AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ಟ್ರಾನ್ಸ್​ಫರ್​: ಆರೋಪ ಹೊತ್ತ ಅಧಿಕಾರಿಗೆ ಸರ್ಕಾರದ ಮಣೆ

ಭ್ರಷ್ಟಚಾರದ ಆರೋಪ ಹೊತ್ತಿರೋ ಅಧಿಕಾರಿಗೆ ಸರ್ಕಾರ ಮಣೆಹಾಕಿರುವ ಪ್ರಸಂಗ ಒಂದು ಬೆಳಕಿಗೆ ಬಂದಿದೆ. ಹೌದು, ಸರ್ಕಾರ ಅಧಿಕಾರಿ ರಂಗನಾಥ್ ಎಂಬುವವರು ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.

ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ಟ್ರಾನ್ಸ್​ಫರ್​: ಆರೋಪ ಹೊತ್ತ ಅಧಿಕಾರಿಗೆ ಸರ್ಕಾರದ ಮಣೆ
ಅಧಿಕಾರಿ ರಂಗನಾಥ್
KUSHAL V
| Edited By: |

Updated on: Dec 03, 2020 | 4:59 PM

Share

ಬೆಂಗಳೂರು: ಭ್ರಷ್ಟಚಾರದ ಆರೋಪ ಹೊತ್ತಿರೋ ಅಧಿಕಾರಿಗೆ ಸರ್ಕಾರ ಮಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ. ಹಿರಿಯ ಅಧಿಕಾರಿ ಕೆ. ರಂಗನಾಥ್ ಎಂಬುವವರನ್ನು ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಸರ್ಕಾರ ಮತ್ತೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.

ಅಂದ ಹಾಗೆ, ರಂಗನಾಥ್ ಈ ಹಿಂದೆ ಯಲಹಂಕದಲ್ಲಿ ತಹಶೀಲ್ದಾರ್ ಆಗಿದ್ದರು. ಈ ವೇಳೆ, ಸರ್ಕಾರಿ ಜಾಗ ಬೇರೊಬ್ಬರ ಹೆಸ್ರಿಗೆ ಮಾಡಿಕೊಟ್ಟಿರೋ ಆರೋಪ ಇವರ ವಿರುದ್ಧ ಕೇಳಿಬಂದಿತ್ತು. ಈ ಪ್ರಕರಣದ ಬಗ್ಗೆ ಕೋರ್ಟ್​ನಲ್ಲೂ ವಿಚಾರಣೆ ನಡೀತಿದೆ. ಆದರೆ ಇದೀಗ, ನಗರದ ಉತ್ತರ ವಲಯದ AC ಯಾಗಿ ರಂಗನಾಥ್​ರನ್ನು ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಅಧಿಕಾರಿ ರಾಜಕಾರಣಿ ಪ್ರಭಾವದಿಂದ ಮತ್ತೆ ಹುದ್ದೆ ಗಿಟ್ಟಿಸಿಕೊಂಡ್ರಾ ಎಂಬ ಮಾತು ಕೇಳಿಬಂದಿದೆ.

‘ಆರೋಪ ಸಾಬೀತಾದಲ್ಲಿ ಕೆ.ರಂಗನಾಥ್​ರನ್ನು ವಜಾ ಮಾಡ್ತೇವೆ’ ಅಧಿಕಾರಿ ಕೆ. ರಂಗನಾಥ್ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತಾದಲ್ಲಿ ಅವರನ್ನು ವಜಾ ಮಾಡ್ತೇವೆ ಎಂದು ಟಿವಿ9ಗೆ BDA ಅಧ್ಯಕ್ಷ ಹಾಗೂ ಶಾಸಕ S.R.ವಿಶ್ವನಾಥ್ ಹೇಳಿದ್ದಾರೆ. ಸರ್ಕಾರಿ ಜಾಗ ಅಕ್ರಮ ಪರಭಾರೆ ಸಾಬೀತಾದ್ರೆ ಕ್ರಮ ಕೈಗೊಳ್ಳುತ್ತೇವೆ. ವಿಚಾರಣೆ ನಡೆಯುತ್ತಿದ್ದು ಆರೋಪ ಸಾಬೀತಾದ್ರೆ ಶಿಕ್ಷೆ ಕಟ್ಟಿಟ್ಟಬುತ್ತಿ ಎಂದು ವಿಶ್ವನಾಥ್‌ ಹೇಳಿದರು.

ಟಿವಿ9ನಲ್ಲಿ ವರದಿಯ ನಂತರ ತನಿಖೆ ಚುರುಕುಗೊಂಡಿದೆ. ಅಕ್ರಮ ದೃಢಪಟ್ಟ 15 ದಿನಗಳಲ್ಲೇ ಮನೆಗೆ ಕಳಿಸುತ್ತೇವೆ. ಸಿಎಂ ಯಡಿಯೂರಪ್ಪ ಗಮನಕ್ಕೂ ಇದನ್ನು ತರುತ್ತೇನೆ. ಆರೋಪಗಳು ಸಾಬೀತಾದ್ರೆ ಅಧಿಕಾರಿ ನಿಸ್ಸಂದೇಹವಾಗಿ ಅಮಾನತು ಆಗುತ್ತಾರೆ ಎಂದು ಟಿವಿ9ಗೆ ಯಲಹಂಕ ಶಾಸಕ S.R. ವಿಶ್ವನಾಥ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ