AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ

ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ.

ವಿಮಾನದ ಮೇಲೆ ಸೋನು ಸೂದ್​ಗೆ ವಿಶೇಷ ಗೌರವ! ತಂದೆ-ತಾಯಿಯೇ ಇಲ್ಲ ಎಂದು ಮರುಗಿದ ನಟ
ಸೋನು ಸೂದ್​
ಮದನ್​ ಕುಮಾರ್​
| Edited By: |

Updated on:Mar 22, 2021 | 7:51 PM

Share

ಬಹುಭಾಷಾ ನಟ ಸೋನು ಸೂದ್​ ಅವರು ಅನೇಕರ ಪಾಲಿಗೆ ರಿಯಲ್​ ಹೀರೋ. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಬಡವರಿಗೆ ಮಾಡಿದ ಸಹಾಯ ಒಂದೆರಡಲ್ಲ. ಸಾರಿಗೆ ವ್ಯವಸ್ಥೆ ಇಲ್ಲದೇ ಇದ್ದಾಗ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವ ಜವಾಬ್ದಾರಿಯನ್ನು ಸೋನು ಹೊತ್ತುಕೊಂಡಿದ್ದರು. ಅಲ್ಲದೆ, ಲಾಕ್​ಡೌನ್​ ಬಳಿಕವೂ ಅವರು ಬಡವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಲಿಲ್ಲ. ಅದಕ್ಕಾಗಿ ಅವರಿಗೆ ಈಗಲೂ ಎಲ್ಲರಿಂದ ಗೌರವ ಸಂದಾಯ ಆಗುತ್ತಲೇ ಇದೆ.

ಹೋದಲ್ಲೆಲ್ಲ ಸೋನುಗೆ ಸನ್ಮಾನ ಮಾಡಲಾಗುತ್ತಿದೆ. ಈಗ ಮತ್ತೊಂದು ವಿಶೇಷ ಗೌರವ ಅವರಿಗೆ ಸಿಕ್ಕಿದೆ. ಸ್ಪೈಸ್​ ಜೆಟ್​ ವಿಮಾನದ ಮೇಲೆ ಸೋನು ಫೋಟೋವನ್ನು ದೊಡ್ಡದಾಗಿ ಹಾಕಲಾಗಿದೆ. ದೇಶಾದ್ಯಂತ ಈ ವಿಮಾನಗಳು ಹಾರಾಡುತ್ತಿವೆ. ಆ ಮೂಲಕ ಬಡವರ ಪಾಲಿನ ರಿಯಲ್​ ಹೀರೋಗೆ ಗೌರವ ಸಲ್ಲಿಕೆ ಆಗುತ್ತಿದೆ. ಅದನ್ನು ಕಂಡು ಸೋನು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಸ್ವತಃ ಸೋನು ಕೂಡ ಈ ಬಗ್ಗೆ ಸಂತಸದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಲಾಕ್​ಡೌನ್​ ವೇಳೆ ವಿದೇಶದಲ್ಲಿ ಸಿಲುಕುಕೊಂಡಿದ್ದ ಸಾವಿರಾರು ಭಾರತೀಯರನ್ನು ಕರೆತರಲು ಸೋನು ಸೂದ್​ ಮುಂದಾಗಿದ್ದರು. ಅವರ ಸಾಹಸಕ್ಕೆ ಸ್ಪೈಸ್​ ಜೆಟ್​ ಸಂಸ್ಥೆ ಕೈ ಜೋಡಿಸಿತ್ತು. ಅದನ್ನು ಈ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ. ತಮ್ಮ ಜೊತೆ ಒಳ್ಳೆಯ ಕಾರ್ಯದಲ್ಲಿ ಭಾಗಿ ಆದ ಸೋನುಗೆ ಈಗ ಇಂಥ ವಿಶೇಷ ರೀತಿಯಲ್ಲಿ ಗೌರವ ಸೂಚಿಸಿದೆ.

‘ಈ ಫೋಟೋಗಳನ್ನು ನೋಡಿದಾಗ ನನಗೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ದೇಶದ ಹಲವಾರು ಏರ್​ಪೋರ್ಟ್​ಗಳಲ್ಲಿ ಈ ವಿಮಾನಗಳಿವೆ. ಲೇಹ್​, ಪಂಜಾಬ್​​, ಹೈದರಾಬಾದ್​, ದೆಹಲಿ ಮುಂತಾದ ಕಡೆಗಳಿಂದ ಜನರು ಅದರ ಫೋಟೋ ತೆಗೆದು ನನಗೆ ಕಳಿಸುತ್ತಿದ್ದಾರೆ. ನಾನು ಧನ್ಯ. ಆದರೆ ಈ ಸಂದರ್ಭದಲ್ಲಿ ಇದನ್ನೆಲ್ಲ ನನ್ನ ತಂದೆ-ತಾಯಿ ನೋಡಲು ಸಾಧ್ಯವಾಗಲಿಲ್ಲ’ ಎಂದು ಸೋನು ಎಮೋಷನಲ್​ ಆಗಿದ್ದಾರೆ.

View this post on Instagram

A post shared by Sonu Sood (@sonu_sood)

ಮೊದಲೆಲ್ಲ ವಿಲನ್​ ಆಗಿ ಸಿನಿಮಾಗಳಲ್ಲಿ ನಟಿಸುತ್ತಿದ್ದ ಸೋನುಗೆ ಈಗ ಹೀರೋ ಪಾತ್ರಗಳು ಅರಸಿ ಬರುತ್ತಿವೆ. ಅಷ್ಟರಮಟ್ಟಿಗೆ ಅವರ ರಿಯಲ್​ ಲೈಫ್​ ಇಮೇಜ್​ ಬದಲಾಗಿದೆ.

ಇದನ್ನೂ ಓದಿ: ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದ್ದರು ನಟ ಸೋನು ಸೂದ್

ಸೋನು ಸೂದ್ ಢಾಬಾದಲ್ಲಿ ತಯಾರಾಗ್ತಿದೆ ಬಿಸಿಬಿಸಿ ತಂದೂರಿ ರೋಟಿ: ವಿಡಿಯೊ ವೈರಲ್

Published On - 8:30 am, Mon, 22 March 21

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ