AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ. ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ […]

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?
ಸಾಧು ಶ್ರೀನಾಥ್​
|

Updated on: Sep 07, 2020 | 4:34 PM

Share

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ.

ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ ನೀಡಿಲ್ಲ, ಕೊವಿಡ್ ಸೆಂಟರ್​ನಲ್ಲಿ ಸುಚಿತ್ವ ಇಲ್ಲ ಹಾಗೂ ಬಿಸಿನೀರಿನ ವ್ಯವಸ್ಥೆ ಮಾಡಿಲ್ಲವೆಂದು ಕೊರೊನಾ ಸೋಂಕಿತರು ಕೊವಿಡ್ ಸೆಂಟರ್​ನಿಂದ ಹೊರಬಂದು ಪ್ರತಿಭಟನೆ ಮಾಡುತ್ತಿದ್ದಾರೆ.