ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ. ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ […]

ರವಿಶಂಕರ ಆಶ್ರಮ ಕೊವಿಡ್​ ಸೆಂಟರ್ ಸಿಬ್ಬಂದಿ, ಸೋಂಕಿತರಿಂದ ಪ್ರತಿಭಟನೆ: ಕಾರಣವೇನು?
ಸಾಧು ಶ್ರೀನಾಥ್​

Updated on: Sep 07, 2020 | 4:34 PM

ಬೆಂಗಳೂರು: ಕೊವಿಡ್​ ಕೇರ್​ ಸೆಂಟರ್​ನ ಸಿಬ್ಬಂದಿಗೆ ವೇತನ ನೀಡದ ಹಿನ್ನೆಲೆಯಿಂದಾಗಿ ರವಿಶಂಕರ್ ಆಶ್ರಮದ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸಿಬ್ಬಂದಿ ಗಲಾಟೆ ಮಾಡಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದಲ್ಲಿ ಕೊರೊನಾ ಸೋಂಕಿತರಿಗೆ ಕೊವಿಡ್ ಸೆಂಟರ್ ತೆರೆದಿದ್ದಾರೆ.

ಆದರೆ ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಬೇಸತ್ತ ಸಿಬ್ಬಂದಿ ವರ್ಗದವರು ಕೊವಿಡ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ಅದೇ ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತರಿಗೆ ಮಧ್ಯಾಹ್ನ ಊಟ ನೀಡಿಲ್ಲ, ಕೊವಿಡ್ ಸೆಂಟರ್​ನಲ್ಲಿ ಸುಚಿತ್ವ ಇಲ್ಲ ಹಾಗೂ ಬಿಸಿನೀರಿನ ವ್ಯವಸ್ಥೆ ಮಾಡಿಲ್ಲವೆಂದು ಕೊರೊನಾ ಸೋಂಕಿತರು ಕೊವಿಡ್ ಸೆಂಟರ್​ನಿಂದ ಹೊರಬಂದು ಪ್ರತಿಭಟನೆ ಮಾಡುತ್ತಿದ್ದಾರೆ.



sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us