AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ತಲೆಯತ್ತಲಿದೆ 25 ಮಹಡಿಗಳ ಹೊಸ ಟ್ವಿನ್‌ ಟವರ್‌

ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗಾಗಿ ಟ್ವಿನ್ ಟವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಅದು 25 ಮಹಡಿಗಳ ಟ್ವಿನ್‌ ಟವರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಿದೆ. ಬೆಂಗಳೂರು ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಟ್ವಿನ್ ಟವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ […]

ಬೆಂಗಳೂರಲ್ಲಿ ತಲೆಯತ್ತಲಿದೆ 25 ಮಹಡಿಗಳ ಹೊಸ ಟ್ವಿನ್‌ ಟವರ್‌
Guru
|

Updated on: Aug 27, 2020 | 7:14 PM

Share

ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗಾಗಿ ಟ್ವಿನ್ ಟವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಅದು 25 ಮಹಡಿಗಳ ಟ್ವಿನ್‌ ಟವರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಿದೆ.

ಬೆಂಗಳೂರು ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಟ್ವಿನ್ ಟವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮ (ಎನ್‍ಬಿಸಿಸಿ) ಸಿದ್ಧಪಡಿಸಿರುವ ಈ ಪ್ರಸ್ತಾವನೆ ಎಫ್‌ಎಆರ್ 2.5 ಅನುಪಾತದಲ್ಲಿ ಸಿದ್ಧಪಡಿಸಲಾಗಿದೆ. ಆದ್ರೆ ಆ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಳು ಎಫ್‌ಎಆರ್ 4.0 ಅನುಪಾತದಲ್ಲಿವೆ. ಹೀಗಾಗಿ ಇದೇ ಮಾದರಿಯಲ್ಲಿ ಟ್ವಿನ್ ಟವರ್ ನಿರ್ಮಿಸಬೇಕಿರುವ ಅನಿವಾರ್ಯತೆ ಎದುರಾಗಿದೆ.ಹಾಗಾಗಿ ಈ ಪ್ರಸ್ತಾವನೆಯನ್ನು ಎಫ್‍ಎಆರ್ 4.0 ಅನುಪಾತದೊಂದಿಗೆ ಮರುವಿನ್ಯಾಸಗಳಿಸುವಂತೆ ಡಿಸಿಎಂ ಮತ್ತು‌ ಲೋಕೋಪಯೋಗಿ ಸಚಿವರೂ ಆಗಿರುವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸಂಬಂಧ ಒಡಂಬಡಿಕೆಯ ಕರಡು ಪ್ರತಿಯನ್ನು ಸಿದ್ದಪಡಿಸಿ ಆರ್ಥಿಕ ಇಲಾಖೆ ಹಾಗೂ ಕಾನೂನು ಇಲಾಖೆಯ ಸಹಮತಿಯೊಂದಿಗೆ ಅನುಮೋದನೆ ಪಡೆಯಬೇಕು. ಪ್ರಸ್ತಾವನೆಯ ಡಿಪಿಆರ್ ಸಿದ್ದಪಡಿಸಲು ಮುಂದಿನ 15 ದಿನಗಳೊಳಗೆ ಸಚಿವ ಸಂಪುಟದ ಅನುಮೋದನೆ ಪಡೆಯಬೇಕು. ಒಡಂಬಡಿಕೆಯ ಕರಡು ಸಚಿವ ಸಂಪುಟದ ಅನುಮೋದನೆ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ಕಾರಜೋಳ ಸೂಚನೆ ನೀಡಿದ್ದಾರೆ. ‌

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು