AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅಂಬೇಡ್ಕರ್​ ಕುರಿತು ಹಾಡುವಾಗ ಭಾವುಕರಾದ ಸಂಸದ ವಿ.ಶ್ರೀನಿವಾಸ ಪ್ರಸಾದ್

ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರ್ ಕುರಿತ ಹಾಡು ಹೇಳುವ ವೇಳೆ ಮಾಜಿ ಸಚಿವ ಹಾಗೂ ಚಾಮರಾಜನಗರದ ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭಾವುಕರಾಗಿದ್ದು ಕಂಡುಬಂದಿದೆ.

ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅಂಬೇಡ್ಕರ್​ ಕುರಿತು ಹಾಡುವಾಗ ಭಾವುಕರಾದ ಸಂಸದ ವಿ.ಶ್ರೀನಿವಾಸ ಪ್ರಸಾದ್
ಸಂವಿಧಾನ ಓದು ಪುಸ್ತಕ ಮತ್ತು ಸಂಸದ ವಿ.ಶ್ರೀನಿವಾಸ ಪ್ರಸಾದ್​
Skanda
|

Updated on: Mar 13, 2021 | 1:58 PM

Share

ಮೈಸೂರು: ಚಾಮರಾಜನಗರದ ಅಂಬೇಡ್ಕರ್ ಭವನದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿದ್ದ, ಸಂವಿಧಾನ ಓದು ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಭಾವುಕರಾದ ಘಟನೆ ನಡೆದಿದೆ. ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರ್ ಕುರಿತ ಹಾಡು ಹೇಳುವ ವೇಳೆ ಮಾಜಿ ಸಚಿವ ಹಾಗೂ ಚಾಮರಾಜನಗರದ ಹಾಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಭಾವುಕರಾಗಿದ್ದು ಕಂಡುಬಂದಿದೆ.

ಚಾಮರಾಜನಗರ ಕ್ಷೇತ್ರದಲ್ಲಿನ ಪದವಿ ಪೂರ್ವ ಕಾಲೇಜಿನ ಸುಮಾರು ಸುಮಾರು 30 ಸಾವಿರ ವಿದ್ಯಾರ್ಥಿಗಳಿಗೆ ‘ಸಂವಿಧಾನ ಓದು’ ಪುಸ್ತಕವನ್ನು ವಿತರಿಸಲು ನಿರ್ಧರಿಸಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಂವಿಧಾನ ಓದಿ ಪುಸ್ತಕದಿಂದ ಪ್ರಭಾವಿತರಾಗಿ ತಮ್ಮ ಸಂಸದ ನಿಧಿಯ ಮೂಲಕವೇ ಪುಸ್ತಕಗಳನ್ನು ವಿತರಿಸಲು ನಿರ್ಧರಿಸಿದ ಶ್ರೀನಿವಾಸ ಪ್ರಸಾದ್, ಅತ್ಯಂತ ಸರಳ ಹಾಗೂ ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ಭಾಷೆಯಲ್ಲಿ ಸಂವಿಧಾನ ತಲುಪಲಿ ಎಂಬ ಆಶಯದೊಂದಿಗೆ ಪುಸ್ತಕವನ್ನು ಮಕ್ಕಳಿಗೆ ವಿತರಿಸಲು ತೀರ್ಮಾನಿಸಿದ್ದಾಗಿ ಹೇಳಿಕೊಂಡಿದ್ದರು. ಅದರಂತೆ ಇಂದು ನಡೆದ ಕಾರ್ಯಕ್ರಮದಲ್ಲಿ ವಿ.ಶ್ರೀನಿವಾಸ ಪ್ರಸಾದ್ ಭಾಗವಹಿಸಿದ್ದು, ಈ ವೇಳೆ ಭಾವುಕರಾಗಿದ್ದಾರೆ.

ಸಮಾನತೆ ಪ್ರಕಾಶನದ ಭರತ್​ ರಾಮಸ್ವಾಮಿ ಈ ಪುಸ್ತಕಗಳನ್ನು ಪ್ರಕಟಿಸಿದ್ದು, ಚಾಮರಾಜನಾಗರ ಲೋಕಸಭಾ ಕ್ಷೇತ್ರದ ಸುಮಾರು 8 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸುವುದಾಗಿ ತಿಳಿಸಿದ್ದಾರೆ. ಇನ್ನು ಈಗಾಗಲೇ ಯೂಟ್ಯೂಬ್​ ಸೇರಿ ಹಲವು ವೇದಿಕೆಗಳಲ್ಲಿ ಅಂಬೇಡ್ಕರ್​ ಓದು, ಸಂವಿಧಾನ ಓದು ರೀತಿಯ ಕಾರ್ಯಕ್ರಮಗಳು ಜನರನ್ನು ತಲುಪುತ್ತಿದ್ದು, ಅಂಬೇಡ್ಕರ್​ ಅವರ ಆಲೋಚನೆಯನ್ನು ಇಂದಿನ ಪೀಳಿಗೆಯಲ್ಲಿ ಬಿತ್ತಲು ಅನೇಕ ಚಿಂತಕರು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಓದು ಸರಣಿ: ಕನ್ನಡಿಗರ ಮನೆಮನಕ್ಕೆ ಅಂಬೇಡ್ಕರ್ ವಿಚಾರ ತಲುಪಿಸುವ ಸಾಹಸ 

ಬಿ.ಎಲ್.ಶಂಕರ್ ಬರಹ | ಸರ್ಕಾರ ಸಂವಿಧಾನದ ಆಶಯ ಉಲ್ಲಂಘಿಸಿದಾಗ ನ್ಯಾಯಾಂಗ ನಮ್ಮ ನೆರವಿಗೆ ಬರಬೇಕಿತ್ತು

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ