AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ

ಬಾಲಿವುಡ್​ನ ಮೋಹಕ ತಾರೆಯೆನಿಸಿದ್ದ, ನಟಿ ಶ್ರೀದೇವಿಯ ಪುತ್ರಿ ಜಾನ್ವಿ ಕಪೂರ್​ 2018ರಲ್ಲಿ ಬಾಲಿವುಡ್​ಗೆ ಪಾದಾರ್ಪಣೆ ಮಾಡಿದ್ದಾಗಿದೆ. ಧಡಕ್​ ಸಿನಿಮಾ ಮೂಲಕ ಎಂಟ್ರಿಕೊಟ್ಟ ಇವರು ಸಿನಿಮಾ ರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ಜಾನ್ವಿ ಅಪ್ಪ ಬೋನಿ ಕಪೂರ್ ಇದೀಗ ಇನ್ನೊಂದು ಗುಡ್​ನ್ಯೂಸ್​ ಹೊರಹಾಕಿದ್ದಾರೆ. ತಮ್ಮ ಇನ್ನೊಬ್ಬ ಮಗಳು ಖುಷಿ ಕಪೂರ್ ಕೂಡ ಶೀಘ್ರದಲ್ಲೇ ಬಾಲಿವುಡ್​ಗೆ ಕಾಲಿಡಲಿದ್ದಾರೆ ಎಂಬುದನ್ನು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಖುಷಿ ಕೂಡ ನಟನೆಯಲ್ಲಿ ತುಂಬ ಆಸಕ್ತಿ ಹೊಂದಿದ್ದಾರೆ. ಅತಿ ಶೀಘ್ರದಲ್ಲೇ ಅವಳೂ ಕೂಡ ಒಂದು ಸಿನಿಮಾ ಮೂಲಕ ನಿಮ್ಮೆದುರು […]

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ
ಖುಷಿ ಕಪೂರ್​
Lakshmi Hegde
|

Updated on:Jan 19, 2021 | 1:17 PM

Share

ಬಾಲಿವುಡ್​ನ ಮೋಹಕ ತಾರೆಯೆನಿಸಿದ್ದ, ನಟಿ ಶ್ರೀದೇವಿಯ ಪುತ್ರಿ ಜಾನ್ವಿ ಕಪೂರ್​ 2018ರಲ್ಲಿ ಬಾಲಿವುಡ್​ಗೆ ಪಾದಾರ್ಪಣೆ ಮಾಡಿದ್ದಾಗಿದೆ. ಧಡಕ್​ ಸಿನಿಮಾ ಮೂಲಕ ಎಂಟ್ರಿಕೊಟ್ಟ ಇವರು ಸಿನಿಮಾ ರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ಜಾನ್ವಿ ಅಪ್ಪ ಬೋನಿ ಕಪೂರ್ ಇದೀಗ ಇನ್ನೊಂದು ಗುಡ್​ನ್ಯೂಸ್​ ಹೊರಹಾಕಿದ್ದಾರೆ. ತಮ್ಮ ಇನ್ನೊಬ್ಬ ಮಗಳು ಖುಷಿ ಕಪೂರ್ ಕೂಡ ಶೀಘ್ರದಲ್ಲೇ ಬಾಲಿವುಡ್​ಗೆ ಕಾಲಿಡಲಿದ್ದಾರೆ ಎಂಬುದನ್ನು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಖುಷಿ ಕೂಡ ನಟನೆಯಲ್ಲಿ ತುಂಬ ಆಸಕ್ತಿ ಹೊಂದಿದ್ದಾರೆ. ಅತಿ ಶೀಘ್ರದಲ್ಲೇ ಅವಳೂ ಕೂಡ ಒಂದು ಸಿನಿಮಾ ಮೂಲಕ ನಿಮ್ಮೆದುರು ಬರಲಿದ್ದಾಳೆ ಎಂದು ಹೇಳಿದ ಬೋನಿ ಕಪೂರ್​, ನಾನು ನಿರ್ಮಾಪಕನಾದರೂ ನಾನವಳನ್ನು ಪರಿಚಯಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾನೆ.

ಖುಷಿ ನನ್ನ ಮಗಳು..ಹಾಗೇ ನಾನೇ ಸ್ವತಃ ನಿರ್ಮಾಪಕ. ಅವಳನ್ನು ಸಿನಿರಂಗಕ್ಕೆ ಪರಿಚಯಿಸಲು ಬೇಕಾದ ಎಲ್ಲ ಸಂಪನ್ಮೂಲಗಳೂ ನನ್ನ ಬಳಿ ಇವೆ. ಆದರೂ ನಾನದನ್ನು ಮಾಡುವುದಿಲ್ಲ. ನನ್ನ ಬದಲಿಗೆ ಇನ್ಯಾರಾದರೂ ಆಕೆಯನ್ನು ಬಾಲಿವುಡ್​ಗೆ ಅಧಿಕೃತವಾಗಿ ಕರೆತರಲಿ ಎಂಬುದು ನನ್ನ ಆಸೆ. ಹೀಗಾದರೆ ನನ್ನಲ್ಲೂ ಒಂದು ತೃಪ್ತಿ ಇರುತ್ತದೆ ಎಂದು ಹೇಳಿದ್ದಾರೆ.

ಖುಷಿ ಕಪೂರ್​ ನ್ಯೂಯಾರ್ಕ್​ನ ಫಿಲ್ಮ್​ ಅಕಾಡೆಮಿಯಲ್ಲಿ ನಟನಾ ತರಬೇತಿ ಪಡೆದಿದ್ದಾರೆ. ಈ ಹಿಂದೆ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದ ಖುಷಿ, ತನಗೂ ನಟನೆ ಬಗ್ಗೆ ಆಸಕ್ತಿ ಇದೆ ಎಂದು ಹೇಳಿದ್ದರು.

ಕುಟುಂಬ ಸಮೇತ ಮಾಲ್ಡೀವ್ಸ್​ ಪ್ರವಾಸ ಕೈಗೊಂಡ ಯಶ್

Published On - 1:15 pm, Tue, 19 January 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು