AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ತಲೆಯತ್ತಲಿದೆ 25 ಮಹಡಿಗಳ ಹೊಸ ಟ್ವಿನ್‌ ಟವರ್‌

ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗಾಗಿ ಟ್ವಿನ್ ಟವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಅದು 25 ಮಹಡಿಗಳ ಟ್ವಿನ್‌ ಟವರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಿದೆ. ಬೆಂಗಳೂರು ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಟ್ವಿನ್ ಟವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ […]

ಬೆಂಗಳೂರಲ್ಲಿ ತಲೆಯತ್ತಲಿದೆ 25 ಮಹಡಿಗಳ ಹೊಸ ಟ್ವಿನ್‌ ಟವರ್‌
Guru
Guru|

Updated on: Aug 27, 2020 | 7:14 PM

Share

ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗಾಗಿ ಟ್ವಿನ್ ಟವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಅದು 25 ಮಹಡಿಗಳ ಟ್ವಿನ್‌ ಟವರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಿದೆ.

ಬೆಂಗಳೂರು ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಟ್ವಿನ್ ಟವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮ (ಎನ್‍ಬಿಸಿಸಿ) ಸಿದ್ಧಪಡಿಸಿರುವ ಈ ಪ್ರಸ್ತಾವನೆ ಎಫ್‌ಎಆರ್ 2.5 ಅನುಪಾತದಲ್ಲಿ ಸಿದ್ಧಪಡಿಸಲಾಗಿದೆ. ಆದ್ರೆ ಆ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಳು ಎಫ್‌ಎಆರ್ 4.0 ಅನುಪಾತದಲ್ಲಿವೆ. ಹೀಗಾಗಿ ಇದೇ ಮಾದರಿಯಲ್ಲಿ ಟ್ವಿನ್ ಟವರ್ ನಿರ್ಮಿಸಬೇಕಿರುವ ಅನಿವಾರ್ಯತೆ ಎದುರಾಗಿದೆ.ಹಾಗಾಗಿ ಈ ಪ್ರಸ್ತಾವನೆಯನ್ನು ಎಫ್‍ಎಆರ್ 4.0 ಅನುಪಾತದೊಂದಿಗೆ ಮರುವಿನ್ಯಾಸಗಳಿಸುವಂತೆ ಡಿಸಿಎಂ ಮತ್ತು‌ ಲೋಕೋಪಯೋಗಿ ಸಚಿವರೂ ಆಗಿರುವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸಂಬಂಧ ಒಡಂಬಡಿಕೆಯ ಕರಡು ಪ್ರತಿಯನ್ನು ಸಿದ್ದಪಡಿಸಿ ಆರ್ಥಿಕ ಇಲಾಖೆ ಹಾಗೂ ಕಾನೂನು ಇಲಾಖೆಯ ಸಹಮತಿಯೊಂದಿಗೆ ಅನುಮೋದನೆ ಪಡೆಯಬೇಕು. ಪ್ರಸ್ತಾವನೆಯ ಡಿಪಿಆರ್ ಸಿದ್ದಪಡಿಸಲು ಮುಂದಿನ 15 ದಿನಗಳೊಳಗೆ ಸಚಿವ ಸಂಪುಟದ ಅನುಮೋದನೆ ಪಡೆಯಬೇಕು. ಒಡಂಬಡಿಕೆಯ ಕರಡು ಸಚಿವ ಸಂಪುಟದ ಅನುಮೋದನೆ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ಕಾರಜೋಳ ಸೂಚನೆ ನೀಡಿದ್ದಾರೆ. ‌

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು