AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಾಷೆ ಮತ್ತು ನಿಂದನೆ ನಡುವಿನ ಗೆರೆ ದಾಟಿದ ‘ಅಪಹಾಸ್ಯ’ ಕಲಾವಿದ | Stand-up comedian Kunal Kamra again mocks judiciary system

ಇತ್ತೀಚೆಗಷ್ಟೇ ನ್ಯಾಯಾಂಗ ನಿಂದನೆ ಆರೋಪಕ್ಕೆ ಸಿಕ್ಕು ಸುದ್ದಿಯಲ್ಲಿದ್ದ ಸ್ಟ್ಯಾಂಡ್ ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ಮತ್ತೆ ವಿವಾದಕ್ಕೀಡಾಗಿದ್ದಾರೆ. ಈ ಬಾರಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಾಧೀಶರೊಬ್ಬರ ಹೆಸರನ್ನು ಉಲ್ಲೇಖಿಸಿ ಅಸಭ್ಯ ರೀತಿಯಲ್ಲಿ ಟ್ವೀಟ್ ಮಾಡಿರುವ ಅವರು ಮತ್ತೊಮ್ಮೆ ನ್ಯಾಯಾಂಗ ನಿಂದನೆಯ ಆರೋಪ ಎದುರಿಸುವಂತಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಲ್ಲಿಸಿರುವ ಮನವಿಗೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸಮ್ಮತಿ ಸೂಚಿಸಿದ್ದಾರೆ. ತನ್ನ ಟ್ವಿಟ್ಟರ್ ಹ್ಯಾಂಡಲ್​ನಲ್ಲಿ ಎರಡು ಬೆರಳುಗಳ ಚಿತ್ರವನ್ನು ಟ್ವೀಟ್ ಮಾಡಿರುವ ಕಮ್ರಾ ಈ ಎರಡು ಬೆರಳುಗಳಲ್ಲಿ […]

ತಮಾಷೆ ಮತ್ತು ನಿಂದನೆ ನಡುವಿನ ಗೆರೆ ದಾಟಿದ ‘ಅಪಹಾಸ್ಯ’ ಕಲಾವಿದ | Stand-up comedian Kunal Kamra again mocks judiciary system
ಕುನಾಲ್ ಕಮ್ರಾ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 20, 2020 | 8:17 PM

Share

ಇತ್ತೀಚೆಗಷ್ಟೇ ನ್ಯಾಯಾಂಗ ನಿಂದನೆ ಆರೋಪಕ್ಕೆ ಸಿಕ್ಕು ಸುದ್ದಿಯಲ್ಲಿದ್ದ ಸ್ಟ್ಯಾಂಡ್ ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ಮತ್ತೆ ವಿವಾದಕ್ಕೀಡಾಗಿದ್ದಾರೆ. ಈ ಬಾರಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಾಧೀಶರೊಬ್ಬರ ಹೆಸರನ್ನು ಉಲ್ಲೇಖಿಸಿ ಅಸಭ್ಯ ರೀತಿಯಲ್ಲಿ ಟ್ವೀಟ್ ಮಾಡಿರುವ ಅವರು ಮತ್ತೊಮ್ಮೆ ನ್ಯಾಯಾಂಗ ನಿಂದನೆಯ ಆರೋಪ ಎದುರಿಸುವಂತಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಲ್ಲಿಸಿರುವ ಮನವಿಗೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸಮ್ಮತಿ ಸೂಚಿಸಿದ್ದಾರೆ.

ತನ್ನ ಟ್ವಿಟ್ಟರ್ ಹ್ಯಾಂಡಲ್​ನಲ್ಲಿ ಎರಡು ಬೆರಳುಗಳ ಚಿತ್ರವನ್ನು ಟ್ವೀಟ್ ಮಾಡಿರುವ ಕಮ್ರಾ ಈ ಎರಡು ಬೆರಳುಗಳಲ್ಲಿ ಮಧ್ಯದ ಬೆರಳನ್ನು ‘ಭಾರತದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಎಸ್.ಎ ಬೋಬ್ಡೆ ಅವರಿಗೆ ತೋರಿಸುತ್ತಿದ್ದೇನೆ,’ ಎಂದು ಕ್ಯಾಪ್ಷನ್​ನಲ್ಲಿ ಬರೆದುಕೊಂಡಿದ್ದಾರೆ.

ಕಮ್ರಾ ಟ್ವೀಟ್​ನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಲಹಾಬಾದ್ ಹೈಕೋರ್ಟ್ ವಕೀಲ ಅನುಜ್ ಸಿಂಗ್ ವೇಣುಗೋಪಾಲ್ ಅವರಿಗೆ ಸಲ್ಲಿಸಿರುವ ಮನವಿ ಪುರಸ್ಕೃತವಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಟಾರ್ನಿ ಜನರಲ್, ಕುನಾಲ್ ಕಮ್ರಾ ಮಾಡಿರುವ ಟ್ವೀಟ್ ಹೇಸಿಗೆ ಹುಟ್ಟಿಸುವಂಥಾಗಿದ್ದು, ಅದು ಭಾರತದ ಸರ್ವೋಚ್ಛ ನ್ಯಾಯಾಲಯವನ್ನೇ ಅವಮಾನಕ್ಕೀಡು ಮಾಡಿದಂತಿದೆ. ಕುನಾಲ್ ಕಮ್ರಾ ತಮಾಷೆ ಮತ್ತು ನಿಂದನೆಯ ನಡುವಿನ ಸೀಮೆ ದಾಟಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಕೂಡ ಕುನಾಲ್ ಕಮ್ರಾ ಮೂರ್ನಾಲ್ಕು ಬಾರಿ ನ್ಯಾಯಾಲಯವನ್ನು ಅವಮಾನಿಸುವ ಅರ್ಥದಲ್ಲಿ ಟ್ವೀಟ್​ಗಳನ್ನು ಮಾಡಿ ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿದ್ದರು. ಆದರೆ ತಪ್ಪು ತಿದ್ದಿಕೊಳ್ಳದ ಕಮ್ರಾ ಅವರ ಪ್ರವೃತ್ತಿ ಮತ್ತು ರಾಷ್ಟ್ರದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನು ಪದೇಪದೆ ಅಪಹಾಸ್ಯ ಮಾಡುವ ಚಾಳಿಯನ್ನು ಈ ಬಾರಿ ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇದೆಯೆನ್ನಲಾಗುತ್ತಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ