AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರದರ್ಶಕ ಬಟ್ಟೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಕ್ಕೆ ಶ್ರೀದೇವಿ ಮಗಳು ಖುಷಿ ಕಪೂರ್ ಟ್ರೋಲ್​

ಮುಂಬೈನ ಅಂಧೇರಿ ಬಳಿ ಜಿಮ್​ ಮುಗಿಸಿ ಬರುವಾಗ ಖುಷಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. ಖುಷಿ ಜಿಮ್​ನಿಂದ ಹೊರ ಬರುತ್ತಿದ್ದಂತೆ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

ಪಾರದರ್ಶಕ ಬಟ್ಟೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಕ್ಕೆ ಶ್ರೀದೇವಿ ಮಗಳು ಖುಷಿ ಕಪೂರ್ ಟ್ರೋಲ್​
ಜಿಮ್​ನ ಹೊರ ಭಾಗದಲ್ಲಿ ಕಾಣಿಸಿಕೊಂಡ ಖುಷಿ ಕಪೂರ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 12, 2021 | 7:16 PM

Share

ಬಾಲಿವುಡ್​ ನಟಿ ಶ್ರೀದೇವಿ ಮಗಳು ಹಾಗೂ ಜಾಹ್ನವಿ ಕಪೂರ್​ ಸಹೋದರಿ ಖುಷಿ ಕಪೂರ್​ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆ್ಯಕ್ಟಿವ್​ ಆಗಿದ್ದಾರೆ. ಮೊದಲಿನಿಂದಲೂ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಪ್ರೈವೇಟ್​ ಆಗಿಟ್ಟಿದ್ದ ಅವರು, ಇತ್ತೀಚೆಗಷ್ಟೇ ಅದನ್ನು ಸಾರ್ವಜನಿಕಗೊಳಿಸಿದ್ದರು. ಅವರು ಸಿನಿಮಾ ಇಂಡಸ್ಟ್ರಿಗೆ ಕಾಲಿಡಲಿದ್ದಾರೆ ಎನ್ನುವ ಬಗ್ಗೆ ಚರ್ಚೆ ಆಗುತ್ತಿರುವಾಗಲೇ ಬಟ್ಟೆ ಮೂಲಕ ಖುಷಿ ಟ್ರೋಲ್​ ಆಗಿದ್ದಾರೆ.

ಮುಂಬೈನ ಅಂಧೇರಿ ಬಳಿ ಜಿಮ್​ ಮುಗಿಸಿ ಬರುವಾಗ ಖುಷಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. ಖುಷಿ ಜಿಮ್​ನಿಂದ ಹೊರ ಬರುತ್ತಿದ್ದಂತೆ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಈ ವೇಳೆ ಅವರು ಮೇಕಪ್​ ಹಾಕಿಲ್ಲದ ಕಾರಣ ನ್ಯಾಚುರಲ್​ ಆಗಿ ಕಾಣಿಸುತ್ತಿದ್ದರು. ಆದರೆ, ಅವರು  ಪಾರದರ್ಶಕ ಬಟ್ಟೆ ಹಾಕಿದ್ದರಿಂದ ಒಳ ಉಡುಪುಗಳು ಕಾಣಿಸಿದ್ದವು. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅವರಿಗೆ ಮುಜುಗರ ತಂದಿದೆ. ಪ್ರಿಯಾಂಕಾ ಚೋಪ್ರಾ ಸೇರಿ ಅನೇಕ ನಟಿಯರು ಈ ರೀತಿ ಪಾರದರ್ಶಕ ಬಟ್ಟೆ ಹಾಕಿ ಟ್ರೋಲ್​ ಆದ ಉದಾಹರಣೆ ಇದೆ.

ಖುಷಿ ಕಪೂರ್​ ಈವರೆಗೆ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟಿಲ್ಲ. ಅವರು ಶೀಘ್ರವೇ ಚಿತ್ರರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಮಾತನಾಡಿದ್ದ ಖುಷಿ ತಂದೆ ಬೋನಿ ಕಪೂರ್​, ಖುಷಿ ಸಿನಿಮಾದಲ್ಲಿ ನಟಿಸಲಿದ್ದಾರೆ. ಇದಕ್ಕೂ ಮೊದಲು ಅವರು ಅಮೆರಿಕದ ಲಾಸ್​ ಎಂಜಲೀಸ್​ನಲ್ಲಿ ನಟನಾ ತರಬೇತಿ ಪಡೆದು ಬರಲಿದ್ದಾರೆ ಎಂದಿದ್ದರು.

ಖುಷಿ ಸಹೋದರಿ ಜಾಹ್ನವಿ ಕಪೂರ್​ ಅವರನ್ನು ನಿರ್ಮಾಪಕ ಕರಣ್​ ಜೋಹರ್​ ಚಿತ್ರರಂಗಕ್ಕೆ ಪರಿಚಯಿಸಿದ್ದರು. ಈಗ ಖುಷಿ ಅವರನ್ನು ಕೂಡ ಕರಣ್​ ಜೋಹರ್​ ಅವರೇ ಪರಿಚಯಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Rajiv Kapoor Death: ಬಾಲಿವುಡ್ ಸಿನಿಮಾ;ರಾಮ್ ತೇರಿ ಗಂಗಾ ಮೈಲಿ ನಟ ರಾಜೀವ್ ಕಪೂರ್ ವಿಧಿವಶ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ