AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ

ಬಾಲಿವುಡ್​ನ ಮೋಹಕ ತಾರೆಯೆನಿಸಿದ್ದ, ನಟಿ ಶ್ರೀದೇವಿಯ ಪುತ್ರಿ ಜಾನ್ವಿ ಕಪೂರ್​ 2018ರಲ್ಲಿ ಬಾಲಿವುಡ್​ಗೆ ಪಾದಾರ್ಪಣೆ ಮಾಡಿದ್ದಾಗಿದೆ. ಧಡಕ್​ ಸಿನಿಮಾ ಮೂಲಕ ಎಂಟ್ರಿಕೊಟ್ಟ ಇವರು ಸಿನಿಮಾ ರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ಜಾನ್ವಿ ಅಪ್ಪ ಬೋನಿ ಕಪೂರ್ ಇದೀಗ ಇನ್ನೊಂದು ಗುಡ್​ನ್ಯೂಸ್​ ಹೊರಹಾಕಿದ್ದಾರೆ. ತಮ್ಮ ಇನ್ನೊಬ್ಬ ಮಗಳು ಖುಷಿ ಕಪೂರ್ ಕೂಡ ಶೀಘ್ರದಲ್ಲೇ ಬಾಲಿವುಡ್​ಗೆ ಕಾಲಿಡಲಿದ್ದಾರೆ ಎಂಬುದನ್ನು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಖುಷಿ ಕೂಡ ನಟನೆಯಲ್ಲಿ ತುಂಬ ಆಸಕ್ತಿ ಹೊಂದಿದ್ದಾರೆ. ಅತಿ ಶೀಘ್ರದಲ್ಲೇ ಅವಳೂ ಕೂಡ ಒಂದು ಸಿನಿಮಾ ಮೂಲಕ ನಿಮ್ಮೆದುರು […]

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ
ಖುಷಿ ಕಪೂರ್​
Lakshmi Hegde
|

Updated on:Jan 19, 2021 | 1:17 PM

Share

ಬಾಲಿವುಡ್​ನ ಮೋಹಕ ತಾರೆಯೆನಿಸಿದ್ದ, ನಟಿ ಶ್ರೀದೇವಿಯ ಪುತ್ರಿ ಜಾನ್ವಿ ಕಪೂರ್​ 2018ರಲ್ಲಿ ಬಾಲಿವುಡ್​ಗೆ ಪಾದಾರ್ಪಣೆ ಮಾಡಿದ್ದಾಗಿದೆ. ಧಡಕ್​ ಸಿನಿಮಾ ಮೂಲಕ ಎಂಟ್ರಿಕೊಟ್ಟ ಇವರು ಸಿನಿಮಾ ರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ಜಾನ್ವಿ ಅಪ್ಪ ಬೋನಿ ಕಪೂರ್ ಇದೀಗ ಇನ್ನೊಂದು ಗುಡ್​ನ್ಯೂಸ್​ ಹೊರಹಾಕಿದ್ದಾರೆ. ತಮ್ಮ ಇನ್ನೊಬ್ಬ ಮಗಳು ಖುಷಿ ಕಪೂರ್ ಕೂಡ ಶೀಘ್ರದಲ್ಲೇ ಬಾಲಿವುಡ್​ಗೆ ಕಾಲಿಡಲಿದ್ದಾರೆ ಎಂಬುದನ್ನು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಖುಷಿ ಕೂಡ ನಟನೆಯಲ್ಲಿ ತುಂಬ ಆಸಕ್ತಿ ಹೊಂದಿದ್ದಾರೆ. ಅತಿ ಶೀಘ್ರದಲ್ಲೇ ಅವಳೂ ಕೂಡ ಒಂದು ಸಿನಿಮಾ ಮೂಲಕ ನಿಮ್ಮೆದುರು ಬರಲಿದ್ದಾಳೆ ಎಂದು ಹೇಳಿದ ಬೋನಿ ಕಪೂರ್​, ನಾನು ನಿರ್ಮಾಪಕನಾದರೂ ನಾನವಳನ್ನು ಪರಿಚಯಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾನೆ.

ಖುಷಿ ನನ್ನ ಮಗಳು..ಹಾಗೇ ನಾನೇ ಸ್ವತಃ ನಿರ್ಮಾಪಕ. ಅವಳನ್ನು ಸಿನಿರಂಗಕ್ಕೆ ಪರಿಚಯಿಸಲು ಬೇಕಾದ ಎಲ್ಲ ಸಂಪನ್ಮೂಲಗಳೂ ನನ್ನ ಬಳಿ ಇವೆ. ಆದರೂ ನಾನದನ್ನು ಮಾಡುವುದಿಲ್ಲ. ನನ್ನ ಬದಲಿಗೆ ಇನ್ಯಾರಾದರೂ ಆಕೆಯನ್ನು ಬಾಲಿವುಡ್​ಗೆ ಅಧಿಕೃತವಾಗಿ ಕರೆತರಲಿ ಎಂಬುದು ನನ್ನ ಆಸೆ. ಹೀಗಾದರೆ ನನ್ನಲ್ಲೂ ಒಂದು ತೃಪ್ತಿ ಇರುತ್ತದೆ ಎಂದು ಹೇಳಿದ್ದಾರೆ.

ಖುಷಿ ಕಪೂರ್​ ನ್ಯೂಯಾರ್ಕ್​ನ ಫಿಲ್ಮ್​ ಅಕಾಡೆಮಿಯಲ್ಲಿ ನಟನಾ ತರಬೇತಿ ಪಡೆದಿದ್ದಾರೆ. ಈ ಹಿಂದೆ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದ ಖುಷಿ, ತನಗೂ ನಟನೆ ಬಗ್ಗೆ ಆಸಕ್ತಿ ಇದೆ ಎಂದು ಹೇಳಿದ್ದರು.

ಕುಟುಂಬ ಸಮೇತ ಮಾಲ್ಡೀವ್ಸ್​ ಪ್ರವಾಸ ಕೈಗೊಂಡ ಯಶ್

Published On - 1:15 pm, Tue, 19 January 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು