AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ

ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ.

ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ
ಸೋನು ಸೂದ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on:Mar 22, 2021 | 7:51 PM

Share

ಬಹುಭಾಷಾ ನಟ ಸೋನು ಸೂದ್​ ಅವರು ಅನೇಕರ ಪಾಲಿಗೆ ರಿಯಲ್​ ಹೀರೋ. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಬಡವರಿಗೆ ಮಾಡಿದ ಸಹಾಯ ಒಂದೆರಡಲ್ಲ. ಸಾರಿಗೆ ವ್ಯವಸ್ಥೆ ಇಲ್ಲದೇ ಇದ್ದಾಗ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವ ಜವಾಬ್ದಾರಿಯನ್ನು ಸೋನು ಹೊತ್ತುಕೊಂಡಿದ್ದರು. ಅಲ್ಲದೆ, ಲಾಕ್​ಡೌನ್​ ಬಳಿಕವೂ ಅವರು ಬಡವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಲಿಲ್ಲ. ಅದಕ್ಕಾಗಿ ಅವರಿಗೆ ಈಗಲೂ ಎಲ್ಲರಿಂದ ಗೌರವ ಸಂದಾಯ ಆಗುತ್ತಲೇ ಇದೆ.

ಹೋದಲ್ಲೆಲ್ಲ ಸೋನುಗೆ ಸನ್ಮಾನ ಮಾಡಲಾಗುತ್ತಿದೆ. ಈಗ ಮತ್ತೊಂದು ವಿಶೇಷ ಗೌರವ ಅವರಿಗೆ ಸಿಕ್ಕಿದೆ. ಸ್ಪೈಸ್​ ಜೆಟ್​ ವಿಮಾನದ ಮೇಲೆ ಸೋನು ಫೋಟೋವನ್ನು ದೊಡ್ಡದಾಗಿ ಹಾಕಲಾಗಿದೆ. ದೇಶಾದ್ಯಂತ ಈ ವಿಮಾನಗಳು ಹಾರಾಡುತ್ತಿವೆ. ಆ ಮೂಲಕ ಬಡವರ ಪಾಲಿನ ರಿಯಲ್​ ಹೀರೋಗೆ ಗೌರವ ಸಲ್ಲಿಕೆ ಆಗುತ್ತಿದೆ. ಅದನ್ನು ಕಂಡು ಸೋನು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಸ್ವತಃ ಸೋನು ಕೂಡ ಈ ಬಗ್ಗೆ ಸಂತಸದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರಲು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ. ತಮ್ಮ ಜೊತೆ ಒಳ್ಳೆಯ ಕಾರ್ಯದಲ್ಲಿ ಭಾಗಿ ಆದ ಸೋನುಗೆ ಈಗ ಇಂಥ ವಿಶೇಷ ರೀತಿಯಲ್ಲಿ ಗೌರವ ಸೂಚಿಸಿದೆ.

‘ಈ ಫೋಟೋಗಳನ್ನು ನೋಡಿದಾಗ ನನಗೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ದೇಶದ ಹಲವಾರು ಏರ್​ಪೋರ್ಟ್​ಗಳಲ್ಲಿ ಈ ವಿಮಾನಗಳಿವೆ. ಲೇಹ್​, ಪಂಜಾಬ್​​, ಹೈದರಾಬಾದ್​, ದೆಹಲಿ ಮುಂತಾದ ಕಡೆಗಳಿಂದ ಜನರು ಅದರ ಫೋಟೋ ತೆಗೆದು ನನಗೆ ಕಳಿಸುತ್ತಿದ್ದಾರೆ. ನಾನು ಧನ್ಯ. ಆದರೆ ಈ ಸಂದರ್ಭದಲ್ಲಿ ಇದನ್ನೆಲ್ಲ ನನ್ನ ತಂದೆ-ತಾಯಿ ನೋಡಲು ಸಾಧ್ಯವಾಗಲಿಲ್ಲ’ ಎಂದು ಸೋನು ಎಮೋಷನಲ್​ ಆಗಿದ್ದಾರೆ.

View this post on Instagram

A post shared by Sonu Sood (@sonu_sood)

ಮೊದಲೆಲ್ಲ ವಿಲನ್​ ಆಗಿ ಸಿನಿಮಾಗಳಲ್ಲಿ ನಟಿಸುತ್ತಿದ್ದ ಸೋನುಗೆ ಈಗ ಹೀರೋ ಪಾತ್ರಗಳು ಅರಸಿ ಬರುತ್ತಿವೆ. ಅಷ್ಟರಮಟ್ಟಿಗೆ ಅವರ ರಿಯಲ್​ ಲೈಫ್​ ಇಮೇಜ್​ ಬದಲಾಗಿದೆ.

ಇದನ್ನೂ ಓದಿ: ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದ್ದರು ನಟ ಸೋನು ಸೂದ್

ಸೋನು ಸೂದ್ ಢಾಬಾದಲ್ಲಿ ತಯಾರಾಗ್ತಿದೆ ಬಿಸಿಬಿಸಿ ತಂದೂರಿ ರೋಟಿ: ವಿಡಿಯೊ ವೈರಲ್

Published On - 8:30 am, Mon, 22 March 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ