AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡ ಇಂದ್ರಕೀಲಾದ್ರಿಯಲ್ಲಿ ಭೀಷ್ಮ ಏಕಾದಶಿ ವಿಶೇಷ: ವಿಷ್ಣುಸಹಸ್ರನಾಮ ವಿರಾಟ್​ ಪಾರಾಯಣ

ವಿಷ್ಣುಸಹಸ್ರನಾಮ ಸ್ತೋತ್ರ ಪಠಣೆಯಿಂದ ಭೀಷ್ಮನ ಹೆಸರು ಚರಿತ್ರೆಯಲ್ಲಿ ನಿಂತಿದೆ. ಭೀಷ್ಮ ಏಕಾದಶಿಯಂದು ವಿಷ್ಣು ಸಹಸ್ರನಾಮ ಪಠಿಸುವವರ ಜನ್ಮ ಸಾರ್ಥಕವಾಗುತ್ತದೆ ಎಂದು ತ್ರಿದಂಡಿ ಚಿನ್ನಜೀಯರ್ ಸ್ವಾಮೀಜಿ ಹೇಳಿದರು.

ವಿಜಯವಾಡ ಇಂದ್ರಕೀಲಾದ್ರಿಯಲ್ಲಿ ಭೀಷ್ಮ ಏಕಾದಶಿ ವಿಶೇಷ: ವಿಷ್ಣುಸಹಸ್ರನಾಮ ವಿರಾಟ್​ ಪಾರಾಯಣ
ವಿಜಯವಾಡದ ಇಂದ್ರಕೀಲಾದ್ರಿಯಲ್ಲಿ ತ್ರಿಂದಡಿ ಚಿನ್ನಜೀಯರ್ ಸ್ವಾಮೀಜಿ ಆಶೀರ್ವಚನ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 25, 2021 | 5:00 PM

Share

ವಿಜಯವಾಡ: ಆಂಧ್ರ ಪ್ರದೇಶದ ವಿಜಯವಾಡದ ವಿಜಯಕೀಲಾದ್ರಿಯಲ್ಲಿ ಭೀಷ್ಮ‌ ಏಕಾದಶಿ ಪ್ರಯುಕ್ತ ತ್ರಿದಂಡಿ ಚಿನ್ನ‌ಜಿಯರ್ ಸ್ವಾಮೀಜಿ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬೆಳಿಗ್ಗೆ 11ರಿಂದ ಸಂಜೆಯವರೆಗೆ ವಿಶೇಷ ಪೂಜೆಗಳು ನಡೆದವು. ಈ ಸಂದರ್ಭ ಚಿನ್ನಜೀಯರ್ ಸ್ವಾಮೀಜಿ ವಿಷ್ಣು ಸಹಸ್ರನಾಮ ಸ್ತ್ರೋತ್ರದ ವಿರಾಟ ಪಾರಾಯಣ ಮಾಡಿದರು. ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಪಾರಾಯಣ ಆಲಿಸಿ, ದೇವರಿಗೆ ಮತ್ತು ಸ್ವಾಮೀಜಿಗೆ ನಮಿಸಿದರು. ಟಿವಿ9 ನೆಟ್​ವರ್ಕ್​ನ ಪ್ರವರ್ತಕರೂ ಆಗಿರುವ ಹೈದರಾಬಾದ್​ನ ಮೈ ಹೋಂ ಗ್ರೂಪ್​ನ ಸಂಸ್ಥಾಪಕ ಜೂಪಲ್ಲಿ ರಾಮೇಶ್ವರರಾವ್ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು.

ಮಧ್ಯಾಹ್ನ 3 ಗಂಟೆಯವರೆಗೂ ಪಾರಾಯಣ ಮುಂದುವರಿಯಿತು. ಈ ಸಂದರ್ಭ ಮಾತನಾಡಿದ ಚಿನ್ನಜೀಯರ್ ಸ್ವಾಮೀಜಿ, ವಿಷ್ಣುಸಹಸ್ರನಾಮ ಸ್ತೋತ್ರ ಪಠಣೆಯಿಂದ ಭೀಷ್ಮನ ಹೆಸರು ಚರಿತ್ರೆಯಲ್ಲಿ ನಿಂತಿದೆ. ಭೀಷ್ಮ ಏಕಾದಶಿಯಂದು ವಿಷ್ಣು ಸಹಸ್ರನಾಮ ಪಠಿಸುವವರ ಜನ್ಮ ಸಾರ್ಥಕವಾಗುತ್ತದೆ ಎಂದರು.

Published On - 4:57 pm, Thu, 25 February 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್