AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡವಾಗಿಯಾದ್ರೂ 8 ವಲಯಗಳಾಗಿ ಬೆಂಗಳೂರು ವಿಭಜನೆ, ತಲಾ ಒಬ್ಬ ಸಚಿವ ಉಸ್ತುವಾರಿ!

ಬೆಂಗಳೂರು: ಎಷ್ಟೇ ಪ್ರಯತ್ನಪಟ್ಟರೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹತೋಟಿಗೆ ಬರುತ್ತಿಲ್ಲ. ಬದಲು ಹೆಚ್ಚಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರನ್ನು ಎಂಟು ವಿಭಾಗಗಳಾಗಿ ವಿಂಗಡಿಸಿ ಪ್ರತಿಯೊಂದಕ್ಕೂ ಒಬ್ಬ ಸಚಿವರನ್ನ ಉಸ್ತುವಾರಿಯಾಗಿ ನೇಮಿಸಲು ಮುಂದಾಗಿದೆ. ಇವತ್ತು ಸಂಜೆಗೆ ಉಸ್ತುವಾರಿಗಳ ನೇಮಕ ಹೌದು, ದಿನೇ ದಿನೇ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಹತ್ತಿಕ್ಕಲು ಸರ್ಕಾರ ಈಗ ನೂತನ ಪ್ರಯೋಗಕ್ಕೆ ಮುಂದಾಗಿದೆ. ಬೆಂಗಳೂರು ಮಹಾನಗರವನ್ನ 8 ವಿಭಾಗಗಳಾಗಿ ವಿಂಗಡಿಸಿದೆ. ಹೀಗೆ ವಿಂಗಡಿಸಿದ ಪ್ರತಿಯೊಂದು ವಿಭಾಗಕ್ಕೂ ಒಬ್ಬ ಸಚಿವರನ್ನ ಉಸ್ತುವಾರಿಯಾಗಿ ನೇಮಿಸಲು […]

ತಡವಾಗಿಯಾದ್ರೂ 8 ವಲಯಗಳಾಗಿ ಬೆಂಗಳೂರು ವಿಭಜನೆ, ತಲಾ ಒಬ್ಬ ಸಚಿವ ಉಸ್ತುವಾರಿ!
ಸಚಿವ ಜೆ.ಸಿ.ಮಾಧುಸ್ವಾಮಿ
Follow us
Guru
| Updated By:

Updated on:Jul 09, 2020 | 4:53 PM

ಬೆಂಗಳೂರು: ಎಷ್ಟೇ ಪ್ರಯತ್ನಪಟ್ಟರೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹತೋಟಿಗೆ ಬರುತ್ತಿಲ್ಲ. ಬದಲು ಹೆಚ್ಚಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರನ್ನು ಎಂಟು ವಿಭಾಗಗಳಾಗಿ ವಿಂಗಡಿಸಿ ಪ್ರತಿಯೊಂದಕ್ಕೂ ಒಬ್ಬ ಸಚಿವರನ್ನ ಉಸ್ತುವಾರಿಯಾಗಿ ನೇಮಿಸಲು ಮುಂದಾಗಿದೆ.

ಇವತ್ತು ಸಂಜೆಗೆ ಉಸ್ತುವಾರಿಗಳ ನೇಮಕ ಹೌದು, ದಿನೇ ದಿನೇ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಹತ್ತಿಕ್ಕಲು ಸರ್ಕಾರ ಈಗ ನೂತನ ಪ್ರಯೋಗಕ್ಕೆ ಮುಂದಾಗಿದೆ. ಬೆಂಗಳೂರು ಮಹಾನಗರವನ್ನ 8 ವಿಭಾಗಗಳಾಗಿ ವಿಂಗಡಿಸಿದೆ. ಹೀಗೆ ವಿಂಗಡಿಸಿದ ಪ್ರತಿಯೊಂದು ವಿಭಾಗಕ್ಕೂ ಒಬ್ಬ ಸಚಿವರನ್ನ ಉಸ್ತುವಾರಿಯಾಗಿ ನೇಮಿಸಲು ಮುಂದಾಗಿದೆ. ಸಚಿವ ಸಂಪುಟದ ಸಭೆಯ ನಂತರ ಮಾತನಾಡಿದ ಕಾನೂನು ಮತ್ತು ಸಂಸಧೀಯ ವ್ವವಹಾರಗಳ ಸಚಿವ ಮಾಧುಸ್ವಾಮಿ ಈ ವಿಷಯ ತಿಳಿಸಿದರು.

ಈ ಉಸ್ತುವಾರಿ ಸಚಿವರು ತಮ್ಮ ತಮ್ಮ ವಿಭಾಗದಲ್ಲಿ ಕೊರೊನಾ ನಿಯಂತ್ರಣ ಅಗತ್ಯ ಕ್ರಮಗಳ ಬಗ್ಗೆ ಉಸ್ತುವಾರಿ ನೋಡಿಕೊಳ್ಳುವುದರ ಜತೆಗೆ ಹತ್ತಿಕ್ಕಲೂ ಬೇಕಾದ ಅಗತ್ಯ ಕ್ರಮಗನ್ನ ಕೈಗೊಳ್ಳಬೇಕು. ಸಿಎಂ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಕೂಡ ಟೀಂ ನಲ್ಲಿದ್ದಾರೆ. ಈ ಸಂಬಂಧ ಇವತ್ತು ಸಂಜೆ ಯಾವ ವಲಯಕ್ಕೆ ಯಾರು ಉಸ್ತುವಾರಿ ಅನ್ನೋದನ್ನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನೇಮಿಸಿ ಆದೇಶ ಹೊರಡಿಸಲಿದ್ದಾರೆ.

ಬೆಂಗಳೂರಿನ ಎಂಟು ವಲಯಗಳಿಗೆ ಎಂಟು ಐಎಎಸ್‌ ಅಧಿಕಾರಿಗಳ ನೇಮಕ ರಾಜ್ಯ ಸರ್ಕಾರ ಬೆಂಗಳೂರಿನ ಎಂಟು ವಲಯಗಳಿಗೆ ಎಂಟು ಸಚಿವರು ಹಾಗೂ ಐಎಎಸ್‌ ಅಧಿಕಾರಿಗಳನ್ನ ನೇಮಿಸಲು ತಿರ್ಮಾನಿಸಿದ್ದು ವಿವರ ಹೀಗಿದೆ. ಬೆಂಗಳೂರಿನ ಎಂಟು ವಲಯಗಳಿಗೆ ಎಂಟು ಐಎಎಸ್ ಅಧಿಕಾರಿಗಳು, ವಲಯ ಸಂಯೋಜಕರಾಗಿ ಐಎಎಸ್ ಅಧಿಕಾರಿಗಳ ನೇಮಕ. ಬಿಬಿಎಂಪಿ ಆಯುಕ್ತರಿಗೆ ಈ ಎಂಟೂ ವಲಯ ಸಂಯೋಜಕರು ನಿರಂತರ ಸಂಪರ್ಕದಲ್ಲಿರುತ್ತಾರೆ. ಎಂಟು ವಲಯಗಳಿಗೆ ಒಬ್ಬೊಬ್ಬ ಸಚಿವರ ಉಸ್ತುವಾರಿ ಮತ್ತು ಜವಾಬ್ದಾರಿ ವಹಿಸಿ ನೇಮಕ. ಸಚಿವರಿಗೆ ಆಯಾ ಕ್ಷೇತ್ರಗಳ ಶಾಸಕರು ಸಾಥ್. ಶಾಸಕರ ಜೊತೆ ಕಾರ್ಪೋರೇಟರ್‌ಗಳು ಸಚಿವರಿಗೆ ಕೊ ಆರ್ಡಿನೇಷನ್ ಜವಬ್ದಾರಿ. ಎಲ್ಲ ವಲಯ ಸಂಯೋಜಕರು, ಉಸ್ತುವಾರಿ ಸಚಿವರಿಗೆ ತಕ್ಷಣದ ಮಾಹಿತಿಗಳನ್ನು ಬಿಬಿಎಂಪಿ ಅಧಿಕಾರಿಗಳು ಒದಗಿಸಬೇಕು. ಸಚಿವರಿಗೆ, ವಲಯ ಸಂಯೋಜಕ ಅಧಿಕಾರಿಗಳಿಗೆ ಕ್ಷಣ ಕ್ಷಣದ ಮಾಹಿತಿಯನ್ನು ಜಂಟಿ ಆಯುಕ್ತರು ನೀಡುವುದು.

Published On - 2:24 pm, Thu, 9 July 20

ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು