ಜಮೀನಿನ ಮತ್ತೊಂದು ಕಡೆ ಅಂತ್ಯಕ್ರಿಯೆ ಮಾಡಿ ಎಂದಿದ್ದಕ್ಕೆ ಹೀಗಾ ಮಾಡೋದು!

ಬೆಳಗಾವಿ: ಲಾಕ್​ಡೌನ್​ ನಡುವೆಯೂ ಅಂತ್ಯಸಂಸ್ಕಾರ ಮಾಡುವ ವಿಚಾರಕ್ಕೆ ವ್ಯಕ್ತಿಯ ಮನೆ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಕವಳೆವಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನ ಭೂಮಿ ದಾನವಾಗಿ ನೀಡಿದ್ದ ಮನೋಹರ ಮೋರೆ ಎಂಬುವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲುತೂರಿದ್ದಾರೆ. ತಮ್ಮ ಜಮೀನಿನ ಇನ್ನೊಂದು ಭಾಗದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಮನೋಹರ ಹೇಳಿದ್ದ. ಹಾಗಾಗಿ ಜಮೀನು ಮಾಲೀಕರೊಂದಿಗೆ ಕಿರಿಕ್ ಮಾಡಿಕೊಂಡು ಉದ್ಧಟತನ ಮೆರೆದಿದ್ದಾರೆ. ಅಂತ್ಯಸಂಸ್ಕಾರ ನಡೆಸಲು ಬಂದವರು ಮನೋಹರ ಮನೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿ, ಕಾರಿನ ಗ್ಲಾಸು ಒಡೆದು ಹಾಕಿದ್ದಾರೆ. […]

ಜಮೀನಿನ ಮತ್ತೊಂದು ಕಡೆ ಅಂತ್ಯಕ್ರಿಯೆ ಮಾಡಿ ಎಂದಿದ್ದಕ್ಕೆ ಹೀಗಾ ಮಾಡೋದು!
ಸಾಧು ಶ್ರೀನಾಥ್​

Updated on: Apr 22, 2020 | 12:47 PM

ಬೆಳಗಾವಿ: ಲಾಕ್​ಡೌನ್​ ನಡುವೆಯೂ ಅಂತ್ಯಸಂಸ್ಕಾರ ಮಾಡುವ ವಿಚಾರಕ್ಕೆ ವ್ಯಕ್ತಿಯ ಮನೆ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಕವಳೆವಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನ ಭೂಮಿ ದಾನವಾಗಿ ನೀಡಿದ್ದ ಮನೋಹರ ಮೋರೆ ಎಂಬುವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲುತೂರಿದ್ದಾರೆ.

ತಮ್ಮ ಜಮೀನಿನ ಇನ್ನೊಂದು ಭಾಗದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಮನೋಹರ ಹೇಳಿದ್ದ. ಹಾಗಾಗಿ ಜಮೀನು ಮಾಲೀಕರೊಂದಿಗೆ ಕಿರಿಕ್ ಮಾಡಿಕೊಂಡು ಉದ್ಧಟತನ ಮೆರೆದಿದ್ದಾರೆ. ಅಂತ್ಯಸಂಸ್ಕಾರ ನಡೆಸಲು ಬಂದವರು ಮನೋಹರ ಮನೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿ, ಕಾರಿನ ಗ್ಲಾಸು ಒಡೆದು ಹಾಕಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದ್ರೂ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us