AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಾಷೆ ಮತ್ತು ನಿಂದನೆ ನಡುವಿನ ಗೆರೆ ದಾಟಿದ ‘ಅಪಹಾಸ್ಯ’ ಕಲಾವಿದ | Stand-up comedian Kunal Kamra again mocks judiciary system

ಇತ್ತೀಚೆಗಷ್ಟೇ ನ್ಯಾಯಾಂಗ ನಿಂದನೆ ಆರೋಪಕ್ಕೆ ಸಿಕ್ಕು ಸುದ್ದಿಯಲ್ಲಿದ್ದ ಸ್ಟ್ಯಾಂಡ್ ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ಮತ್ತೆ ವಿವಾದಕ್ಕೀಡಾಗಿದ್ದಾರೆ. ಈ ಬಾರಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಾಧೀಶರೊಬ್ಬರ ಹೆಸರನ್ನು ಉಲ್ಲೇಖಿಸಿ ಅಸಭ್ಯ ರೀತಿಯಲ್ಲಿ ಟ್ವೀಟ್ ಮಾಡಿರುವ ಅವರು ಮತ್ತೊಮ್ಮೆ ನ್ಯಾಯಾಂಗ ನಿಂದನೆಯ ಆರೋಪ ಎದುರಿಸುವಂತಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಲ್ಲಿಸಿರುವ ಮನವಿಗೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸಮ್ಮತಿ ಸೂಚಿಸಿದ್ದಾರೆ. ತನ್ನ ಟ್ವಿಟ್ಟರ್ ಹ್ಯಾಂಡಲ್​ನಲ್ಲಿ ಎರಡು ಬೆರಳುಗಳ ಚಿತ್ರವನ್ನು ಟ್ವೀಟ್ ಮಾಡಿರುವ ಕಮ್ರಾ ಈ ಎರಡು ಬೆರಳುಗಳಲ್ಲಿ […]

ತಮಾಷೆ ಮತ್ತು ನಿಂದನೆ ನಡುವಿನ ಗೆರೆ ದಾಟಿದ ‘ಅಪಹಾಸ್ಯ’ ಕಲಾವಿದ | Stand-up comedian Kunal Kamra again mocks judiciary system
ಕುನಾಲ್ ಕಮ್ರಾ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 20, 2020 | 8:17 PM

Share

ಇತ್ತೀಚೆಗಷ್ಟೇ ನ್ಯಾಯಾಂಗ ನಿಂದನೆ ಆರೋಪಕ್ಕೆ ಸಿಕ್ಕು ಸುದ್ದಿಯಲ್ಲಿದ್ದ ಸ್ಟ್ಯಾಂಡ್ ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ಮತ್ತೆ ವಿವಾದಕ್ಕೀಡಾಗಿದ್ದಾರೆ. ಈ ಬಾರಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಾಧೀಶರೊಬ್ಬರ ಹೆಸರನ್ನು ಉಲ್ಲೇಖಿಸಿ ಅಸಭ್ಯ ರೀತಿಯಲ್ಲಿ ಟ್ವೀಟ್ ಮಾಡಿರುವ ಅವರು ಮತ್ತೊಮ್ಮೆ ನ್ಯಾಯಾಂಗ ನಿಂದನೆಯ ಆರೋಪ ಎದುರಿಸುವಂತಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಲ್ಲಿಸಿರುವ ಮನವಿಗೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸಮ್ಮತಿ ಸೂಚಿಸಿದ್ದಾರೆ.

ತನ್ನ ಟ್ವಿಟ್ಟರ್ ಹ್ಯಾಂಡಲ್​ನಲ್ಲಿ ಎರಡು ಬೆರಳುಗಳ ಚಿತ್ರವನ್ನು ಟ್ವೀಟ್ ಮಾಡಿರುವ ಕಮ್ರಾ ಈ ಎರಡು ಬೆರಳುಗಳಲ್ಲಿ ಮಧ್ಯದ ಬೆರಳನ್ನು ‘ಭಾರತದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಎಸ್.ಎ ಬೋಬ್ಡೆ ಅವರಿಗೆ ತೋರಿಸುತ್ತಿದ್ದೇನೆ,’ ಎಂದು ಕ್ಯಾಪ್ಷನ್​ನಲ್ಲಿ ಬರೆದುಕೊಂಡಿದ್ದಾರೆ.

ಕಮ್ರಾ ಟ್ವೀಟ್​ನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಲಹಾಬಾದ್ ಹೈಕೋರ್ಟ್ ವಕೀಲ ಅನುಜ್ ಸಿಂಗ್ ವೇಣುಗೋಪಾಲ್ ಅವರಿಗೆ ಸಲ್ಲಿಸಿರುವ ಮನವಿ ಪುರಸ್ಕೃತವಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಟಾರ್ನಿ ಜನರಲ್, ಕುನಾಲ್ ಕಮ್ರಾ ಮಾಡಿರುವ ಟ್ವೀಟ್ ಹೇಸಿಗೆ ಹುಟ್ಟಿಸುವಂಥಾಗಿದ್ದು, ಅದು ಭಾರತದ ಸರ್ವೋಚ್ಛ ನ್ಯಾಯಾಲಯವನ್ನೇ ಅವಮಾನಕ್ಕೀಡು ಮಾಡಿದಂತಿದೆ. ಕುನಾಲ್ ಕಮ್ರಾ ತಮಾಷೆ ಮತ್ತು ನಿಂದನೆಯ ನಡುವಿನ ಸೀಮೆ ದಾಟಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಕೂಡ ಕುನಾಲ್ ಕಮ್ರಾ ಮೂರ್ನಾಲ್ಕು ಬಾರಿ ನ್ಯಾಯಾಲಯವನ್ನು ಅವಮಾನಿಸುವ ಅರ್ಥದಲ್ಲಿ ಟ್ವೀಟ್​ಗಳನ್ನು ಮಾಡಿ ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿದ್ದರು. ಆದರೆ ತಪ್ಪು ತಿದ್ದಿಕೊಳ್ಳದ ಕಮ್ರಾ ಅವರ ಪ್ರವೃತ್ತಿ ಮತ್ತು ರಾಷ್ಟ್ರದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನು ಪದೇಪದೆ ಅಪಹಾಸ್ಯ ಮಾಡುವ ಚಾಳಿಯನ್ನು ಈ ಬಾರಿ ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇದೆಯೆನ್ನಲಾಗುತ್ತಿದೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?