Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ

ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ.

ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ
ಸೋನು ಸೂದ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Mar 22, 2021 | 7:51 PM

ಬಹುಭಾಷಾ ನಟ ಸೋನು ಸೂದ್​ ಅವರು ಅನೇಕರ ಪಾಲಿಗೆ ರಿಯಲ್​ ಹೀರೋ. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಬಡವರಿಗೆ ಮಾಡಿದ ಸಹಾಯ ಒಂದೆರಡಲ್ಲ. ಸಾರಿಗೆ ವ್ಯವಸ್ಥೆ ಇಲ್ಲದೇ ಇದ್ದಾಗ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವ ಜವಾಬ್ದಾರಿಯನ್ನು ಸೋನು ಹೊತ್ತುಕೊಂಡಿದ್ದರು. ಅಲ್ಲದೆ, ಲಾಕ್​ಡೌನ್​ ಬಳಿಕವೂ ಅವರು ಬಡವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಲಿಲ್ಲ. ಅದಕ್ಕಾಗಿ ಅವರಿಗೆ ಈಗಲೂ ಎಲ್ಲರಿಂದ ಗೌರವ ಸಂದಾಯ ಆಗುತ್ತಲೇ ಇದೆ.

ಹೋದಲ್ಲೆಲ್ಲ ಸೋನುಗೆ ಸನ್ಮಾನ ಮಾಡಲಾಗುತ್ತಿದೆ. ಈಗ ಮತ್ತೊಂದು ವಿಶೇಷ ಗೌರವ ಅವರಿಗೆ ಸಿಕ್ಕಿದೆ. ಸ್ಪೈಸ್​ ಜೆಟ್​ ವಿಮಾನದ ಮೇಲೆ ಸೋನು ಫೋಟೋವನ್ನು ದೊಡ್ಡದಾಗಿ ಹಾಕಲಾಗಿದೆ. ದೇಶಾದ್ಯಂತ ಈ ವಿಮಾನಗಳು ಹಾರಾಡುತ್ತಿವೆ. ಆ ಮೂಲಕ ಬಡವರ ಪಾಲಿನ ರಿಯಲ್​ ಹೀರೋಗೆ ಗೌರವ ಸಲ್ಲಿಕೆ ಆಗುತ್ತಿದೆ. ಅದನ್ನು ಕಂಡು ಸೋನು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಸ್ವತಃ ಸೋನು ಕೂಡ ಈ ಬಗ್ಗೆ ಸಂತಸದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರಲು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ. ತಮ್ಮ ಜೊತೆ ಒಳ್ಳೆಯ ಕಾರ್ಯದಲ್ಲಿ ಭಾಗಿ ಆದ ಸೋನುಗೆ ಈಗ ಇಂಥ ವಿಶೇಷ ರೀತಿಯಲ್ಲಿ ಗೌರವ ಸೂಚಿಸಿದೆ.

‘ಈ ಫೋಟೋಗಳನ್ನು ನೋಡಿದಾಗ ನನಗೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ದೇಶದ ಹಲವಾರು ಏರ್​ಪೋರ್ಟ್​ಗಳಲ್ಲಿ ಈ ವಿಮಾನಗಳಿವೆ. ಲೇಹ್​, ಪಂಜಾಬ್​​, ಹೈದರಾಬಾದ್​, ದೆಹಲಿ ಮುಂತಾದ ಕಡೆಗಳಿಂದ ಜನರು ಅದರ ಫೋಟೋ ತೆಗೆದು ನನಗೆ ಕಳಿಸುತ್ತಿದ್ದಾರೆ. ನಾನು ಧನ್ಯ. ಆದರೆ ಈ ಸಂದರ್ಭದಲ್ಲಿ ಇದನ್ನೆಲ್ಲ ನನ್ನ ತಂದೆ-ತಾಯಿ ನೋಡಲು ಸಾಧ್ಯವಾಗಲಿಲ್ಲ’ ಎಂದು ಸೋನು ಎಮೋಷನಲ್​ ಆಗಿದ್ದಾರೆ.

View this post on Instagram

A post shared by Sonu Sood (@sonu_sood)

ಮೊದಲೆಲ್ಲ ವಿಲನ್​ ಆಗಿ ಸಿನಿಮಾಗಳಲ್ಲಿ ನಟಿಸುತ್ತಿದ್ದ ಸೋನುಗೆ ಈಗ ಹೀರೋ ಪಾತ್ರಗಳು ಅರಸಿ ಬರುತ್ತಿವೆ. ಅಷ್ಟರಮಟ್ಟಿಗೆ ಅವರ ರಿಯಲ್​ ಲೈಫ್​ ಇಮೇಜ್​ ಬದಲಾಗಿದೆ.

ಇದನ್ನೂ ಓದಿ: ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದ್ದರು ನಟ ಸೋನು ಸೂದ್

ಸೋನು ಸೂದ್ ಢಾಬಾದಲ್ಲಿ ತಯಾರಾಗ್ತಿದೆ ಬಿಸಿಬಿಸಿ ತಂದೂರಿ ರೋಟಿ: ವಿಡಿಯೊ ವೈರಲ್

Published On - 8:30 am, Mon, 22 March 21

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?