂರು : ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವಿಶೇಷಚೇತನ ಯುವತಿಯೊಬ್ಬರು ಆಸ್ಪತ್ರೆಯಲ್ಲಿ ನರಳಿ ನರಳಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಗೌರಿ ಕಾಲುವೆಯ ವಿಶೇಷಚೇತನ ಯುವತಿ ನಾಫೀಯಾ ಮೃತ ದುರ್ದೈವಿ. ನಾಫೀಯಾ ಮೊದಲ ವರ್ಷದ ಬಿಕಾಂ ವಿದ್ಯಾರ್ಥಿ. ಇತ್ತೀಚೆಗೆ, ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯುವತಿಯ ಕೊರೊನಾ ರಿಪೋರ್ಟ್ ಇಲ್ಲ ಎಂಬ ಕಾರಣದಿಂದಾಗಿ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು.

ನಂತರ ಜಿಲ್ಲಾಸ್ಪತ್ರೆಗೆ ಯುವತಿಯನ್ನು ಕರೆದುಕೊಂಡು ಹೋಗಲಾಗಿದೆ. ಆದರೆ ಅಲ್ಲಿ ಯುವತಿಯನ್ನು ಮೂರು ಗಂಟೆಗಳ ಕಾಲ ಬೆಡ್ ನೀಡದೆ ಅಲೆದಾಡಿಸಿದ್ದರು. ಈ ಕಾರಣದಿಂದಾಗಿ ಯುವತಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಜುಲೈ 24ರಂದು ಸಾವನ್ನಪ್ಪಿದ್ದರು. ಆದರೆ, ಯುವತಿಗೆ ಕೊರೊನಾ ಸೋಂಕಿರಬಹುದು ಎಂದು ಆಸ್ಪತ್ರೆ ಸಿಬ್ಬಂದಿ ಆಕೆಯ ಮೃತದೇಹವನ್ನು ಸಂಬಂಧಿಕರಿಗೆ ನೀಡಿರಲಿಲ್ಲ.

ಆದರೆ ನಿನ್ನೆ ಯುವತಿಯ ಕೊರೊನಾ ವರದಿ ಬಂದಿದ್ದು, ಆಕೆಗೆ, ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಹೀಗಾಗಿ, ಆಸ್ಪತ್ರೆ ಸಿಬ್ಬಂದಿಯವರ ಎಡವಟ್ಟಿನಿಂದಾಗಿ ನನ್ನ ಮಗಳ ಮುಖವನ್ನು ಕೊನೇ ಬಾರಿ ನೋಡಲಿ ಆಗಲೇ ಇಲ್ಲ ಎಂದು ಆಕೆಯ ತಾಯಿ ಕಣ್ಣೀರಿಟ್ಟರು.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ